ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆ: ಶಾಸಕರಿಂದ ನಾನಾ ಸಲಹೆ

Date:

ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಧಾನಸಭೆಯಲ್ಲಿ ಡಿಸೆಂಬರ್ 14ರಂದು ಸಹ ಚರ್ಚೆ ಮುಂದುವರೆಯಿತು.

ಈ ಚರ್ಚೆಯಲ್ಲಿ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಶಾಸಕರು ಭಾಗಿಯಾಗಿ ಹಲವಾರು ಸಲಹೆಗಳನ್ನು ನೀಡಿದರು.

ಆಳಂದ ಶಾಸಕರಾದ ಬಿ.ಆರ್.ಪಾಟೀಲ್ ಅವರು ಮಾತನಾಡಿ, ಇಂದು ಅಂತರ್ಜಲ ದುರ್ಬಳಕೆ ಅಧಿಕವಾಗುತ್ತಿದೆ. ನೀರು ಮಾರಾಟದ ವಸ್ತು ಆಗುತ್ತಿದೆ. ನೀರಿಗಾಗಿ ಊರಿಂದ ಊರಿಗೆ ಅಲೆಯುವುದು ದುಸ್ಥಿತಿ ಎದುರಾಗಿದೆ. ಆದ್ದರಿಂದ ರಾಜ್ಯದಲ್ಲಿ ಅಂತರ್ಜಲ ಕಾಪಾಡಲು ಕೇಂದ್ರ ಸರ್ಕಾರದ ಮಾದರಿಯಲ್ಲಿ ಅಂತರ್ಜಲ ಬಳಕೆ ನಿಯಂತ್ರಣ ಕಾಯ್ದೆ ಜಾರಿ ತರುವ ಮೂಲಕ ಭವಿಷ್ಯದಲ್ಲಿ ಎದುರಾಗುವ ಸಮಸ್ಯೆ ಪರಿಹಾರಕ್ಕೆ ಮುಂದಾಗುವಂತೆ ಸಲಹೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಪ್ರಸ್ತುತ ಭೀಕರ ಬರವಿದ್ದು, ಬೇಸಿಗೆಯಲ್ಲಿ ಭೀಕರ ನೀರಿನ ಸಮಸ್ಯೆ ಎದುರಾಗಲಿದೆ. ಆದ್ದರಿಂದ ಈಗಿನಿಂದಲೇ ರಾಜ್ಯದಲ್ಲಿರುವ ಜಲಾಶಯಗಳಲ್ಲಿನ ನೀರನ್ನು ಕುಡಿಯಲು ಮಾತ್ರ ಬಳಸಲು ಮೀಸಲಿಡಬೇಕು. ಜತೆಗೆ ಅಂತರ್ಜಲ ಅಭಿವೃದ್ಧಿಗಾಗಿ ಮಹಾರಾಷ್ಟ್ರದಲ್ಲಿ ಜಾರಿಯಲ್ಲಿರುವ ಸಿರಪುರ್ ಮಾದರಿ ಯೋಜನೆ ಜಾರಿ ತರುವಂತೆ ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ: 4 ಆರೋಪಿಗಳು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಉತ್ತರ ಕರ್ನಾಟಕವು ರಾಜ್ಯದ ರಾಜಧಾನಿಯಿಂದ ದೂರ ಇರುವುದರಿಂದ ಶಾಸಕರು ಸೇರಿದಂತೆ ಜನಸಾಮಾನ್ಯರು ತಮ್ಮ ಕೆಲಸ ಕಾರ್ಯಗಳಿಗೆ ಬೆಂಗಳೂರಿಗೆ ತೆರಳಲು ಸಾಧ್ಯವಾಗದೇ ಅನೇಕ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಸಚಿವಾಲಯ ಮತ್ತು ನಿರ್ದೇಶನಾಲಯಗಳಲ್ಲಿ ನಮ್ಮ ಅಧಿಕಾರಿಗಳು, ಸಿಬ್ಬಂದಿ ಇಲ್ಲದ ಕಾರಣ ನಮಗೆ ಸೌಲಭ್ಯಗಳು ದೊರೆಯುತ್ತಿಲ್ಲ. ಈಗಾಗಿ ಈ ಎರಡು ಕಚೇರಿಗಳಲ್ಲಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಭಾಗದ ಸಿಬ್ಬಂದಿ-ಅಧಿಕಾರಿಗಳನ್ನು ಮೀಸಲು ಸೌಲಭ್ಯದ ಮೇಲೆ ನೇಮಕಾತಿ ಮಾಡಬೇಕು ಎಂದು ಸಲಹೆ ನೀಡಿದರು.

ಕೃಷ್ಣ ಮೇಲ್ದಂಡೆ ಯೋಜನೆ ಸಮರ್ಪಕವಾಗಿ ಜಾರಿಯಾಗಬೇಕಿದೆ. ಗೋದಾವರಿ, ಅಮರ್ಜ, ಬೆಣ್ಣೆತೊರಾ, ಭೀಮಾ ನೀರಾವರಿ ಯೋಜನೆಗಳಿಂದ ರೈತರಿಗೆ ಸೂಕ್ತವಾಗಿ ನೀರು ದೊರೆಯುವಂತಾಗಬೇಕಿದೆ. ಈ ಬಗ್ಗೆ ಸರ್ಕಾರವು ಚರ್ಚೆಗೆ ತೆಗೆದುಕೊಳ್ಳಬೇಕು. ದೊಡ್ಡ ದೊಡ್ಡ ಯೋಜನೆಗಳ ಬದಲು ಸಣ್ಣ ಯೋಜನೆಗಳನ್ನು ಕೈಗೆತ್ತಿಕೊಂಡರೇ ಅಧಿಕ ಪ್ರಯೋಜನ ಎಂದು ಹೇಳಿದರು. ಕಾವೇರಿ ಕೊಳ್ಳದ ನೀರಿನ ಬಗ್ಗೆ ನಡೆಸುವಂತೆ ಕೃಷ್ಣಾ ಕೊಳ್ಳದ ನೀರಾವರಿ ಯೋಜನೆ ಕುರಿತು ಸಹ ಚರ್ಚೆ ನಡೆಸಬೇಕು ಎಂದು ತಿಳಿಸಿದರು.

ಬೀದರ್‌ನಿಂದ ಬೆಂಗಳೂರಿಗೆ ಸುಗಮವಾಗಿ ಸಂಚರಿಸಲು ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಬೇಕು. ರಾಜ್ಯದ ಇತರೆ ಭಾಗಗಳಲ್ಲಿ ಬೇಡಿಕೆಗೆ ತಕ್ಕಂತೆ ನೀಡಿದ ಪ್ರಾಥಮಿಕ ಆರೋಗ್ಯ ಕೇಂದ್ರ-ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯಗಳನ್ನು ನಮ್ಮ ಭಾಗಕ್ಕೂ ನೀಡಬೇಕು. ಕಲಬುರಗಿಯ ತೊಗರಿ ಮಂಡಳಿಯನ್ನು ಸಶಕ್ತಗೊಳಿಸಬೇಕು ಎಂದು ಸಲಹೆ ಮಾಡಿದರು.

ಕಲಬುರಗಿಯ ಶಾಸಕ ಅಲ್ಲಮಪ್ರಭು ಪಾಟೀಲ್ ಮಾತನಾಡಿ, ನೀರಾವರಿಯಿಂದ ವಂಚಿತವಾದ ಕಲಬುರಗಿ ಜಿಲ್ಲೆಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕು. ರಾಜ್ಯ ಸರ್ಕಾರವು ಮಹಾರಾಷ್ಟ್ರದ ಸರ್ಕಾರದ ಜತೆಗೆ ಮಾತನಾಡಿ ಭೀಮಾ ನದಿಯ ನೀರು ನಮಗೆ ದಕ್ಕುವಂತೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ತಪ್ಪಿಸಲು ಬೆಣ್ಣೆತೊರಾ ನದಿಯಿಂದ ಕೆರೆಗಳ ತುಂಬಿಸಲು 140 ಕೋಟಿ ರೂ.ವೆಚ್ಚದ ಯೋಜನೆ ಜಾರಿಗೊಳಿಸಬೇಕು.

ಮೈಸೂರು ಭಾಗದಲ್ಲಿ ಮಾಡಿದಂತೆ ನಮ್ಮ ಭಾಗದಲ್ಲಿ ಸಹ ಶಿಕ್ಷಕರ ನೇಮಕ ಮಾಡಬೇಕು. ವಿದ್ಯುತ್, ಕಬ್ಬು ಬೆಳಗಾರರು, ತೊಗರಿ ಬೆಳಗಾರರ ಸಮಸ್ಯೆ ಬಗೆಹರಿಸಬೇಕು ಹಾಗೂ ತೊಗರಿ ಮಂಡಳಿ ಸಬಲಗೊಳಿಸಿ ಹೊಸ ತಳಿ ಸಂಶೋಧನೆ ಮಾಡಬೇಕೆಂದು ಸರ್ಕಾರಕ್ಕೆ ಸಲಹೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...