ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

Date:

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ ರಜೆ ನೀಡಿ ಎಲ್ಲರಿಂದಲೂ ಕಡ್ಡಾಯ ಮತದಾನ ಮಾಡಿಸಲು ಐಟಿ-ಬಿಟಿ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ತಿಳಿಸಿದರು.

“ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವೇತನ ಸಹಿತ ರಜೆ ನೀಡಲು ಈಗಾಗಲೇ ಸರ್ಕಾರ ಆದೇಶ ಹೊರಡಿಸಿದೆ. ಆ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಲಾಗಿದ್ದು, ಅದಕ್ಕೆ ಎಲ್ಲ ಸಂಸ್ಥೆಗಳು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಆಯಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ತಪ್ಪದೆ ಮತ ಚಲಾಯಿಸಲು ಅರಿವು ಮೂಡಿಸುವ ಕೆಲಸ ಮಾಡಲು ತಿಳಿಸಲಾಗಿದೆ” ಎಂದರು.

“ಬೆಂಗಳೂರು ನಗರದಲ್ಲಿ ಐಟಿ-ಬಿಟಿ ಹಬ್ ಇದ್ದು, ಲಕ್ಷಾಂತರ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ನಗರದಲ್ಲಿ ಹೆಚ್ಚು ಐಟಿ-ಬಿಟಿ ಸಂಸ್ಥೆಗಳಿರುವ ಕಡೆ ಹಾಗೂ ಕಡಿಮೆ ಮತದಾನವಾಗಿರುವ ಸಂಸ್ಥೆಗಳಲ್ಲಿ ಹೆಚ್ಚಾಗಿ ಮತದಾನದ ಕುರಿತು ಜಾಗೃತಿ ಮೂಡಿಸಲು ತಿಳಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐಟಿ-ಬಿಟಿ ಸಂಸ್ಥೆಗಳಲ್ಲಿ ಹೆಚ್.ಆರ್.ಎಂ.ಎಸ್ ವ್ಯವಸ್ಥೆಯಿದ್ದು, ಆ ಮೂಲಕ ಸಿಬ್ಬಂದಿಗಳಿಗೆ ತಪ್ಪದೆ ಮತದಾನ ಮಾಡಲು ಸಂದೇಶ ಕಳುಹಿಸುವ, ಎಲ್ಲ ಭಾಷೆಯನ್ನೊಳಗೊಂಡ ‘ಮೈ ಭಾರತ್ ಹೂ’ ಚುನಾವಣಾ ಗೀತೆ ಹಾಗೂ ಇನ್ನಿತರೆ ಜಾಗೃತಿ ಸಂದೇಶಗಳ ದೃಶ್ಯಾವಳಿಗಳನ್ನು ಎಲ್ಲ ಸಂಸ್ಥೆಗಳ ಎಲ್‌ಇಡಿ ಪರದೆಗಳಲ್ಲಿ ಹಾಕಲು ಸೂಚಿಸಲಾಗಿದೆ” ಎಂದು ಹೇಳಿದರು.

“ಸಾಕಷ್ಟು ಸಿಬ್ಬಂದಿ ಐಟಿ-ಬಿಟಿ ಸಂಸ್ಥೆಗಳಲ್ಲಿ ಬೇರೆ ರಾಜ್ಯಗಳಿಂದ ಇಲ್ಲಿ ಕೆಲಸ ಮಾಡುತ್ತಿದ್ದು, ಇಲ್ಲಿ ಮತದಾನದ ಹಕ್ಕನ್ನು ಹೊಂದಿರುವುದಿಲ್ಲ. ಇನ್ನು ಕೆಲವರು ಮನೆಯಿಂದ ಕೆಲಸ ಮಾಡುತ್ತಿರುವ ಕಾರಣ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಸಾಧ್ಯವಾಗುವುದಿಲ್ಲ. ಅದಲ್ಲದೆ ಮತಗಟ್ಟೆಗಳಲ್ಲಿ ಯಾವುದೇ ವ್ಯವಸ್ಥೆ ಇರುವುದಿಲ್ಲ ಎಂಬ ಮನೋಭಾವವಿರುತ್ತದೆ. ಈ ಪೈಕಿ ಮತಗಟ್ಟೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಇರುವುದಾಗಿ ಮಾಹಿತಿ ನೀಡಲಾಗಿದ್ದು, ಈ ಬಾರಿ ಐಟಿ-ಬಿಟಿ ಸಂಸ್ಥೆಗಳಲ್ಲಿ ಹೆಚ್ಚು ಮತದಾನವಾಗುವ ನಿರೀಕ್ಷೆಯಿದೆ” ಎಂದು ತಿಳಿಸಿದರು.

ಐಟಿ-ಬಿಟಿ ಇಲಾಖೆಯ ಕಾರ್ಯದರ್ಶಿಯಾದ ಏಕ್ ರೂಪ್ ಕೌರ್ ರವರು ಮಾತನಾಡಿ, “ಲೋಕಸಭಾ ಚುನಾವಾಣೆ ಹಿನ್ನೆಲೆ ಐಟಿ-ಬಿಟಿ ಸಂಸ್ಥೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ ಮತದಾನದ ಕುರಿತು ತಿಳುವಳಿಕೆಯನ್ನು ನೀಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

“ನಗರದಲ್ಲಿ ಸುಮಾರು 4,500 ಐಟಿ-ಬಿಟಿ ಸಂಸ್ಥೆಗಳಿದ್ದು, ಎಲ್ಲ ಸಂಸ್ಥೆಗಳಿಗೂ ಮತದಾನದ ದಿನವಾದ ಏಪ್ರಿಲ್ 26ರಂದು ರಜೆ ನೀಡಿ ಎಲ್ಲ ಮತದಾರರಿಗೆ ಮತ ಚಲಾಯಿಸಲು ಅನುಕೂಲ ಮಾಡಿಕೊಡಲು ಮನವಿ ಮಾಡಲಾಗಿದೆ. ಜೊತೆಗೆ ಎಲ್ಲ ಸಿಬ್ಬಂದಿಗಳಿಗೆ ಮೇಲ್ ಮೂಲಕವೂ ಮತದಾನ ಮಾಡಲು ಅರಿವು ಮೂಡಿಸಲು ತಿಳಿಸಲಾಗಿದೆ” ಎಂದು ಹೇಳಿದರು.

ಸಿಬ್ಬಂದಿಗೆ ವೇತನ ಸಹಿತ ರಜೆ

“ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135ಬಿ ಅಡಿಯಲ್ಲಿ ಎಲ್ಲ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ನೀಡಲು ಸರ್ಕಾರವು ಮಾರ್ಚ್‌ 30ರಂದು ಅಧಿಸೂಚನೆ ಹೊರಡಿಸಿತದೆ. ಅಧಿಸೂಚನೆಯಂತೆ ಎಲ್ಲ ಐಟಿ-ಬಿಟಿ ಸಂಸ್ಥೆಗಳ ಸಿಬ್ಬಂದಿಗೆ ರಜೆ ನೀಡಬೇಕು” ಎಂದು ಸೂಚಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...