ಹೋಳಿ ‘ರೈನ್‌ ಡ್ಯಾನ್ಸ್‌’ ಪ್ರಕಟಿಸಿದ್ದ ಹೊಟೇಲ್‌ಗಳಿಗೆ ನೊಟೀಸ್‌; ಡ್ರೈ ಹೋಳಿ ಆಚರಿಸಲು ಜಲಮಂಡಳಿ ಸೂಚನೆ

Date:

ಹೋಳಿ ಹಬ್ಬ ಆಚರಣೆಗೆ ‘ರೈನ್ ಡ್ಯಾನ್ಸ್‌’ ಆಯೋಜಿಸುವುದಾಗಿ ಹೇಳಿದ್ದ ಹೋಟೇಲ್‌ಗಳಿಗೆ ಬೆಂಗಳೂರು ಜಲಮಂಡಳಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಲ್ಲದೆ, ‘ಡ್ರೈ ಹೋಳಿ’ ಆಚರಿಸುವಂತೆ ಸೂಚನೆ ನೀಡಿದ್ದಾರೆ.

ಹೋಳಿ ಆಚರಣೆಗೆ ರೈನ್‌ ಡ್ಯಾನ್ಸ್‌ ಆಯೋಜಿಸುವುದಾಗಿ ಪ್ರಕಟಿಸಿದ್ದ ಮೈಸೂರು ರಸ್ತೆಯ ಜೆ.ಕೆ ಗ್ರಾಂಡ್‌ ಅರೆನಾ ಹಾಗೂ ಜಯಮಹಲ್‌ ಪ್ಯಾಲೇಸ್‌ ಹೋಟೆಲ್‌ಗಳಿಗೆ ಮಾರ್ಚ್‌ 22ರಂದು ಜಲಮಂಡಳಿ ಅಧಿಕಾರಿಗಳು ಭೇಟಿ ನೀಡಿ ರೈನ್‌ ಡ್ಯಾನ್ಸ್‌ಗೆ ಕಾವೇರಿ ಹಾಗೂ ಕೊಳವೆ ಬಾವಿ ನೀರು ಬಳಸದಂತೆ ನೊಟೀಸ್‌ ನೀಡಿದ್ದಾರೆ.

ಸಾಂಸ್ಕೃತಿಕ ಹಬ್ಬ ಆಚರಣೆಗೆ ಯಾವುದೇ ನಿಷೇಧ ಇಲ್ಲ. ಆದರೆ, ವಾಣಿಜ್ಯ ಉದ್ದೇಶಗಳಿಗಾಗಿ ರೈನ್‌ ಡ್ಯಾನ್ಸ್‌ ಹಾಗೂ ಪೂಲ್‌ ಡ್ಯಾನ್ಸ್‌ ಆಯೋಜಿಸುವುದರಿಂದ ನೀರು ಪೊಲಾಗುತ್ತದೆ. ಇದನ್ನ ತಡೆಯುವ ನಿಟ್ಟಿನಲ್ಲಿ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ ಎಂದು ಹೊಟೇಲ್‌ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಹೊಟೇಲ್‌ ಸಿಬ್ಬಂದಿ ಮಂಡಳಿಯ ನಿರ್ದೇಶನದಂತೆ ರೈನ್‌ ಡ್ಯಾನ್ಸ್‌ ಹಾಗೂ ಪೂಲ್‌ ಡ್ಯಾನ್ಸ್‌ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ನಲ್ಲಿಗಳಿಗೆ ಏರಿಯೇಟರ್‌ ಅಳವಡಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದತ್ತು ಮಗು ಪ್ರಕರಣ | ಸೋನು ಶ್ರೀನಿವಾಸ್ ಗೌಡ 4 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಿ ಸಿಜೆಎಂ ಕೋರ್ಟ್ ಆದೇಶ

ನೀರು ಅನಗತ್ಯ ಪೋಲು ಮಾಡುವುದರ ವಿರುದ್ಧ ಅಗತ್ಯ ಕ್ರಮ

ಕುಡಿಯುವ ನೀರಿನ ದುರ್ಬಳಕೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ಸೂಚನೆಗಳನ್ನ ನೀಡಲಾಗಿದೆ. ಸರ್ಕಾರಿ ಕಚೇರಿಗಳು, ಮನೆಗಳು ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಕುಡಿಯುವ ನೀರನ್ನು ಅನಗತ್ಯವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ದಂಡವನ್ನ ವಿಧಿಸಲಾಗುವುದು ಎಂದು ಜಲಮಂಡಳಿ ಹೇಳಿದೆ.

“ಜನಸಾಮಾನ್ಯರು ಜಲ ಮಂಡಳಿಯ ಈ ಕ್ರಮಗಳ ಸಮರ್ಪಕ ಅನುಷ್ಠಾನಕ್ಕಾಗಿ ಕಣ್ಣುಗಳಾಗಿ ಕಾರ್ಯನಿರ್ವಹಿಸಬೇಕು. ನಗರದ ಯಾವುದೇ ಪ್ರದೇಶದಲ್ಲಿ ಅನಧಿಕೃತವಾಗಿ ಬೋರ್‌ವೇಲ್‌ಗಳನ್ನ ಕೊರೆಯುತ್ತಿರುವುದು ಅಥವಾ ನೀರಿನ ದುರ್ಬಳಕೆ ಮಾಡುತ್ತಿರುವುದು ಕಂಡುಬಂದಲ್ಲಿ ಮಂಡಳಿಯ ದೂರವಾಣಿ ಸಂಖ್ಯೆಗೆ ದೂರು ನೀಡಿದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ” ಮಂಡಳಿ ತಿಳಿಸಿದೆ.

ನೀರಿನ ಸಮಸ್ಯೆಯ ತೀವ್ರತೆ ಇಳಿಕೆ

“ಬೆಂಗಳೂರು ನಗರದ ಹೃದಯ ಭಾಗದಲ್ಲಿ ಹಾಗೂ ಪ್ರಮುಖ ಪ್ರದೇಶಗಳಲ್ಲಿ ಇದ್ದಂತಹ ನೀರಿನ ಸಮಸ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಮೊದಲ ಹಂತದಲ್ಲಿ ಪ್ರತಿನಿತ್ಯ 300ಕ್ಕೂ ಹೆಚ್ಚು ದೂರುಗಳು ದಾಖಲಾಗುತ್ತಿದ್ದವು. ಈಗ ಅವುಗಳ ಸಂಖ್ಯೆ 100ಕ್ಕೆ ಇಳಿದಿದೆ. ಮುಂದಿನ ದಿನಗಳಲ್ಲಿ ಸಮರ್ಪಕ ನೀರು ಸರಬರಾಜು ಮಾಡುವ ಮೂಲಕ ದೂರುಗಳ ಮತ್ತು ಸಮಸ್ಯೆಗಳ ಪ್ರಮಾಣವನ್ನು ಇನ್ನಷ್ಟು ಕಡಿಮೆ ಮಾಡಲಾಗುವುದು” ಎಂದು ಜಲ ಮಂಡಳಿ ಅಧ್ಯಕ್ಷರು ಭರವಸೆ ನೀಡಿದರು.

“ಈ ಎಲ್ಲ ಸುಧಾರಣೆಯ ಕ್ರಮಗಳಲ್ಲಿ ನಗರದ ಜನರ ಸಹಕಾರ ಬಹಳಷ್ಟು ಮುಖ್ಯವಾಗಿದೆ. ನೀರನ್ನ ಮಿತವಾಗಿ ಬಳಸುವುದು ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಯುವುದು ಬಹಳ ಮುಖ್ಯವಾಗಿದೆ. ಈ ಬಗ್ಗೆ ಜನರು ಸಹಕಾರ ನೀಡುತ್ತಿದ್ದು ಇನ್ನಷ್ಟು ಸುಧಾರಣಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು” ಎಂದು ಜಲ ಮಂಡಳಿ ಅಧ್ಯಕ್ಷರು ಕರೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...