ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

Date:

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಮತಗಟ್ಟೆ ಅಧಿಕಾರಿಗಳಾದ ಪ್ರಿಸೈಡಿಂಗ್ ಆಫೀಸರ್ ಹಾಗೂ ಅಸಿಸ್ಟಂಟ್ ಪ್ರಿಸೈಂಡಿಗ್ ಆಫೀಸರ್‌ಗಳಿಗೆ ಏ.17ರಂದು 2ನೇ ತರಬೇತಿ ನಡೆಯುತ್ತಿರುವ 3 ಸ್ಥಳಗಳಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, “ಮತದಾನದ ದಿನ ಮತಗಟ್ಟೆಗಳ ಬಳಿ ನಡೆಯುವ ಎಲ್ಲ ಚಟುವಟಿಕೆಗಳ ಕುರಿತು ಮಾಸ್ಟರ್ ಟ್ರೈನರ್‌ಗಳು ತರಬೇತಿಯಲ್ಲಿ ನೀಡುವ ಮಾಹಿತಿಯನ್ನು ಸರಿಯಾಗಿ ಅರಿತುಕೊಳ್ಳಬೇಕು” ಎಂದು ತಿಳಿಸಿದರು.

“ಮತದಾನದ ದಿನ ಯಾವುದೇ ಸಮಸ್ಯೆಯಾಗದಂತೆ ಎಲ್ಲ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡುವ ಸಮಯದಲ್ಲಿ ವಿವಿ ಪ್ಯಾಟ್, ಕಂಟ್ರೋಲ್ ಯುನಿಟ್ ಹಾಗೂ ಬ್ಯಾಲೆಟ್ ಯೂನಿಟ್ ಹೇಗೆ ಕಾರ್ಯನಿರ್ವಹಿಸಲಿದೆ. ಯಾವ ರೀತಿ ಕನೆಕ್ಷನ್ ನೀಡಬೇಕು ಎಂಬುದನ್ನು ಸರಿಯಾಗಿ ನೋಡಿಕೋಳ್ಳಬೇಕು” ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮತದಾನದ ಕುರಿತು ಹೆಚ್ಚು ಮಾಹಿತಿಗಾಗಿ ಮತಗಟ್ಟೆ ಕೈಪಿಡಿಯನ್ನು ನೀಡಲಾಗಿದೆ. ಮತಗಟ್ಟೆ ಅಧಿಕಾರಿಗಳ ಕೈಪಿಡಿಯು ಭಾರತ ಚುನಾವಣಾ ಅಯೋಗ ಹಾಗೂ ಕರ್ನಾಟಕ ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲೂ ಲಭ್ಯವಿದ್ದು, ಅಲ್ಲಿಯೂ ಡೌನ್ಲೋಡ್ ಮಾಡಿಕೊಂಡು ವಿವರಗಳನ್ನು ಪಡೆದುಕೊಳ್ಳಬಹುದು” ಎಂದು ತಿಳಿಸಿದರು.

ಗೈರು ಹಾಜರಾದವರಿಗೆ ಶಿಸ್ತು ಕ್ರಮ

ಎಲ್ಲ ಮತಗಟ್ಟೆಯ ಪ್ರಿಸೈಡಿಂಗ್ ಆಫೀಸರ್ ಹಾಗೂ ಅಸಿಸ್ಟಂಟ್ ಪ್ರಿಸೈಂಡಿಗ್ ಆಫೀಸರ್‌ಗಳು ತಪ್ಪದೆ ತರಬೇತಿಗೆ ಹಾಜರಾಗಬೇಕು. ಗೈರು ಹಾಜರಾದ ಅಧಿಕಾರಿ/ಸಿಬ್ಬಂದಿ ಮೇಲೆ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 134ರಂತೆ ಶಿಸ್ತು ಕ್ರಮ ಜರುಗಿಸಲು ಸಹಾಯಕ ಚುನಾವಣಾಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕುದುರೆಗೆ ಮಾರಣಾಂತಿಕ ಗ್ಲಾಂಡರ್ಸ್ ರೋಗ ಧೃಢ; ಡಿ.ಜೆ.ಹಳ್ಳಿ `ರೋಗಪೀಡಿತ ವಲಯ’

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಸಹಾಯಕ ಚುನಾವಣಾಧಿಕಾರಿಗಳಾದ ಚಿದಾನಂದ ಎಸ್. ವಠಾರೆ, ಕಮಲಾ ಬಾಯಿ, ಮಮತಾ ಕುಮಾರಿ, ಮತದರಾರರ ನೋಂದಣಾಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...