ಆನ್‌ಲೈನ್ ಗೇಮ್‌ ವ್ಯಸನಕ್ಕೆ ಬೆಂಗಳೂರಿನ ಇಡೀ ಕುಟುಂಬ ಸರ್ವನಾಶ: ಅಳಿಯನ ಕೊಲೆಗೆ ನೊಂದು ಬಿಹಾರದಲ್ಲಿ ನಾಲ್ವರ ಆತ್ಮಹತ್ಯೆ

Date:

ಆನ್‌ಲೈನ್‌ ಗೇಮ್‌ ಚಟಕ್ಕೆ ದಾಸನಾಗಿದ್ದ ಅಕ್ಕನ ಮಗನನ್ನು ಕೊಲೆಗೈದ ಪಾಪಪ್ರಜ್ಞೆ ಹಾಗೂ ಜಿಗುಪ್ಸೆಯಿಂದ ನೊಂದ ಮಾವ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಬಿಹಾರದ ಯಾತ್ರಾಸ್ಥಳವೊಂದರಲ್ಲಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾದ ಮನಕಲಕುವ ಘಟನೆ ನಡೆದಿದೆ.

​ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾಗಿದ್ದ ನಾಗಪ್ರಸಾದ್ (50), ಇವರ ತಾಯಿ ಸುಮಂಗಲಾ (78) ಹಾಗೂ ಸಹೋದರಿಯರಾದ ಶಿಲ್ಪಾ (48) ಮತ್ತು ಶ್ರುತಾ (43) ಮೃತ ದುರ್ದೈವಿಗಳು. ಬಿಹಾರದ ನಾಲಂದಾ ಜಿಲ್ಲೆಯ ರಾಜಗಿರದಲ್ಲಿರುವ ಜೈನ ಧರ್ಮಶಾಲೆಯೊಂದರಲ್ಲಿ ಇವರ ಮೃತದೇಹಗಳು ಪತ್ತೆಯಾಗಿವೆ.

ಕೆಲವು ತಿಂಗಳ ಹಿಂದೆ (ಆಗಸ್ಟ್ 2025ರಲ್ಲಿ) ಬೆಂಗಳೂರಿನಲ್ಲಿ ನಡೆದಿದ್ದ ಅಮೋಘಕೀರ್ತಿ ಎಂಬ ಬಾಲಕನ ಕೊಲೆ ಪ್ರಕರಣ ಈ ದುರಂತಕ್ಕೆ ಮುನ್ನುಡಿ ಬರೆದಿದೆ. ಅಮೋಘಕೀರ್ತಿ ‘ಫ್ರೀಫೈರ್’ (Free Fire) ಎಂಬ ಆನ್‌ಲೈನ್‌ ಗೇಮ್‌ಗೆ ದಾಸನಾಗಿದ್ದ. ಗೇಮ್ ಆಡಲು ಹಣ ನೀಡುವಂತೆ ತನ್ನ ಮಾವ ನಾಗಪ್ರಸಾದ್ ಅವರಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ರೋಸಿಹೋದ ನಾಗಪ್ರಸಾದ್, ಬಾಲಕನ ಕತ್ತು ಸೀಳಿ ಕೊಲೆ ಮಾಡಿದ್ದ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸರು ನಾಗಪ್ರಸಾದ್‌ನನ್ನು ಬಂಧಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜನಪ್ರತಿನಿಧಿಗಳ ಘನತೆ ಇಲ್ಲದ ಮಾತಿಗೆ ಲಗಾಮು ಬೀಳಬೇಕು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೈಲು ಸೇರಿದ್ದ ನಾಗಪ್ರಸಾದ್‌ನನ್ನು ಆತನ ಸಹೋದರಿ ಶಿಲ್ಪಾ ಜಾಮೀನಿನ ಮೇಲೆ ಬಿಡಿಸಿಕೊಂಡು ಬಂದಿದ್ದರು ಎಂದು ತಿಳಿದುಬಂದಿದೆ. ಅಳಿಯನ ಸಾವಿನ ನೋವು ಮತ್ತು ಮಗನ ಕೃತ್ಯದಿಂದ ಉಂಟಾದ ಕಳಂಕದಿಂದ ತೀವ್ರ ಮನನೊಂದಿದ್ದ ಕುಟುಂಬ, ಮಾನಸಿಕ ಶಾಂತಿಗಾಗಿ ತೀರ್ಥಯಾತ್ರೆಗೆ ತೆರಳಿತ್ತು. ಜನವರಿ 31ರಂದು ಬಿಹಾರದ ರಾಜಗಿರಕ್ಕೆ ತೆರಳಿದ್ದ ಕುಟುಂಬ, ಅಲ್ಲಿನ ಧರ್ಮಶಾಲೆಯಲ್ಲಿ ತಂಗಿತ್ತು. ಫೆಬ್ರವರಿ 2ರಿಂದ ಇವರ ಕೋಣೆಯ ಬಾಗಿಲು ತೆರೆದಿರಲಿಲ್ಲ. ಶುಕ್ರವಾರ (ಫೆ. 6) ಕೋಣೆಯಿಂದ ದುರ್ವಾಸನೆ ಬರಲಾರಂಭಿಸಿದಾಗ ಬಾಗಿಲು ಒಡೆದು ನೋಡಿದಾಗ ನಾಲ್ವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಘಟನಾ ಸ್ಥಳದಲ್ಲಿ ನಿದ್ದೆ ಮಾತ್ರೆಗಳು ಪತ್ತೆಯಾಗಿದ್ದು, ಅತಿಯಾದ ಮಾತ್ರೆ ಸೇವನೆಯೇ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ. ಬಾಲಕನನ್ನು ಕೊಂದ ಪಾಪ ಪ್ರಜ್ಞೆ ಕಾಡಿದ್ದರಿಂದ ಇಡೀ ಕುಟುಂಬವೇ ಹೀಗೊಂದು ಕಠಿಣ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ನಾಗಪ್ರಸಾದ್ ಅವರ ಜೇಬಿನಲ್ಲಿದ್ದ ಚೀಟಿ ಮತ್ತು ಆಧಾರ್ ಕಾರ್ಡ್‌ ಆಧಾರದ ಮೇಲೆ ಮೃತರ ಗುರುತು ಪತ್ತೆಹಚ್ಚಲಾಗಿದ್ದು, ನಳಂದ ಪೊಲೀಸರು ಬೆಂಗಳೂರು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದಾರೆ.

ಒಂದು ಆನ್‌ಲೈನ್‌ ಗೇಮ್‌ ವ್ಯಸನ ಹೇಗೆ ಹದಿಹರೆಯದ ಜೀವವನ್ನು ಬಲಿ ಪಡೆಯಿತಲ್ಲದೆ, ಅಂತಿಮವಾಗಿ ಇಡೀ ಕುಟುಂಬವನ್ನೇ ಬಲಿ ತೆಗೆದುಕೊಂಡಿತು ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಬಾಲಕನ ಸಾವಿನ ನಂತರ ದಿಕ್ಕು ತೋಚದಂತಾಗಿದ್ದ ಕುಟುಂಬ, ಬಿಹಾರದ ತನಕ ಹೋಗಿ ಸಾವಿನ ಮನೆಯ ಕದ ತಟ್ಟಿರುವುದು ವಿಪರ್ಯಾಸ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದಿನಿಂದ ಪ್ಲಾಟ್‌ಫಾರ್ಮ್‌ ದರ ಏರಿಕೆ: ಗ್ರಾಹಕರಿಗೆ ಸ್ವಿಗ್ಗಿ, ಜೊಮಾಟೊ ಶಾಕ್‌!

ಜೊಮಾಟೊ ತನ್ನ ಪ್ಲಾಟ್‌ಫಾರ್ಮ್‌ ಬೆಲೆಯನ್ನು 19% ಹಚ್ಚಿಸಿದೆ. ಈ ಮೂಲಕ ಪ್ರತಿ...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...