ಪಕ್ಷದ ಕಾರ್ಯಕರ್ತರಿಗೆ ಅವಕಾಶ, ನಾನು-ನಮ್ಮ ಕುಟುಂಬದವರು ಲೋಕಸಭೆ ಸ್ಪರ್ಧಿಸಲ್ಲ: ಸತೀಶ್​​​ ಜಾರಕಿಹೊಳಿ

Date:

ನಮ್ಮ ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ಸಿಗಲಿದೆ. ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್​​​ ಜಾರಕಿಹೊಳಿ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಾನು, ನಮ್ಮ ಕುಟುಂಬದ ಸದಸ್ಯರು ಯಾರೂ ಬೆಳಗಾವಿ, ಚಿಕ್ಕೋಡಿ ಎರಡು ಲೋಕಸಭಾ ಕ್ಷೇತ್ರದಲ್ಲೂ ಸ್ಪರ್ಧಿಸುವುದಿಲ್ಲ. ಈ ಬಾರಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಸಿಗಲಿದೆ” ಎಂದರು.

ರಾಮಮಂದಿರ ಉದ್ಘಾಟನೆ ಆಮಂತ್ರಣದ ಬಗ್ಗೆ ಮಾತನಾಡಿ, “ರಾಮಮಂದಿರ ಉದ್ಘಾಟನೆ ಒನ್​ ಮ್ಯಾನ್​ ಶೋ ಆಗುತ್ತಿದೆ. ಕಾರ್ಯಕ್ರಮಕ್ಕೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಆಹ್ವಾನ ಕೊಡಬೇಕು. ಲೋಕಸಭಾ ಚುನಾವಣೆ ಬೇರೆ ಬರುತ್ತಿದೆ. ಎಲ್ಲ ರಾಜಕೀಯ ಪಕ್ಷಗಳಿಗೆ ಆಹ್ವಾನ ಕೊಡಬೇಕು. ಇನ್ನೂ ಸಮಯ ಇದೆ ಆಹ್ವಾನ ಕೊಡಲಿ. ಯಾವ ಸಿಎಂಗೂ ಆಹ್ವಾನ ಕೊಟ್ಟಿಲ್ಲ. ಉತ್ತರ ಪ್ರದೇಶ ಸಿಎಂಗೆ ಮಾತ್ರ ಆಹ್ವಾನ ಇದೆ. ನನಗೆ ಆಹ್ವಾನ ಬಂದ್ರೆ ಹೋಗಲ್ಲ. ನಮ್ಮ ಊರಿನಲ್ಲಿ ರಾಮಮಂದಿರ ಇದೆ, ಅಲ್ಲೇ ಪೂಜೆ ಮಾಡುತ್ತೇನೆ. ಸದ್ಯ ರಶ್ ಇರುತ್ತೆ, ಮುಂದೆ ಯಾವಾಗಾದರೂ ಹೋಗುವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಗೆ ಗುಡಿ ಕಟ್ಟುವ ಮುನ್ನ ದರಿದ್ರ ನಾರಾಯಣರತ್ತ ನೋಡುವರೇ ದೊರೆಗಳು?

ಶ್ರೀಕಾಂತ್ ಪೂಜಾರಿ ಬಂಧನ ಬಗ್ಗೆ ಪ್ರತಿಕ್ರಿಯಿಸಿ, “ಹಳೇ ಕೇಸ್ ಗಳಿವೆ ಎಂದು ಪೋಲಿಸರು ಬಂಧಿಸಿದ್ದಾರೆ. ಇದರಲ್ಲಿ ಗೊಂದಲ ಮಾಡುವ ಅವಶ್ಯಕತೆ ಇಲ್ಲ. ಸರಿಯಾದ ರೀತಿಯಲ್ಲಿ ಇದ್ದರೆ ಪ್ರತಿಭಟನೆ ನಡೆಸಲಿ. ಜನರ ಸಮಸ್ಯೆಗಳ ಸಂಬಂಧ ಪ್ರತಿಭಟನೆ ನಡೆಸಲಿ. ಅದು ಬಿಟ್ಟು ಪ್ರಕರಣಗಳಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ಮಾಡ್ತಿದಾರೆ. ಬೆಳಕು ಚೆಲ್ಲಲು ಕರ್ನಾಟಕದಲ್ಲಿ ಸಾಕಷ್ಟು ವಿಷಯಗಳಿವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...