ಉಪರಾಷ್ಟ್ರಪತಿಗಳಿಗೆ ಅವಮಾನ ಮಾಡಿದ ವಿಪಕ್ಷಗಳು: ಕುಲ್‍ಜೀತ್ ಸಿಂಗ್ ಚಾಹಲ್

Date:

ಗೌರವಾನ್ವಿತ ಉಪರಾಷ್ಟ್ರಪತಿಗಳಿಗೆ ಅವಮಾನ ಮಾಡಿದ ವಿಪಕ್ಷಗಳಿಗೆ ಜನತೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ದೆಹಲಿ ರಾಜ್ಯದ ಪ್ರಧಾನ ಕಾರ್ಯದರ್ಶಿ ಕುಲ್‍ಜೀತ್ ಸಿಂಗ್ ಚಾಹಲ್ ಹೇಳಿದರು.

ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ವಿರೋಧ ಪಕ್ಷಗಳ ಕ್ರಮವು ಎಲ್ಲ ರೈತ ಸಮುದಾಯ, ಒಬಿಸಿ ಸಮುದಾಯಕ್ಕೆ ಬೇಸರ ತಂದಿದೆ. ನಾನೂ ಒಬಿಸಿ ಸಮುದಾಯಕ್ಕೆ ಸೇರಿದವನು. ಸಂಸದರು ತಮ್ಮ ಸ್ಥಾನಕ್ಕೆ ತಕ್ಕುದಾಗಿ ವರ್ತಿಸುತ್ತಿಲ್ಲ. ಅಧಿಕಾರ ಕಳಕೊಂಡಾಗ ಅವರು ಹತಾಶರಾಗಿ ವರ್ತಿಸುತ್ತಾರೆ” ಎಂದರು.

“ರಾಹುಲ್ ಗಾಂಧಿಯವರು ಉಪರಾಷ್ಟ್ರಪತಿಗಳ ಅಣಕವನ್ನು ವಿಡಿಯೋ ಮಾಡುತ್ತಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕನಂತೆ, ಸಂಸದನಂತೆ ಅವರ ವರ್ತನೆ ಇಲ್ಲ. ರೈತ ಸಮುದಾಯ ಮತ್ತು ಒಬಿಸಿ ಸಮುದಾಯದ ನಾಯಕ, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಹೀಗೆ ಸದನದ ಒಳಗೆ ಮತ್ತು ಹೊರಗೆ ಅವಮಾನಿಸುವುದು ಸರಿಯಲ್ಲ” ಎಂದು ಆಕ್ಷೇಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ

“ದೆಹಲಿಯಲ್ಲಿ ಮುಂಗೇರಿಲಾಲ್ ಕಿ ಹಸೀನ್ ಸಪ್ನೇ ಎಂಬ ಮಾತಿದೆ. ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಮಾಡುವ ಕನಸು ಕಾಣುವ ಮೊದಲು ಕಾಂಗ್ರೆಸ್ ಅಗತ್ಯ ಸಂಸದರ ಕುರಿತು ಚಿಂತಿಸಬೇಕಿದೆ. ಅದು ಈಗ ಅತ್ಯಂತ ಕಡಿಮೆ ಸಂಸದರನ್ನು ಹೊಂದಿದೆ. ಇದು ಕೇವಲ ಹಗಲುಗನಸಷ್ಟೇ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

“ಉತ್ತರದ ದೊಡ್ಡ 3 ರಾಜ್ಯಗಳ ಚುನಾವಣಾ ಫಲಿತಾಂಶವು ಮೋದಿ ಗ್ಯಾರಂಟಿಯ ಪರವಾಗಿದೆ. ಬಿಜೆಪಿ 2019ಕ್ಕಿಂತ ಹೆಚ್ಚು ಸ್ಥಾನಗಳೊಂದಿಗೆ 2024ರಲ್ಲಿ ಅಧಿಕಾರಕ್ಕೆ ಏರಲಿದೆ. ಆಪ್ ಪಕ್ಷದ ಮುಖಂಡರು ಕಡು ಭ್ರಷ್ಟಾಚಾರಿಗಳು ಎಂಬುದು ಸ್ಪಷ್ಟವಾಗಿದೆ. ಲಿಕ್ಕರ್ ಸ್ಕ್ಯಾಮ್‍ನಡಿ ದೆಹಲಿಯ ಕೇಜ್ರಿವಾಲ್ ಸಂಪುಟದ ಇಬ್ಬರು ಸಚಿವರು ಮತ್ತು ಒಬ್ಬ ಸಂಸದ ಈಗಾಗಲೇ ಜೈಲಿನಲ್ಲಿದ್ದು, ಅವರಿಗೆ ಜಾಮೀನೂ ಸಿಗುತ್ತಿಲ್ಲ. ಕೇಜ್ರಿವಾಲ್ ಸರದಿ ಬರಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...