ನಮ್ಮ ಮೆಟ್ರೋ | ಸುರಂಗ ಕೊರೆಯುವ ಟಿಬಿಎಂ ಯಂತ್ರಗಳಿಗೆ ಅಡ್ಡ ಬಂದ ಬಂಡೆ; ಪಿಂಕ್ ಲೈನ್ ಕಾಮಗಾರಿ ವಿಳಂಬ

Date:

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮದ್ದಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ‘ನಮ್ಮ ಮೆಟ್ರೋ’ ಇನ್ನೂ 72 ಕಿ.ಮೀಗೂ ಹೆಚ್ಚು ವಿಸ್ತರಣೆಯಾಗಿದೆ. ಮೆಟ್ರೋದಲ್ಲಿ ದಿನಕ್ಕೆ ಲಕ್ಷಾಂತರ ಮಂದಿ ಸಂಚಾರ ಮಾಡುತ್ತಿದ್ದಾರೆ. ನಗರದ ಟ್ರಾಫಿಕ್ ಸಮಸ್ಯೆಯನ್ನು ಮತ್ತಷ್ಟು ಕಡಿಮೆ ಮಾಡಲು ಹಳದಿ ಹಾಗೂ ಪಿಂಕ್ ಮಾರ್ಗದ ಕಾಮಗಾರಿ ಆರಂಭಿಸಲಾಗಿದೆ. ಈಗಾಗಲೇ, ಹಳದಿ ಮಾರ್ಗದ ಚಾಲಕ ರಹಿತ ಮೆಟ್ರೋದಟ್ರಯಲ್ಟೆಸ್ಟ್’ ಆರಂಭವಾಗಿದೆ​. ಆದರೆ, ಬಹುನಿರೀಕ್ಷಿತ ಪಿಂಕ್ ಲೈನ್ ಕಾಮಗಾರಿಮತ್ತಷ್ಟು ವಿಳಂಬವಾಗಲಿದೆ ಎಂದು ತಿಳಿದುಬಂದಿದೆ.

ನಮ್ಮ ಮೆಟ್ರೊಹಳದಿ ಮಾರ್ಗದಲ್ಲಿ ಪ್ರಮುಖ ಪರೀಕ್ಷೆಗಳು ಗುರುವಾರ ಆರಂಭಗೊಂಡಿವೆ. ಚಾಲಕ ರಹಿತ ಎಂಜಿನ್ಹೊಂದಿರುವ ರೈಲು ಸಂಚರಿಸಿದೆ. ಬೊಮ್ಮಸಂದ್ರ – ಆರ್‌.ವಿ ರಸ್ತೆ ನಡುವಿನ 18.82 ಕಿ.ಮೀ ಹಳಿಯಲ್ಲಿ ಚಾಲಕ ರಹಿತ ಎಂಜಿನ್ಕೋಚ್ನಲ್ಲಿ ತಂತ್ರಜ್ಞರು ಗುರುವಾರ ಸಂಚರಿಸಿ ಟ್ರ್ಯಾಕ್ಷನ್ಮತ್ತು ಬ್ರೇಕಿಂಗ್ಟೆಸ್ಟ್ಮಾಡಿದ್ದಾರೆಇನ್ನು ಮೂರ್ನಾಲ್ಕು ತಿಂಗಳುಗಳ ಕಾಲ ನಾನಾ ಪರೀಕ್ಷೆಗಳು ನಡೆಯಲಿವೆ ಎಂದು ಬಿಎಂಆರ್ಸಿಎಲ್ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಬಹುನಿರೀಕ್ಷಿತ ಪಿಂಕ್‌ ಮಾರ್ಗದ ಅಂಡರ್ ಪಾಸ್ ಕಾಮಗಾರಿಗಾಗಿ ನೆಲದೊಳಕ್ಕೆ ಇಳಿಸಿದ್ದ ಎರಡು ಟಿಬಿಎಂ ಮಷಿನ್ಗಳಿಗೆ ಬಂಡೆಗಲ್ಲುಗಳು ಅಡ್ಡಿಯಾಗಿವೆ. ಹೀಗಾಗಿ, ಕಾಮಗಾರಿಮತ್ತಷ್ಟು ವಿಳಂಬವಾಗಲಿದೆ ಎನ್ನಲಾಗಿದೆ.

ಪಿಂಕ್‌ ಲೈನ್ ಕಾಳೇನ ಅಗ್ರಹಾರದಿಂದ ನಾಗವಾರವನ್ನು ಸಂಪರ್ಕಿಸುತ್ತದೆ. ಈ ಲೈನ್ 21 ಕಿ.ಮೀ ಮಾರ್ಗದ 13 ಕಿಮೀ ಸುರಂಗ ಮಾರ್ಗದಲ್ಲಿ ಮೆಟ್ರೋ ಲೈನ್ ಹಾದು ಹೋಗಿದೆ. ಇದು ಬೆಂಗಳೂರಿನ ಅತಿ ದೊಡ್ಡ ಮೆಟ್ರೋ ಸುರಂಗ ಕಾಮಗಾರಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂಬತ್ತು ಟಿಬಿಎಂ ಮಷಿನ್ಗಳಮೂಲಕ ಸುರಂಗ ಕಾಮಗಾರಿ ಕೆಲಸ ಮಾಡಲಾಗುತ್ತಿದೆ. ಈ ಪೈಕಿ ಏಳು ಟಿಬಿಎಂ ಮಷಿನ್​​​ಗಳು ಯಶ್ವಸಿಯಾಗಿ ಸುರಂಗ ಕೊರೆದು ಹೊರಗೆ ಬಂದಿವೆ. ಇನ್ನು ಎರಡು ಟಿಬಿಎಂ ಮಷಿನ್​​ಗಳಾದ ತುಂಗಾ ಮತ್ತು ಭದ್ರಾ ಆಗಸ್ಟ್ ಒಳಗೆ ಸುರಂಗ ಕೊರೆಯಬೇಕಾಗಿತ್ತು. ಆದರೆ, ಬಂಡೆಕಲ್ಲು ಅಡ್ಡಬಂದಿವೆ. ಹೀಗಾಗಿ, ಮೆಟ್ರೋ ಕಾಮಗಾರಿ ವಿಳಂಬವಾಗಲಿದೆ.

ಈ ಸುದ್ದಿ ಓದಿದ್ದೀರಾ? 254 ಹೊಸ ‘ನಮ್ಮ ಕ್ಲಿನಿಕ್‌’ಗಳಿಗೆ ಸ್ಥಳ ಗುರುತಿಸಿ; ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ದಿನೇಶ್ ಗುಂಡುರಾವ್

ಸುರಂಗ ಕೊರೆಯುವ ವೇಳೆ ಮತ್ತಷ್ಟು ಬಂಡೆಕಲ್ಲುಗಳು ಅಡ್ಡ ಬರುವ ಸಾಧ್ಯತೆ ಹೆಚ್ಚಾಗಿದೆ. ಈಗ ತುಂಗಾ ಟಿಬಿಎಂ ಯಂತ್ರವು ಶೇ.45ರಷ್ಟು ಸುರಂಗ ಕೊರೆದಿದೆ. ಭದ್ರಾ ಶೇ.22ರಷ್ಟು ಮಾತ್ರವೇ ಸುರಂಗ ಕೊರೆದಿದೆ.

ದಿನನಿತ್ಯ ಎರಡು ಟಿಬಿಎಂಗಳು 5 ಕಿ.ಮೀನಷ್ಟು ಸುರಂಗ ಕೊರೆಯುವ ಸಾಮರ್ಥ್ಯ ಹೊಂದಿವೆ. ಆದರೆ, ಈಗ ಬಂಡೆಕಲ್ಲು ಅಡ್ಡ ಬಂದಿರುವ ಪರಿಣಾಮ 3 ಕಿ.ಮೀ ನಷ್ಟು ಮಾತ್ರ ಸುರಂಗ ಕೊರೆಯಲು ಸಾಧ್ಯವಾಗಲಿದೆ ಎನ್ನಲಾಗಿದೆ.

ಪಿಂಕ್ ಮಾರ್ಗದಲ್ಲಿ 18 ಸ್ಟೇಷನ್ ಬರಲಿವೆ. ಈ ಪೈಕಿ ಆರು ಎಲಿವೇಟೆಡ್ 12 ಅಂಡರ್ ಗ್ರೌಂಡ್ ಸ್ಟೇಷನ್ ಇರಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...