ನಮ್ಮ ಮೆಟ್ರೋ | ಮೊದಲ ಚಾಲಕ ರಹಿತ ರೈಲಿನ ಫೋಟೋ ಬಿಡುಗಡೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ, ನಗರದಲ್ಲಿ 72 ಕಿ.ಮೀ ವ್ಯಾಪಿಸಿರುವ ಮೆಟ್ರೋದ ವಿಸ್ತರಣೆ ಕಾರ್ಯ ಮುಂದುವರೆದಿದೆ. ಇದೀಗ, ನಮ್ಮ ಮೆಟ್ರೋ ಹಳಿಗಳ ಮೇಲೆ ಚಾಲಕ ರಹಿತ ಮೆಟ್ರೋ ರೈಲು ಕಾರ್ಯಾಚರಣೆ ನಡೆಸಲು ಸಜ್ಜಾಗಿದೆ.

ಬೆಂಗಳೂರಿಗೆ ಚೀನಾದಿಂದ ಬಂದಿರುವ ಚಾಲಕ ರಹಿತ ಮೆಟ್ರೋ ರೈಲಿನ ಫೋಟೋ ಮತ್ತು ವಿಡಿಯೋವನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಬಿಡುಗಡೆ ಮಾಡಿದೆ.

ಚೀನಾದ ಶಾಂಘೈ ಬಂದರಿನಿಂದ ಜನವರಿ 24ರಂದು ಸಮುದ್ರ ಮಾರ್ಗವಾಗಿ ಚಾಲಕ ರಹಿತ ರೈಲು ಬೋಗಿಗಳನ್ನು ಸಾಗಿಸಲಾಗಿತ್ತು. ಫೆ.6ರಂದು ಚೆನ್ನೈ ಬಂದರಿಗೆ ಬಂದು ತಲುಪಿತ್ತು. ಫೆಬ್ರುವರಿ 14ರಂದು ಬಂದರಿನಿಂದ ರಸ್ತೆ ಮಾರ್ಗದ ಮೂಲಕವಾಗಿ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಚಾಲಕ ರಹಿತ ನಮ್ಮ ಮೆಟ್ರೋ ರೈಲು ಬಂದು ತಲುಪಿತ್ತು. ಇದೀಗ, ರೈಲಿನ ಮೇಲೆ ಹೊದಿಸಿದ್ದ ಹೊದಿಕೆಯನ್ನು ತೆಗೆದು ರೈಲನ್ನು ಟ್ರ್ಯಾಕ್‌ಗೆ ಇಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರು ಬೋಗಿಗಳನ್ನು ಟ್ರೇಲರ್ಗಳ ಮೂಲಕ ಸಾಗಿಸಲಾಗಿತ್ತು. ಪ್ರತಿ ಕೋಚ್ 38.7 ಮೆಟ್ರಿಕ್ ಟನ್ ತೂಕವಿದೆ. ಚಾಲಕ ರಹಿತ ರೈಲು ಆರ್ವಿ ರಸ್ತೆಬೊಮ್ಮಸಂದ್ರ ಲೈನ್ನಲ್ಲಿ ಮುಂದಿನ ದಿನಗಳಲ್ಲಿ ಸಂಚರಿಸಲಿದೆ. ಚೀನಾದ ಸಿಆರ್ಆರ್ಸಿ ನಾನ್ ಜಿಂಗ್ ಪುಜೆನ್ ಕಂ. ಲಿಮಿಟೆಡ್ನಿಂದ ರೈಲು ತಯಾರಾಗಿದೆ.

ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಈ ಚಾಲಕ ರಹಿತ ಮೆಟ್ರೋ ಓಡಾಡಲಿದೆ. ಇನ್ನು ಮೂರು-ನಾಲ್ಕು ತಿಂಗಳ ಕಾಲ 37 ಪರೀಕ್ಷೆಗಳು ನಡೆಯಲಿದೆ. ಟ್ರ್ಯಾಕ್​​ನಲ್ಲಿ ಸುಮಾರು 15 ಮಾದರಿ ಪರೀಕ್ಷೆಗಳು ನಡೆಯಬೇಕಿದೆ. ಒಟ್ಟು 45 ದಿನಗಳವರೆಗೆ ಸಿಗ್ನಲಿಂಗ್ ಪರೀಕ್ಷೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.

ರೈಲ್ವೆ ಸುರಕ್ಷತೆಯ ಮುಖ್ಯ ಆಯುಕ್ತರು, ರೈಲ್ವೆ ಸುರಕ್ಷತೆ ಮತ್ತು ರೈಲ್ವೆ ಮಂಡಳಿಯಿಂದ ಅನುಮೋದನೆಯ ಬಳಿಕ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸುಮನಹಳ್ಳಿ ಚಿತಾಗಾರ 10 ದಿನ ತಾತ್ಕಾಲಿಕ ಬಂದ್​

ಮುಂದಿನ ದಿನಗಳಲ್ಲಿ ಕಾಳೇನ ಅಗ್ರಹಾರದಿಂದ ನಾಗವಾರ ಮಾರ್ಗ, ಏರ್‌ಪೋರ್ಟ್‌ ಮಾರ್ಗದಲ್ಲೂ ಡ್ರೈವರ್ ಲೆಸ್‌ ಮೆಟ್ರೋ ಓಡಾಟ ನಡೆಸಲು ಸಕಲ ತಯಾರಿ ನಡೆಸಲಾಗಿದೆ. ಆರಂಭಿಕವಾಗಿ ಹಳದಿ ಮಾರ್ಗದಲ್ಲಿ ಪ್ರಾರಂಭ ಮಾಡಿ ನೀಲಿ ಮಾರ್ಗಕ್ಕೆ ವಿಸ್ತರಣೆ ಬಳಿಕ ನೇರಳೆ, ಹಸಿರು ಮಾರ್ಗಕ್ಕೂ ಈ ವ್ಯವಸ್ಥೆ ಅಳವಡಿಸಲು ಬಿಎಂಆರ್‌ಸಿಎಲ್ ಚಿಂತನೆ ನಡೆಸಿದೆ ಎನ್ನಲಾಗಿದೆ.

ಹಳದಿ ಮಾರ್ಗ ಪ್ರಮುಖ ಮೆಟ್ರೋ ಕಾರಿಡಾರ್ ಆಗಿದ್ದು, ದಕ್ಷಿಣ ಬೆಂಗಳೂರನ್ನು ಎಲೆಕ್ಟ್ರಾನಿಕ್ ಸಿಟಿಯೊಂದಿಗೆ ಸಂಪರ್ಕಿಸುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...