ನಮ್ಮ ಮೆಟ್ರೋ | ತಾಂತ್ರಿಕ ದೋಷದಿಂದ ನೇರಳೆ ಮಾರ್ಗದ ಮೆಟ್ರೋ ಸಂಚಾರ ವ್ಯತ್ಯಯ: ನಿಲ್ದಾಣಗಳಲ್ಲಿ ಜನಸಂದಣಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೇಳತೀರವಾಗಿದೆ. ಬೆಳಗ್ಗೆ ಹಾಗೂ ಸಾಯಂಕಾಲದ ಪೀಕ್‌ ಅವರ್‌ನಲ್ಲಿ ಉಂಟಾಗುವ ಟ್ರಾಫಿಕ್‌ಗೆ ಜನ ಕಂಗಾಲಾಗಿದ್ದಾರೆ. ನಮ್ಮ ಮೆಟ್ರೋದಲ್ಲಿ ನಿತ್ಯ ಲಕ್ಷಾಂತರ ಜನ ಸಂಚರಿಸುತ್ತಿರುವುದರಿಂದ ಟ್ರಾಫಿಕ್‌ ಸಮಸ್ಯೆ ಕೊಂಚ ಕಡಿಮೆಯಾದಂತಾಗಿದೆ. ಇದೀಗ, ತಾಂತ್ರಿಕ ಸಮಸ್ಯೆಯಿಂದ ಬೈಯಪ್ಪನಹಳ್ಳಿಯಿಂದ ಗರುಡಾಚಾರ್‌ಪಾಳ್ಯದ ನೇರಳೆ ಮಾರ್ಗದ ನಡುವೆ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಮಂಗಳವಾರ ಬೆಳ್ಳಂಬೆಳಿಗ್ಗೆ ಮೆಟ್ರೋ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗಿದೆ.

ಬೆಳಿಗ್ಗೆಯಿಂದ ಈ ಸಮಸ್ಯೆ ಆರಂಭವಾಗಿದ್ದು, ನೇರಳೆ ಮಾರ್ಗದಲ್ಲಿ ಯಾವುದೇ ಮೆಟ್ರೋ ರೈಲುಗಳ ಸಂಚರಿಸುತ್ತಿಲ್ಲ. ಕೆಲಸಕ್ಕೆ ತೆರಳುವ ಪ್ರಯಾಣಿಕರು ಬೆಳ್ಳಂಬೆಳಿಗ್ಗೆ ನಿಲ್ದಾಣದಲ್ಲಿ ಕಾಯುವಂತಹ ಸ್ಥಿತಿ ಇದೆ. ಮೆಟ್ರೋ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿರುವುದರಿಂದ ಮೆಜೆಸ್ಟಿಕ್‌ನ ಕೆಂಪೇಗೌಡ ಮೆಟ್ರೋ ನಿಲ್ದಾಣ ಸೇರಿದಂತೆ ಎಲ್ಲ ನಿಲ್ದಾಣಗಳಲ್ಲಿಯೂ ಭಾರೀ ಜನದಟ್ಟಣೆ ಉಂಟಾಗಿದೆ.

ನಮ್ಮ ಮೆಟ್ರೋ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ, ಹಲವು ನಿಲ್ದಾಣಗಳಲ್ಲಿ ಮೆಟ್ರೋ ಹತ್ತಿದ್ದ ಪ್ರಯಾಣಿಕರನ್ನು ಇಳಿಯುವಂತೆ ಮನವಿ ಮಾಡಲಾಗುತ್ತಿದ್ದು, ಪರ್ಯಾಯ ಸಾರಿಗೆ ಬಳಸುವಂತೆ ಬಿಎಂಆರ್‌ಸಿಎಲ್‌ ಹೇಳುತ್ತಿದೆ ಎಂದು ತಿಳಿದು ಬಂದಿದೆ.

ಮೆಟ್ರೋದಲ್ಲಿ ಪ್ರಸಕ್ತ ತಡೆಗಾಗಿ ಕ್ಷಮಿಸಿ, ಆದಷ್ಟು ಬೇಗ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಸುತ್ತೇವೆ. ದಯವಿಟ್ಟು ಮುಂದಿನ ಸೂಚನೆಗಾಗಿ ನಿರೀಕ್ಷಿಸಿ ಎಂದು ಮೆಟ್ರೋದ ಸೂಚನಾ ಸ್ಕ್ರೀನ್‌ಗಳಲ್ಲಿ ಸಂದೇಶವನ್ನು ಬಿಎಂಆರ್‌ಸಿಎಲ್‌ ಪ್ರದರ್ಶಿಸುತ್ತಿದೆ.

ಈ ಬಗ್ಗೆ ಟ್ವಿಟರ್ (ಎಕ್ಸ್‌) ಮೂಲಕ ಮಾಹಿತಿ ನೀಡಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌), “ತಾಂತ್ರಿಕ ದೋಷದಿಂದ ಬೈಯಪ್ಪನಹಳ್ಳಿಯಿಂದ ಗರುಡಾಚಾರ್‌ಪಾಳ್ಯ ನಡುವೆ ನೇರಳೆ ಮಾರ್ಗದ ರೈಲುಗಳು ನಿಧಾನಗತಿಯಲ್ಲಿ ಚಲಿಸುತ್ತಿವೆ. ಇದರಿಂದ ರೈಲು ವೇಳಾಪಟ್ಟಿಯಲ್ಲಿ ಅಡಚಣೆಯಾಗುತ್ತದೆ. ಆದಷ್ಟು ಬೇಗ ಸಮಸ್ಯೆ ಪರಿಹರಿಸಲು ನಮ್ಮ ತಂಡ ಕೆಲಸ ಮಾಡುತ್ತಿದೆ. ಅನಾನುಕೂಲತೆಗಾಗಿ ವಿಷಾದಿಸುತ್ತೇವೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಖಾಸಗಿ ಟ್ಯಾಂಕರ್​​​​ಗಳಿಗೆ ದರ ನಿಗದಿಗೆ ಮುಂದಾದ ಬಿಬಿಎಂಪಿ

ಈ ಬಗ್ಗೆ ಹಲವು ಜನ ಟ್ವೀಟ್ ಮಾಡಿದ್ದು, “ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ತೊಂದರೆಯಲ್ಲಿದೆ. ಇದು ವಾಕಿಂಗ್ ವೇಗದಲ್ಲಿ ಸಾಗುತ್ತದೆ. ಟಿನ್ ಫ್ಯಾಕ್ಟರಿಯಿಂದ ಪ್ರತಿ ನಿಲ್ದಾಣದಲ್ಲಿ ನಿಲ್ಲುತ್ತದೆ. ಎಲ್ಲ ಸಮಯದಲ್ಲೂ ಕಠಿಣವಾದ ಬ್ರೇಕ್ ಹಾಕಲಾಗುತ್ತಿದೆ” ಎಂದು ಮುರುಗೇಶನ್ ಎಂಬುವವರು ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...