ನಮ್ಮ ಮೆಟ್ರೋ | ಶರ್ಟ್‌ ಗುಂಡಿ ಇಲ್ಲದಕ್ಕೆ ಕಾರ್ಮಿಕನಿಗೆ ರೈಲು ಹತ್ತಲು ಬಿಡದ ಸಿಬ್ಬಂದಿ

Date:

ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿರೋ ನಮ್ಮ ಮೆಟ್ರೋ ಇದೀಗ ಮತ್ತೊಂದು ವಿಚಾರಕ್ಕೆ ಸುದ್ದಿಯಲ್ಲಿದೆ. ಕೆಲ ದಿನಗಳ ಹಿಂದೆಯಷ್ಟೇ ರೈತರೊಬ್ಬರು ಕೊಳಕು ಬಟ್ಟೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಮೆಟ್ರೋ ಭದ್ರತಾ ಸಿಬ್ಬಂದಿ ಅವರಿಗೆ ನಿಲ್ದಾಣದೊಳಗೆ ಪ್ರವೇಶ ನಿರ್ಬಂಧಿಸಿತ್ತು. ಇದೀಗ, ಅಂತಹದ್ದೆ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.

ಇದೀಗ, ಶರ್ಟ್‌ ಗುಂಡಿ ಹಾಕದ ಕಾರ್ಮಿಕನೊಬ್ಬನಿಗೆ ಮೆಟ್ರೋ ಒಳಗೆ ಪ್ರವೇಶವಿಲ್ಲ ಎಂದು ಹೇಳಿದ ಭದ್ರತಾ ಸಿಬ್ಬಂದಿ ಕಾರ್ಮಿಕನನ್ನು  ನಿಲ್ದಾಣದಲ್ಲಿಯೇ ನಿಲ್ಲಿಸಿದ ಘಟನೆ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮೆಟ್ರೋ ಸಿಬ್ಬಂದಿಯ ವರ್ತನೆಯಿಂದಾಗಿ ಯುವಕ ನಿಲ್ದಾಣದಲ್ಲಿಯೇ ಕಾಯುವಂತಾಗಿದೆ. ಯುವಕನ ಪರಿಸ್ಥಿತಿಯನ್ನು ಗಮನಿಸಿದ ಪ್ರಯಾಣಿಕರೊಬ್ಬರುದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಓಲ್ಡ್‌ ಸ್ಯಾಫರಾನ್ ಎಂಬ ಹೆಸರಿನ ಎಕ್ಸ್ಖಾತೆಯಿಂದ ಈ ವಿಡಿಯೋವನ್ನು ಫೊಸ್ಟ್‌ ಮಾಡಲಾಗಿದ್ದು, “ಬೆಂಗಳೂರಿನ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಾಗರಿಕರ ಬಟ್ಟೆ/ಉಡುಗೆಗೆ ಸಂಬಂಧಿಸಿದ ಮತ್ತೊಂದು ಘಟನೆ ಇದೀಗ ನನ್ನ ಮುಂದೆ ನಡೆದಿದೆ. ಒಬ್ಬ ಕಾರ್ಮಿಕನ ಶರ್ಟ್‌ ಗುಂಡಿಗಳು ಇರದ ಕಾರಣ ಅವೆರಡು ಗುಂಡಿಗಳನ್ನು ಹೊಲಿದುಕೊಂಡು ಬಾ ಅಲ್ಲಿಯವರೆಗೂ ಮೆಟ್ರೋ ಹತ್ತಲು ಬಿಡುವುದಿಲ್ಲ ಎಂದು ಅವರನ್ನು ಭದ್ರತಾ ಸಿಬ್ಬಂದಿ ನಿಲ್ದಾಣದಲ್ಲಿಯೇ ನಿಲ್ಲಿಸಿದ್ದಾರೆ. ನಮ್ಮ ಮೆಟ್ರೋ ಯಾವಾಗಿನಿಂದ ಈ ರೀತಿ ಆಯಿತು” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೋಟೆಲ್‌ನ 19ನೇ ಮಹಡಿಯಿಂದ ಹಾರಿ ತಮಿಳುನಾಡಿನ ವ್ಯಕ್ತಿ ಸಾವು

ಅಲ್ಲದೇ, ಈ ಪೋಸ್ಟ್‌ ಅನ್ನು ಬಿಎಂಆರ್‌ಸಿಎಲ್‌ ಹಾಗೂ ತೇಜಸ್ವಿ ಸೂರ್ಯ ಅವರಿಗೆ ಟ್ಯಾಗ್ ಮಾಡಲಾಗಿದೆ.

ಮೆಟ್ರೋ ಸಿಬ್ಬಂದಿಯ ವರ್ತನೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸರಿಯಾದ ಬಟ್ಟೆಯಿಲ್ಲದವರಿಗೆ, ರೈತರಿಗೆ, ಕಾರ್ಮಿಕರಿಗೆ ಇಲ್ಲದ ಮೆಟ್ರೋ ಕೇವಲ ಸಿರಿವಂತರಿಗೆ ಮಾತ್ರ ಸೀಮಿತವಾಗಿದೆಯೇ ಎಂದು ಪ್ರಶ್ನಿಸಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...