ಪಂಚಮಸಾಲಿ ಮೀಸಲಾತಿ | ನಮ್ಮ ಹೋರಾಟಕ್ಕೆ ಗೆಲುವು ಸಿಕ್ಕೇ ಸಿಗುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ

Date:

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕುರಿತು ಚರ್ಚಿಸಲು ಡಿಸೆಂಬರ್ 5ರಂದು ಶಾಸಕರ ಸಭೆ ನಡೆಸಬೇಕು ಹಾಗೂ ಈ ಸಭೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನೂ ಆಹ್ವಾನಿಸಬೇಕು ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ತಿಳಿಸಿದ್ದಾರೆ. ಸಭೆ ನಡೆಸುವ ವಿಷಯವನ್ನು ಶನಿವಾರ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಗುರುವಾರ ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪಂಚಮಸಾಲಿ ಮೀಸಲಾತಿ ಕುರಿತು ನಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದೇವೆ. ಹಾಗಾಗಿ ಅದನ್ನು ಈಡೇರಿಸಲು ನಾವು ಬದ್ದರಾಗಿದ್ದೇವೆ. ಹೋರಾಟ ದಾರಿ ತಪ್ಪದಂತೆ ನೋಡಿಕೊಳ್ಳಬೇಕು. ಯಾರೂ ಹೋರಾಟದಿಂದ ಹಿಂದೆ ಸರಿಯುವುದು ಬೇಡ, ಸಮಾಜಕ್ಕೆ ನಾನು ನ್ಯಾಯ ಕೊಡಿಸುತ್ತೇನೆ ಎಂದು ಅವರು ಭರವಸೆ ನೀಡಿದರು.

ನಮ್ಮ ಮುಂದಿನ ಪೀಳಿಗೆಯ ಉಜ್ವಲ ಜೀವನಕ್ಕೆ ಮೀಸಲಾತಿ ಅಗತ್ಯ. ಅದಕ್ಕಾಗಿ ಹೋರಾಟ ಅನಿವಾರ್ಯ. ಬೇರೆಯವರಿಗೆ ಮೀಸಲಾತಿ ಕೊಟ್ಟಾಗ ನಾವು ಹೊಟ್ಟೆಕಿಚ್ಚು ಮಾಡಿಲ್ಲ, ಯಾರ ತುತ್ತನ್ನೂ ನಾವು ಕಸಿಯುವುದಿಲ್ಲ. ಬೇರೆಯವರಿಗೆ 4 ತುತ್ತು ಕೊಟ್ಟು ಒಂದು ತುತ್ತು ತಿನ್ನುವವರು ನಾವು. ನಾನು ಹೊರಗಿದ್ದರೂ ಹೋರಾಟ ಮಾಡುತ್ತೇನೆ, ಒಳಗಿದ್ದರೂ ಹೋರಾಟ ಮಾಡುತ್ತೇನೆ. ನಾವು ಪಂಚಮಸಾಲಿ ಸಮಾಜದ ಶಾಸಕರಷ್ಟೇ ಸಭೆ ನಡೆಸುವುದು ಬೇಡ. ನಮ್ಮ ಬೆಂಬಲದಿಂದ ಇನ್ನೂ ಹಲವಾರು ಶಾಸಕರು ಆಯ್ಕೆಯಾಗಿದ್ದಾರೆ. ಹೋರಾಟಕ್ಕೆ ಅವರೆಲ್ಲರ ಬೆಂಬಲ ಪಡೆಯೋಣ ಎಂದು ಹೆಬ್ಬಾಳಕರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವಣ್ಣ ಇರಲಿ, ಅಂಬೇಡ್ಕರ್ ಇರಲಿ, ಕನಕದಾಸರಿರಲಿ, ಏಸುಕ್ರಿಸ್ತ, ಪೈಗಂಬರ ಸೇರಿದಂತೆ ಎಲ್ಲರೂ ಸಮಾನತೆಯ ಸಂದೇಶ ಸಾರಿದ್ದಾರೆ. ನಮಗೂ ಸಮಾನತೆ ಬೇಕು. ಹಾಗಾಗಿ ಹೋರಾಟ ನಿರಂತರವಾಗಿರಲಿ. ಹೋರಾಟ ಮಾಡಿ ಹಕ್ಕು ಪಡೆಯೋಣ. ನಮ್ಮ ಹೋರಾಟಕ್ಕೆ ಗೆಲುವು ಸಿಕ್ಕೇ ಸಿಗುತ್ತದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಪಂಚ ರಾಜ್ಯಗಳ ಎಕ್ಸಿಟ್ ಪೋಲ್: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಸಾಧ್ಯತೆ

ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಹಿಂದೆ ಹೋರಾಟದಲ್ಲಿ ಭಾಗಿಯಾಗಿದ್ದ ಅನೇಕರು ಈಗ ಬರುತ್ತಿಲ್ಲ ಎಂದು ಜನರು ನನ್ನ ಬಳಿ ಆಕ್ಷೇಪಿಸಿದ್ದಾರೆ. ಆದರೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರದಲ್ಲಿದ್ದರೂ ನಮ್ಮ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಹಿಂದಿನಿಂದಲೂ ಅವರು ನಮ್ಮ ಸಮಾಜದ ಜತೆಗಿದ್ದಾರೆ. ಅವರು ನಮಗೆ ನ್ಯಾಯ ಕೊಡಿಸುತ್ತಾರೆ ಎನ್ನುವ ವಿಶ್ವಾಸವಿದೆ. ನಮ್ಮ ಹೋರಾಟವನ್ನು ಮುಂದುವರಿಸೋಣ. ಡಿ.5ರಂದು ಪಂಚಮಸಾಲಿ ಶಾಸಕರ ಸಭೆ ನಡೆಸಿ ಮುಂದಿನ ಹೋರಾಟದ ಕುರಿತು ನಿರ್ಧರಿಸೋಣ. ಈ ಸಭೆಗೆ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳೂ ಬರಲಿ ಎಂದರು.

ಬಿಜೆಪಿ ಸರಕಾರ ನಮಗೆ ಮಾತು ಕೊಟ್ಟು ಮೋಸ ಮಾಡಿದ್ದರಿಂದ ನಮ್ಮ ಸಮಾಜದ ಅರ್ಧಕ್ಕಿಂತ ಹೆಚ್ಚು ಜನರು ಕಾಂಗ್ರೆಸ್ ಗೆ ಬೆಂಬಲ ನೀಡಿದ್ದಾರೆ. ಯಾವುದೇ ಸರಕಾರ ಬಂದರೂ ಬೇಡಿಕೆ ಈಡೇರುವವರೆಗೂ ಹೋರಾಟ ಮಾಡಲಾಗುವುದು. ಲೋಕಸಭಾ ಚುನಾವಣೆ ಮುಗಿದರೆ ನಮ್ಮನ್ನು ಕೇಳುವುದಿಲ್ಲ. ಹಾಗಾಗಿ ಅಷ್ಟರೊಳಗೆ ಮೀಸಲಾತಿ ಕಲ್ಪಿಸುವಂತೆ ಗಡುವು ನೀಡಬೇಕಿದೆ ಎಂದು ಅವರು ಹೇಳಿದರು.

ಮಾಜಿ ಶಾಸಕ ಎಚ್.ಎಸ್. ಶಿವಶಂಕರ ಮಾತನಾಡಿ, ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರದಲ್ಲಿದ್ದರೂ ನಮ್ಮ ಜೊತೆ ನಿಂತಿದ್ದಾರೆ. ಅವರ ಸಮಾಜ ನಿಷ್ಠೆಗೆ ನಾವೆಲ್ಲ ಮೆಚ್ಚಲೇಬೇಕು. ಅವರು ಒಬ್ಬ ಪ್ರಭಾವಿ ಮಂತ್ರಿ ಎನಿಸಿದ್ದಾರೆ. ಹಾಗಾಗಿ ಸಮಾಜದ ಕೆಲಸದಲ್ಲಿ ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲಬೇಕಿದೆ ಎಂದರು.

ಮಾಜಿ ಸಚಿವರಾದ ಎ.ಬಿ.ಪಾಟೀಲ, ಶಶಿಕಾಂತ ನಾಯಿಕ, ಅಡಿವೇಶ ಇಟಗಿ. ಆರ್.ಕೆ.ಪಾಟೀಲ, ರುದ್ರಗೌಡ ಪಾಟೀಲ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...