ಕನ್ನಡ ಕೋಟ್ಯಧಿಪತಿಯಲ್ಲಿ 50 ಲಕ್ಷ ರೂ. ಗೆದ್ದಿದ್ದ ʼಶಿಕ್ಷಕ ಪಂಪಣ್ಣʼ, ಈಗ ಇ.ಡಿ ವಶಕ್ಕೆ!

Date:

ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಕನ್ನಡ ಕೋಟ್ಯಧಿಪತಿ ಶೋ ಮೂಲಕ ಪಂಪಣ್ಣ ಇಡೀ ಕರ್ನಾಟಕಕ್ಕೆ ಪರಿಚಯವಾಗಿದ್ದ. ಇದೀಗ ವಾಲ್ಮೀಕಿ ನಿಗಮ ಹಗರಣದಲ್ಲಿ ಇಡಿ ಬಲೆಗೆ ಬಿದ್ದಿದ್ದಾನೆ.

2012ರಲ್ಲಿ ನಟ ಪುನೀತ್ ರಾಜ್ ಕುಮಾರ್ ನಡೆಸಿಕೊಡುತ್ತಿದ್ದ ಕನ್ನಡ ಕೋಟ್ಯಧಿಪತಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಪಂಪಣ್ಣ ಕೊನೆಯವರೆಗೂ ಉಳಿದಿದ್ದ. ಒಂದು ಕೋಟಿ ರೂಪಾಯಿಗೆ ಕೇಳಿದ ಕೊನೆ ಪ್ರಶ್ನೆವರೆಗೂ ಸೇಫ್ ಆಗಿ ಆಡಿ ಕೊನೆ ಪ್ರಶ್ನೆಗೆ ಉತ್ತರಿಸಲು ಆಗದೇ ಆಟದಿಂದ ನಿರ್ಗಮಿಸಿ 50 ಲಕ್ಷ ರೂ. ಪಡೆದಿದ್ದ.

ದೇವದುರ್ಗ ಮೂಲದ ಪಂಪಣ್ಣ ಸ್ಮಶಾನದಲ್ಲಿ ಇಡುವ ಎಡೆಯನ್ನು ತಿಂದು ಬೆಳೆದವರು ಅನ್ನೋ ವಿಚಾರ ಆಗ ಸಂಚಲನ ಮೂಡಿಸಿತ್ತು. ಇಂತಹ ಪಂಪಣ್ಣ ಕಡು ಬಡತನದಲ್ಲಿ ಬೆಳೆದು ಬಂದ ತಾನು ಬುದ್ದಿವಂತ ಎನ್ನುವುದನ್ನು ಸಾಬೀತು ಮಾಡಿದ್ದ. ಅದೇ ಪಂಪಣ್ಣ ಇಂತಹ ಅಕ್ರಮದಲ್ಲಿ ಆರೋಪಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂ. ಅಕ್ರಮ ವರ್ಗಾವಣೆ ಹಗರಣ ಸಂಬಂಧ ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್​ ಮಾಜಿ ಆಪ್ತ ಸಹಾಯಕ ಪಂಪಣ್ಣನನ್ನು ಇಡಿ ಅಧಿಕಾರಿಗಳು ಗುರುವಾರ (ಜು.11) ವಶಕ್ಕೆ ಪಡೆದಿದ್ದಾರೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ನಡೆದಿರುವ ಜಾರಿ ನಿರ್ದೇಶನಾಲಯ (ED) ದಾಳಿ ಎರಡನೇ ದಿನವೂ ಮುಂದುವರಿದಿದ್ದು, ಡೀಲ್‌ ಬಗ್ಗೆ ಪಂಪಣ್ಣ ಬಾಯಿ ಬಿಟ್ಟಿದ್ದಾನೆಂದು ತಿಳಿದುಬಂದಿದೆ.

ಪಂಪಣ್ಣ ಮನೆ ಮೇಲೆ ಇ.ಡಿ ದಾಳಿ ನಡೆಸಿದ ವೇಳೆ ಅಕ್ರಮಗಳ ಮಾಹಿತಿ ಲಭ್ಯವಾಗಿದೆ. ಬಿಚ್ಚಾಲಿ ಗ್ರಾ.ಪಂ ಪಿಡಿಒ ಆಗಿ ನಿಯೋಜನೆಗೊಂಡಿದ್ದ ಪಂಪಣ್ಣ, ಪಿಡಿಒ ಚಾರ್ಜ್ ತೆಗೆದುಕೊಳ್ಳದೆ ರಾಯಚೂರು ತಾ.ಪಂನಲ್ಲಿ ಕೇಸ್ ವರ್ಕರ್ ಆಗಿ ಮುಂದುವರಿದಿದ್ದ. ನೂತನ ಎಂಎಲ್ಸಿಯೊಬ್ಬರ ಪಿಎ ಆಗಲು ಹೊರಟಿದ್ದ ಎನ್ನಲಾಗಿದೆ.

ರಾಯಚೂರಿನ ಆಜಾದ್ ನಗರದಲ್ಲಿ ಐಷಾರಾಮಿ ಪ್ಲ್ಯಾಟ್ ಖರೀದಿಸಿ ವಾಸ ಮಾಡುತ್ತಿದ್ದ. ತಾಲೂಕು ಪಂಚಾಯತ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಬಸವನಗೌಡ ದದ್ದಲ್‌ನ ಖಾಸಗಿ ವ್ಯವಹಾರ ನೋಡಿಕೊಳ್ಳುತ್ತಿದ್ದ ಎಂದು ತಿಳಿದು ಬಂದಿದೆ.

ಪಂಪಣ್ಣ 50 ಲಕ್ಷ‌ ರೂ. ಗೆದ್ದ ಬಳಿಕ ಅಂದಿನ ರಾಯಚೂರು ಸಂಸದರಿಗೆ ಸರ್ಕಾರಿ ಆಪ್ತ ಸಹಾಯಕರಾಗಿ ಸೇರಿಕೊಂಡ. ಬಳಿಕ ಪಿಡಿಒ ಹುದ್ದೆಗೆ ನಿಯೋಜನೆಗೊಂಡ. ಶಾಸಕ ಬಸನಗೌಡ ದದ್ದಲ್‌ ಅವರಿಗೂ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...