ವೀರಶೈವ – ಲಿಂಗಾಯತ ಅಧಿವೇಶನ ನಿರ್ಣಯಕ್ಕೆ ಪಂಚಮಸಾಲಿ ಶ್ರೀ, ಯತ್ನಾಳ್‌ ವಿರೋಧ

Date:

  • ಇದು ಬಿ. ಎಸ್‌. ವೈ ಕುತಂತ್ರ ಎಂದು ಆರೋಪಿಸಿದ ಯತ್ನಾಳ್‌!
  • ನಮ್ಮ ವಿಚಾರದಲ್ಲಿ ಮೂಗು ತೂರಿಸಬೇಡಿ: ಮೃತ್ಯುಂಜಯ ಶ್ರೀ

ಉಪಜಾತಿ ಬರೆಸಬೇಡಿ ಎಂದು ವೀರಶೈವ ಮಹಾಸಭಾ ಅಧಿವೇಶನದ ನಿರ್ಣಯಕ್ಕೆ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಮೂಲಕ ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲಂನಲ್ಲಿ ತಮ್ಮ ಉಪಜಾತಿ ನಮೂದಿಸಬಾರದು ಎಂಬ ವೀರಶೈವ ಮಹಾಸಭಾ ಅಧಿವೇಶನದ ನಿರ್ಣಯಕ್ಕೆ ಪಂಚಮಸಾಲಿಗಳು ಒಪ್ಪಲಿಕ್ಕೆ ಸಾಧ್ಯವಿಲ್ಲ ಎಂಬುದನ್ನು ಬಹಿರಂಗವಾಗಿ ಹೇಳಿದ್ದಾರೆ.

“ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲಂನಲ್ಲಿ ತಮ್ಮ ಉಪಜಾತಿ ನಮೂದಿಸಬಾರದು ಎಂದು ನಿರ್ಣಯ ಮಾಡಿರುವುದನ್ನು ನಾವು ಪಂಚಮಸಾಲಿಗಳು ಒಪ್ಪಲಿಕ್ಕೆ ಸಾಧ್ಯವಿಲ್ಲ. ವೀರಶೈವ ಮಹಾಸಭಾದವರು ಆಯಾ ಉಪಜಾತಿಗಳ ಸಾಮಾಜಿಕ ಸೌಲಭ್ಯ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಮೂಗು ತೂರಿಸಬಾರದು” ಎಂದು ಬಸವಜಯಮೃತ್ಯುಂಜಯ ಸ್ವಾಮೀಜಿ ಅವರು ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೀರಶೈವ ಮಹಾಸಭಾ ಅಧಿವೇಶನ ನಿರ್ಣಯ ಸರಿಯಿಲ್ಲ. ಈ ನಿರ್ಣಯವನ್ನು ಪುನರ್ ಪರಿಶೀಲಿಸಬೇಕೆಂಬ ಸಲಹೆಯ‌ನ್ನು ಮಹಾಸಭೆಗೆ ಕೊಡಲು ಇಚ್ಛಿಸುತ್ತೇನೆ” ಎಂದರು.

“ಜಾತಿಗಣತಿ ವೇಳೆ ಉಪಜಾತಿ ಬರೆಸಬೇಕೆಂದು ಈಗಾಗಲೇ ನಮ್ಮ ಸಮಾಜ ಬಾಂಧವರಿಗೆ ನಾವು ಕರೆ ಕೊಟ್ಟಿದ್ದೇವೆ. ಉಪಜಾತಿ ಕಾಲಂನಲ್ಲಿ ಪಂಚಮಸಾಲಿ ಅಂತಾನೆ ಬರೆಸಿ ಅಂತ ಹೇಳಿದ್ದೇವೆ. ಕಾರಣ ಅನೇಕ ಒಳಪಂಗಡದವರು ಈಗಾಗಲೇ ‌ಮೀಸಲಾತಿ ಪಡೆದುಕೊಂಡಿದ್ದಾರೆ” ಎಂದು ಹೇಳೀದರು.

“ಉಳಿದವರು ಏನು ಬರೆಸುತ್ತಾರೋ ಬಿಡ್ತಾರೊ ಅವರಿಗೆ ಬಿಟ್ಟಿದ್ದು. ಆದರೆ ನಾವು ಮಾತ್ರ (ಪಂಚಮಸಾಲಿಗಳು) ನಮ್ಮ ಸಮಾಜದವರಿಗೆ ಪಂಚಮಸಾಲಿ ಅಂತಾನೆ ಬರೆಸಲು ಸಂದೇಶ ಕೊಟ್ಟಿದ್ದೇವೆ ಎಂದು ಸ್ವಾಮೀಜಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಇದು ಬಿ. ಎಸ್‌. ವೈ ಕುತಂತ್ರ: ಯತ್ನಾಳ್‌!

ಉಪಜಾತಿ ಬರೆಸಬೇಡಿ ಎಂಬ ವೀರಶೈವ ಮಹಾಸಭಾ ಅಧಿವೇಶನದ ನಿರ್ಣಯಕ್ಕೆ ನನ್ನ ವಿರೋಧವಿದೆ. ಅಧಿವೇಶನದಲ್ಲಿ ಯಾರು ಇದ್ದರು? ಅದೇ ಬಿಎಸ್‌ವೈ! ಅಂದರೆ, ಬಿ-ಭಿಮಣ್ಣ ಖಂಡ್ರೆ, ಎಸ್-ಶಾಮನೂರು, ವೈ-ಯಡಿಯೂರಪ್ಪ. ಇವರೆಲ್ಲ ಎಲ್ಲಿ ಉಪಜಾತಿ ಬರೆಸಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ” ಎಂದು ಬಸನಗೌಡ ಪಾಟೀಲ ಆಗ್ರಹಿಸಿದರು.

ವಿಜಯಪುರದಲ್ಲಿ ಮಾತನಾಡಿದ ಅವರು, “ವೀರಶೈವ ಮಹಾಸಭಾ ಅಧಿವೇಶನ ನಿರ್ಣಯ ಪಾಲಿಸಿದರೆ ನಮ್ಮ ಸಮುದಾಯಕ್ಕೆ ಯಾವುದೇ ಯೋಜನೆಗಳು ಸಿಗುವುದಿಲ್ಲ. ಕೆಲವೇ ದಿನಗಳಲ್ಲಿ ನಮ್ಮ ಸ್ವಾಮೀಜಿ ನೇತೃತ್ವದಲ್ಲಿ ಸಭೆ ಕರೆದು ನಾವೂ ಕೂಡ ನಿರ್ಣಯ ಮಂಡಿಸುತ್ತೇವೆ. ಹಿಂದೂ ಗಾಣಿಗ, ಹಿಂದೂ ಪಂಚಮಸಾಲಿ, ಹಿಂದೂ ಬಣಜಿಗ… ಹೀಗೆ ಸೇರಿಸಿದರೆ ನಮಗೂ ಲಾಭ ಸಿಗುತ್ತದೆ. ಇವರ ಮಾತು ಕೇಳಿಕೊಂಡು ಸುಮ್ಮನೇ ಕೂರಲ್ಲ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...