ಐವರಿಗೆ ಸಚಿವ ಸ್ಥಾನ ನೀಡಲು ಪಂಚಮಸಾಲಿ ಸ್ವಾಮೀಜಿ ನೇತೃತ್ವದಲ್ಲಿ ನಿರ್ಣಯ ಮಂಡನೆ

Date:

  • ಒಟ್ಟು ಐದು ಶಾಸಕರಿಗೆ ಕಾಂಗ್ರೆಸ್ ಸಚಿವ ಸ್ಥಾನ ಕಲ್ಪಿಸಬೇಕು
    • ಬಿಜೆಪಿ ರಾಜ್ಯಾಧ್ಯಕ್ಷ/ವಿರೋಧ ಪಕ್ಷದ ಸ್ಥಾನವನ್ನು ನೀಡಬೇಕು

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯ ಮೂರು ನಿರ್ಣಯ ಕೈಗೊಂಡಿದೆ.

ಲಿಂಗಾಯತ ಪಂಚಮಸಾಲಿ ಸಮುದಾಯದ ನೂತನ ಶಾಸಕರುಗಳ ಅಭಿನಂದನಾ ಸಮಾರಂಭ ಕುರಿತು ಚರ್ಚಿಸುವ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಪೂರ್ವಭಾವಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು.

ಈ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ವರಿಷ್ಠರಿಗೆ ಪಂಚಮಸಾಲಿ ಸಮುದಾಯದ ರಾಜಕೀಯ ಪ್ರಾತಿನಿಧ್ಯ ಕುರಿತ ಬೇಡಿಕೆಗಳನ್ನು ಜಯಮೃತ್ಯುಂಜಯ ಸ್ವಾಮೀಜಿ ಮೂಲಕ ಸಮುದಾಯ ಮಂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಮುಖ ಬೇಡಿಕೆಗಳು

1) ಲಿಂಗಾಯತ ಪಂಚಮಸಾಲಿ ಸಮಾಜದ ಬಂಧುಗಳ ಒತ್ತಾಯದಂತೆ, ಮೀಸಲಾತಿಗಾಗಿ ಮುಂಚೂಣಿಯಲ್ಲಿ ಹೋರಾಡಿದಂತಹ ಶಾಸಕರಾದ ವಿಜಯಾನಂದ ಕಾಶಪ್ಪನವರ್ (ಹುನಗುಂದ), ವಿನಯ ಕುಲಕರ್ಣಿ (ಧಾರವಾಡ ಗ್ರಾಮೀಣ) ಹಾಗೂ ಲಕ್ಷ್ಮಿ ಹೆಬ್ಬಾಳಕರ್ (ಬೆಳಗಾವಿ ಗ್ರಾಮೀಣ) ಒಳಗೊಂಡಂತೆ ಒಟ್ಟು ಐದು ಶಾಸಕರಿಗೆ ಕಾಂಗ್ರೆಸ್ ಸಚಿವ ಸ್ಥಾನ ಕಲ್ಪಿಸಬೇಕು.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್ ಹಾಗೂ ಕಾಂಗ್ರೆಸ್ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಭೆಯಲ್ಲಿ ಒತ್ತಾಯಿಸಲಾಯಿತು.

2) ಬಿಜೆಪಿಯ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ಸ್ಥಾನಕ್ಕೆ ಸಮರ್ಥ ಲಿಂಗಾಯತ ಪಂಚಮಸಾಲಿ ಶಾಸಕರಿಗೆ ಅವಕಾಶ ಮಾಡಿಕೊಡಬೇಕು ಎಂದು ರಾಷ್ಟ್ರೀಯ ಬಿಜೆಪಿ ವರಿಷ್ಠರಿಗೆ ಆಗ್ರಹಿಸಲಾಯಿತು.

3) ನೂತನ ಶಾಸಕರ ಅಭಿನಂದನಾ ಸಮಾರಂಭವನ್ನು ಹಾಗೂ ಮೀಸಲಾತಿ ಹಕ್ಕೊತ್ತಾಯ ಸಮಾರಂಭವನ್ನು ಕೂಡಲ ಸಂಗಮದಲ್ಲಿ ಜೂನ್ ತಿಂಗಳಲ್ಲಿ ನೆರವೇರಿಸಲು ತೀರ್ಮಾನಿಸಲಾಯಿತು.

ಶಾಸಕ ವಿಜಯಾನಂದ ಕಾಶಪ್ಪನವರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ನೂತನ ಶಾಸಕರಾದ ವಿನಯ ಕುಲಕರ್ಣಿ, ಲಕ್ಷ್ಮೀ ಹೆಬ್ಬಾಳ್ಕರ್, ರಾಜುಗೌಡ ಕಾಗೆ, ರಾಜುಗೌಡ ಪಾಟೀಲ್, ಅಶೋಕ ಮನಗೂಳಿ, ಬಾಬಾ ಸಾಹೇಬ್ ಪಾಟೀಲ, ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ನಿಗಮದ ಮಾಜಿ ಅಧ್ಯಕ್ಷ ಎಂಎಸ್ ರುದ್ರಗೌಡ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...