ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್

Date:

“ಸುಗಮ ಸಂಚಾರ ಹಾಗೂ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಫ್ರೀಡಂ ಪಾರ್ಕ್ ಸಮೀಪ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಬೆಂಗಳೂರು ಡಿಸಿ ಹಾಗೂ ಪೊಲೀಸ್ ಆಯುಕ್ತರು ಸೇರಿ ಗಾಂಧಿನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧ ಮಾಡಿದ್ದಾರೆ. ಇಲ್ಲಿನ ರಸ್ತೆ ವಿಶಾಲವಾಗಿರಬೇಕು. ಎಲ್ಲ ವ್ಯಾಪಾರಿಗಳಿಗೆ ಲಾಭವಾಗಬೇಕು” ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ.

“ಈ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಮೂಲಕ ಬೆಂಗಳೂರು ನಗರ ಇಂದು ಹೊಸ ಇತಿಹಾಸ ಪುಟಕ್ಕೆ ಸೇರಿದೆ. ಅಲ್ಲದೆ ಇಡೀ ರಾಜ್ಯಕ್ಕೆ ಸಂದೇಶ ರವಾನೆಯಾಗಿದೆ. ಇಲ್ಲಿ ಪ್ರತಿ ಗಂಟೆಗೆ ವಾಹನ ನಿಲುಗಡೆಗೆ ₹20 – ₹30 ನಿಗದಿ ಮಾಡಿದ್ದು, ಎರಡು ಮೂರು ಕಾರು ಹೊಂದಿರುವವರು ಕೂಡ ಇಲ್ಲಿ ವಾಹನ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರದ ಯಾವುದೇ ಭಾಗದಿಂದ ಜನ ತಮ್ಮ ವಾಹನದಲ್ಲಿ ಬಂದರೂ ಇಲ್ಲಿ ಅವರು ವಾಹನ ನಿಲುಗಡೆ ಮಾಡಿ, ಅವರು ವಿಧಾನಸೌಧ, ಹೈಕೋರ್ಟ್, ರೈಲ್ವೇ ನಿಲ್ದಾಣ ಸೇರಿದಂತೆ ಗಾಂಧಿ ನಗರದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋಗಲು ಗುತ್ತಿಗೆದಾರರು ಉಚಿತ ಸಂಚಾರ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಗಾಂಧಿ ನಗರದಲ್ಲಿ ದಿನೇಶ್ ಗುಂಡೂರಾವ್ ಅವರ ಮುಖಂಡತ್ವದಲ್ಲಿ ವಿಶೇಷ ಯೋಜನೆ ಜಾರಿ ಮಾಡಲಾಗಿದೆ” ಎಂದರು.

“ಗಾಂಧಿನಗರ ಎಂದರೆ ಮಧ್ಯಮ ವರ್ಗದ ಜನ ಹೆಚ್ಚಾಗಿ ಬರುತ್ತಿದ್ದಾರೆ. ವಾಹನ ನಿಲುಗಡೆ ಸಮಸ್ಯೆ ಎದುರಾಗುತ್ತಿತ್ತು. ಈಗ ಅದಕ್ಕೆ ಪರಿಹಾರ ನೀಡಲಾಗುತ್ತಿದೆ. ಈ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣ ಮಾಡುವ ಹೊಸ ಪ್ರಯೋಗಕ್ಕೆ ಗುತ್ತಿಗೆದಾರರು ಕೈ ಹಾಕಿದ್ದಾರೆ. ಅವರು ಸರ್ಕಾರಕ್ಕೂ ₹1.50 ಕೋಟಿ ಹಣ ಪಾವತಿಸಿ, ಹೇಗೆ ಆದಾಯ ಮಾಡುತ್ತಾರೋ ಗೊತ್ತಿಲ್ಲ. ಇದು ಸುಲಭವಾದ ಕೆಲಸವಲ್ಲ. ಈ ವ್ಯವಸ್ಥೆ ಗಾಂಧಿನಗರಕ್ಕೆ ಬಹಳ ಅವಶ್ಯಕವಾಗಿದೆ” ಎಂದು ತಿಳಿಸಿದರು.

“ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ಮಾಡಲು ಬರುವವರಿಗೂ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಎಲ್ಲೋ ಗಾಡಿ ನಿಲ್ಲಿಸಿ ಬರುವುದಕ್ಕಿಂತ ಇಂತಹ ವ್ಯವಸ್ಥೆ ಬಳಸಿಕೊಳ್ಳುವುದು ಹೆಚ್ಚಿನ ಅನುಕೂಲವಾಗುತ್ತದೆ. ಖಾಸಗಿಯವರು, ವರ್ತಕರು, ಗ್ರಾಹಕರು ಸೇರಿದಂತೆ ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು. ಇದು ಮಾದರಿ ಯೋಜನೆಯಾಗಿದ್ದು, ಬೆಂಗಳೂರಿನ ಇತರ ಕಡೆಗಳಲ್ಲಿ ಎಲ್ಲೆಲ್ಲಿ ಈ ಯೋಜನೆ ಜಾರಿ ಮಾಡಬಹುದು ಎಂದು ಚರ್ಚೆ ಮಾಡಿ ಜಾರಿ ಮಾಡುತ್ತೇವೆ” ಎಂದರು.

“ಇಂತಹ ಗುತ್ತಿಗೆದಾರರು ಶಕ್ತಿಶಾಲಿಯಾದರೆ ಮಾತ್ರ ಸರ್ಕಾರ ಶಕ್ತಿಶಾಲಿಯಾಗುತ್ತದೆ. ಅವರು ದುರ್ಬಲರಾದರೆ ಸರ್ಕಾರವೂ ದುರ್ಬಲವಾಗುತ್ತದೆ. ಈ ವಿಚಾರವಾಗಿ ಏಳು ಬಾರಿ ಟೆಂಡರ್ ಕರೆದು ವಿಫಲವಾಗಿದ್ದೆವು. ಇವರು ದೊಡ್ಡ ಧೈರ್ಯ ಮಾಡಿ ಮುಂದೆ ಬಂದಿದ್ದಾರೆ. ಅವರ ಧೈರ್ಯವನ್ನು ನಾನು ಮೆಚ್ಚುತ್ತೇನೆ. ನಮ್ಮ ಮಾಲ್‌ಗಳಲ್ಲೂ ಇಂತಹ ವ್ಯವಸ್ಥೆ ಇದೆ. ಅಲ್ಲಿನ ಗ್ರಾಹಕ ವರ್ಗವೇ ಬೇರೆ. ಇಲ್ಲಿ ಅಂತಹ ಗ್ರಾಹಕ ವರ್ಗ ಹೆಚ್ಚಾಗಿ ಬರುವುದಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 65 ಕೆಜಿಗೂ ಅಧಿಕ ಗಾಂಜಾ ವಶ ; ಇಬ್ಬರ ಬಂಧನ

ಎರಡು ಮೂರು ದಿನಗಳಲ್ಲಿ ಜಾಹೀರಾತು ನೀತಿ

“ಬೆಂಗಳೂರಿಗೆ ಹೊಸ ರೂಪ ನೀಡಲು ನಾವು ಮುಂದಾಗಿದ್ದೇವೆ. ಈ ಕಾರ್ಯಕ್ರಮದ ನಂತರ ಜಾಹಿರಾತು ನೀತಿ ಬಗ್ಗೆ ಪಾಲಿಕೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ಮುಂದಿನ ಎರಡು ಮೂರು ದಿನಗಳಲ್ಲಿ ಜಾಹೀರಾತು ನೀತಿಯನ್ನು ತರುತ್ತೇವೆ. ನಂತರ ಟಿಡಿಆರ್ ಸಮಸ್ಯೆ ಬಗೆಹರಿಸಲಾಗುವುದು. ನಂತರ ಪ್ರೀಮಿಯಂ ಎಫ್ಎಆರ್ ಸೇರಿದಂತೆ ಎಲ್ಲಾ ವಿಚಾರವಾಗಿ ಪರಿಹಾರ ಕಂಡುಕೊಳ್ಳಲಾಗುವುದು” ಎಂದರು.

“ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಡಬಲ್ ಡೆಕ್ಕರ್ ಕಾರಿಡಾರ್ ಮೂಲಕ ಮೇಲ್ಸೇತುವೆ ಹಾಗೂ ಅದರ ಮೇಲೆ ಮೆಟ್ರೋ ಮಾರ್ಗವನ್ನು ನಿರ್ಮಾಣ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ ಮೆಟ್ರೋ ಮಾರ್ಗ ಮಾಡಿದರೂ ಮೇಲ್ಸೇತುವೆ ಜತೆಯಲ್ಲೇ ಮೆಟ್ರೋ ಮಾರ್ಗವನ್ನು ನಿರ್ಮಾಣ ಮಾಡಲಾಗುವುದು. ಇದರಿಂದ ಖಾಸಗಿ ಭೂಮಿ ವಶಕ್ಕೆ ಪಡೆಯುವ ಪ್ರಕ್ರಿಯೆಯಿಂದ ಮುಕ್ತರಾಗುತ್ತೇವೆ. ಬಿಬಿಎಂಪಿ ಹಾಗೂ ಬಿಎಂಆರ್‌ಸಿಎಲ್ ಸಹಯೋಗದಲ್ಲಿ ಈ ಕಾಮಗಾರಿಗಳನ್ನು ಮಾಡಲಾಗುವುದು” ಎಂದು ಹೇಳಿದರು.

ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಸ್ಥಳೀಯ ಶಾಸಕರಾದ ದಿನೇಶ್ ಗುಂಡೂರಾವ್, ಆಡಳಿತಗಾರರಾದ ಎಸ್.ಆರ್ ಉಮಾಶಂಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು‌.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...