ಬಿಬಿಎಂಪಿ | ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಕಾರ್ಯಕ್ಕೆ ಚಾಲನೆ

Date:

ಬಿಬಿಎಂಪಿ ವ್ಯಾಪ್ತಿಯಲ್ಲಿ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದರು.

ನಗರದ ಪಶ್ಚಿಮ ವಲಯದ ಮತ್ತಿಕೆರೆ ಹಾಗೂ ಮಲ್ಲೇಶ್ವರಂ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದ್ದು, ಮೈಕ್ರೋ ಚಿಪ್ ತಂತ್ರಜ್ಞಾನದಿಂದ ನಾಯಿಯ ವಾಸಸ್ಥಳ, ಲಸಿಕೆ ನೀಡಿದ ದಿನಾಂಕ, ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ ದಿನಾಂಕ ಹಾಗೂ ಇನ್ನಿತರ ಅಂಶಗಳನ್ನು ಶಾಶ್ವತವಾಗಿ ಅದರಲ್ಲಿ ಶೇಖರೀಡಿಸಬಹುದಾಗಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಮೈಕ್ರೋ ಚಿಪ್ ತಂತ್ರಜ್ಞಾನವನ್ನು ಈಗಾಗಲೇ ಹಲವಾರು ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳಿಗೆ ಅಳವಡಿಸಿಕೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ BIZ ORBIT ಎಂಬ ಸಂಸ್ಥೆಯ ಸಹಯೋಗದೊಂದಿಗೆ ಪ್ರಾಯೋಗಿಕವಾಗಿ ಬೀದಿ ನಾಯಿಗಳಿಗೆ ಅಳವಡಿಕೆ ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಕಿಕಾಳು ಗಾತ್ರದ ಮೈಕ್ರೋ ಚಿಪ್ ಅಳವಡಿಕೆ

ಮೈಕ್ರೋಚಿಪ್ ಒಂದು ಅಕ್ಕಿಕಾಳು ಗಾತ್ರದ ಸಾಧನವಾಗಿದ್ದು, ಪ್ರಾಣಿಗಳಲ್ಲಿ ಶಾಶ್ವತ ಗುರುತಿನ ವಿಧಾನವಾಗಿರುತ್ತದೆ. ಇದನ್ನು ಪ್ರಾಣಿಗಳ ಚರ್ಮದ ಕೆಳಗೆ ಇಂಜೆಕ್ಷನ್ ಮೂಲಕ ಇರಿಸಲಾಗುವುದು. ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ ಮತ್ತು ಇದು ಪ್ರಾಣಿಗಳ ಜೀವನ ಪರ್ಯಂತ ಶಾಶ್ವತ ಗುರುತಾಗಿ ಬಳಸಬಹುದಾಗಿರುತ್ತದೆ. ಇದು ಪ್ರಪಂಚದಾದ್ಯಂತ ಬಳಸಲಾಗುವ ಯೂನಿಕ್ ಸಂಖ್ಯೆಯಾಗಿರುತ್ತದೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಂದ ಮತ್ತೊಂದು ಅಸಹ್ಯಕರ ಹೇಳಿಕೆ: ವ್ಯಾಪಕ ಖಂಡನೆ

ಯಶಸ್ವಿಯಾದರೆ ಇರತೆ ವಲಯಗಳಲ್ಲೂ ಅಳವಡಿಕೆ

ಪ್ರಾಯೋಗಿಕ ಮೈಕ್ರೋ ಚಿಪ್ ಅಳವಡಿಸುವ ಕಾರ್ಯ ಯಶಸ್ವಿಯಾದರೆ, ಅದನ್ನು ಪಾಲಿಕೆಯ ಎಲ್ಲಾ ವಲಯಗಳಲ್ಲಿಯೂ ಬೀದಿ ನಾಯಿಗಳಿಗೆ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪಾಲಿಕೆ ವತಿಯಿಂದ ಬೀದಿ ನಾಯಿಗಳಿಗೆ ಸಂಯೋಜಿತ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಮೈಕ್ರೋ ಚಿಪ್ ಅಳವಡಿಸುವ ತಂತ್ರಜ್ಞಾನದಿಂದ ಬೀದಿ ನಾಯಿಗಳಿಗೆ ಮತ್ತೆ-ಮತ್ತೆ ಲಿಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.

ಪ್ರಸ್ತುತ ಬಣ್ಣ ಬಳಸಿ ಗುರುತಿಸಲಾಗುತ್ತಿದೆ

ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಲಸಿಕೆ ಹಾಕಿದ ಬೀದಿನಾಯಿಗಳಿಗೆ ಬಣ್ಣವನ್ನು ಬಳಸಿ ಗುರುತಿಸಲಾಗುತ್ತಿದ್ದು, ಒಂದು ವಾರ ಮಾತ್ರ ಬಣ್ಣದ ಗುರುತು ಪತ್ತೆಹಚ್ಚಬಹುದಾಗಿರುತ್ತದೆ. ಆದುದರಿಂದ ಬೀದಿನಾಯಿಗಳಿಗೆ ಪದೇ ಪದೇ ಲಸಿಕೆ ಹಾಕುವ ಸಾಧ್ಯತೆಯಿರುತ್ತದೆ. ಮೈಕ್ರೋ ಚಿಪ್ ತಂತ್ರಜ್ಞಾನದಿಂದ ಈ ನ್ಯೂನತೆಯನ್ನು ಸರಿಪಡಿಸಬಹುದಾಗಿರುತ್ತದೆ ಹಾಗು ನಾಯಿಗಳಲ್ಲಿ ಲಸಿಕೆ ಹಾಕಿರುವ ಮಾಹಿತಿಯನ್ನು ನಿಖರವಾಗಿ ತಿಳಿಯಬಹುದಾಗಿರುತ್ತದೆ.

ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಸುವ ಕಾರ್ಯದಿಂದ, ಬೀದಿ ನಾಯಿಗಳ ನಿಖರವಾದ ಮಾಹಿತಿಯನ್ನು ಪಡೆಯಬಹುದಾಗಿದೆ. ಅಲ್ಲದೆ ಬೀದಿ ನಾಯಿಗಳಿಗೆ ಮತ್ತೆ-ಮತ್ತೆ ಲಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು...