ಚೀನಾದಲ್ಲಿ ನ್ಯುಮೋನಿಯಾ | ಪ್ಯಾನಿಕ್ ಆಗುವ ಅವಶ್ಯಕತೆ ಇಲ್ಲ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Date:

  • ಡಬ್ಲ್ಯುಎಚ್‌ಒ ಕೂಡ ಇದರ ಬಗ್ಗೆ ಎಚ್ಚರಿಸಿದೆ
  • ಎಲ್ಲ ಸೌಲಭ್ಯ ಮಾಡಿಕೊಳ್ಳುವಂತೆ ಹೇಳಿದ್ದೇವೆ

ಚೀನಾದಲ್ಲಿ ನ್ಯುಮೋನಿಯಾ ಶುರುವಾಗಿದೆ. ಡಬ್ಲ್ಯುಎಚ್‌ಒ ಕೂಡ ಇದರ ಬಗ್ಗೆ ಎಚ್ಚರಿಸಿದೆ. ಪ್ಯಾನಿಕ್ ಆಗುವಂತ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ಕೊಟ್ಟಿದೆ. ನಾವು ಆಸ್ಪತ್ರೆಗಳಿಗೆ ಸೂಚನೆ ಕೊಟ್ಟಿದ್ದೇವೆ. ಎಲ್ಲ ಸೌಲಭ್ಯ ಮಾಡಿಕೊಳ್ಳುವಂತೆ ಹೇಳಿದ್ದೇವೆ” ಎಂದರು.

“ಡಿಸೆಂಬರ್‌ನಲ್ಲಿ ಕೋಲ್ಡ್ ಹೆಚ್ಚಿರುತ್ತದೆ. ಕೆಮ್ಮು, ಜ್ವರ ಬಂದರೆ ತಕ್ಷಣ ಚಿಕಿತ್ಸೆ ಪಡೆಯಬೇಕು. ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಇದೆ. ಸರಿಯಾಗಿ‌ ಆಸ್ಪತ್ರೆಗೆ ಡ್ರಗ್ಸ್ ಸಪ್ಲೈ ‌ಆಗ್ತಿಲ್ಲ. ಇದರಿಂದ ಸಮಸ್ಯೆಯಾಗ್ತಿದೆ. ಇದರ ಬಗ್ಗೆ ನಾವು ಗಮನಹರಿಸಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭ್ರೂಣ ಹತ್ಯೆಗಳು ನಡೆಯುತ್ತಿವೆ. ಹೆಣ್ಣುಮಕ್ಕಳ ಅನುಪಾತ ಕಡಿಮೆಯಾಗ್ತಿದೆ. ಇದರಿಂದ ಭ್ರೂಣ ಹತ್ಯೆ ಆಗ್ತಿದೆ ಅನ್ನೋದು ಅರ್ಥ ಒಂದೇ ಕಡೆ ಅಲ್ಲ, ರಾಜ್ಯದ ಹಲವು ಕಡೆ ಇದೆ. ಇದೊಂದು ಸಾಮಾಜಿಕ ಪಿಡುಗು. ಕೇವಲ ಆರೋಗ್ಯ ಇಲಾಖೆಗೆ ಸೀಮಿತವಲ್ಲ. ಇದೊಂದು ಸೋಶಿಯಲ್ ಪ್ರಾಬ್ಲಂ ಕೂಡ ಹೌದು. ನಾವು ಇದನ್ನ ಗಂಭೀರವಾಗಿ ತೆಗೆದುಕೊಂಡಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಖ್ಯಮಂತ್ರಿ ಜನಸ್ಪಂದನ; ಆಡಳಿತ ವೈಫಲ್ಯದ ವಿರಾಟ್ ದರ್ಶನ

“ಭ್ರೂಣ ಹತ್ಯೆ ಪ್ರಕರಣ ವಿಚಾರವಾಗಿ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ಕೊಡಬೇಕು. ಎಷ್ಟು ಅಬಾರ್ಷನ್ ಆಗ್ತಿದೆ ಐಡೆಂಟಿಫೈ ಮಾಡಬೇಕು. ರಿಜಿಸ್ಟರ್ ಆಗಿ ಬರದೇ ಹೋದರೆ ಚೆಕ್ ಮಾಡಬೇಕು. ಇದರ ಬಗ್ಗೆ ಸರಿಯಾದ ಪ್ರೊಸೀಜರ್ ಆಗಬೇಕು” ಎಂದು ಸೂಚಿಸಿದ್ದೇನೆ ಎಂದರು.

“ನಾಳೆ, ನಾಡಿದ್ದು ಇದರ ಬಗ್ಗೆ ಪ್ರೊಸೀಜರ್ ಮಾಡುತ್ತೇವೆ. ನಾವು ಕೂಡ ಇಡೀ ರಾಜ್ಯದಲ್ಲಿ ಪ್ರವಾಸ ಮಾಡ್ತೇವೆ. ಖುದ್ದು ನಾವೇ ಪರಿಶೀಲನೆ ಮಾಡ್ತೇವೆ. ಈ ಬಗ್ಗೆ ಸಚಿವರುಗಳ ಸಮಿತಿ ಕೂಡ ರಚನೆ ಮಾಡುತ್ತೇವೆ. ನಮ್ಮ ಅಧಿಕಾರಿಗಳು ಮಂಡ್ಯಕ್ಕೂ ‌ಹೋಗಿದ್ದಾರೆ” ಎಂದರು.

ಆಯುಷ್ಮಾನ್ ಭಾರತ್ ಕಾರ್ಡ್ ಸಮಸ್ಯೆ ವಿಚಾರವಾಗಿ ಮಾತನಾಡಿದ ಸಚಿವರು, “ಕಾರ್ಡ್‌ಗಳು ವಿತರಣೆಯಾಗಬೇಕು. 1500 ಕೋಟಿ ರೂ.ಗಳನ್ನು ಆಯುಷ್ಮಾನ್ ಕಾರ್ಡ್ ಬಳಸುವ ಆಸ್ಪತ್ರೆಗಳಿಗೆ ಕೊಡ್ತಿದ್ದೇವೆ. ಬಿಪಿಎಲ್ ಕಾರ್ಡ್ ದಾರರಿಗೆ ಇದು ಉಪಯೋಗವಾಗಲಿದೆ. ಆಯುಷ್ಮಾನ್ ಕಾರ್ಡ್ ಇರಲೇಬೇಕೆಂದಿಲ್ಲ. ಬಿಪಿಎಲ್ ಕಾರ್ಡ್ ಇದ್ರೂ ಟ್ರೀಟ್ ಮೆಂಟ್ ಸಿಗಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...