ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸ್ ದೌರ್ಜನ್ಯ | ಪರಿಹಾರ ನೀಡಿದ ಸರ್ಕಾರದ ನಡೆಗೆ ಸ್ವಾಗತ ಎಂದ ಪಿಯುಸಿಎಲ್

Date:

ಪೊಲೀಸರಿಂದ ಹಲ್ಲೆಗೆ ತುತ್ತಾಗಿದ್ದ ಇಬ್ಬರು ಮಹಿಳಾ ಲೈಂಗಿಕ ಕಾರ್ಯಕರ್ತೆಯರಿಗೆ ಪರಿಹಾರವಾಗಿ ರಾಜ್ಯ ಸರ್ಕಾರವು ತಲಾ ₹20 ಸಾವಿರ ಪರಿಹಾರ ನೀಡಿದೆ. ಸರ್ಕಾರದ ಈ ಕ್ರಮವನ್ನು ಪೀಪಲ್ಸ್ ಯೂನಿಯನ್ ಫಾರ್ ಸಿಲ್ ಲೈಬರ್ಟೀಸ್ (ಪಿಯುಸಿಎಲ್) ಸ್ವಾಗತಿಸಿದೆ.

ಗೌರಮ್ಮ (ಹೆಸರು ಬದಲಾಯಿಸಲಾಗಿದೆ) ಮತ್ತು ಸುಮಾ (ಹೆಸರು ಬದಲಾಯಿಸಲಾಗಿದೆ) ವಿರುದ್ಧ ಪೊಲೀಸರು ನಡೆಸಿದ ಹಿಂಸಾಚಾರಕ್ಕಾಗಿ ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗ 20,000 ಹಣವನ್ನು ಪರಿಹಾರ ನೀಡುವಂತೆ ಆದೇಶಿಸಿತ್ತು. ಅದರಂಗೆ, ಸರ್ಕಾರವು ಇಬ್ಬರಿಗೂ ಚೆಕ್ನೀಡಿದೆ.

ಪೊಲೀಸ್ ಠಾಣೆಯಲ್ಲಿ ತಮಗೆ ಕ್ರೂರ ದೈಹಿಕ ಹಿಂಸೆ ನೀಡಿದ್ದಾರೆ ಹಾಗೂ ತಮ್ಮ ಘನತೆ ಮತ್ತು ಸ್ವಾಭಿಮಾನದ ಹಕ್ಕನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಅಧಿಕಾರಿಗಳು ಮತ್ತು ಗೃಹ ರಕ್ಷಕರ ವಿರುದ್ಧ ಸಂತ್ರಸ್ತರು ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯು ಸಾರ್ವಜನಿಕ ವಿಚಾರಣೆಯ ಆಧಾರದ ಮೇಲೆ ಓಬವ್ವ ಪಡೆಯನ್ನು ವಿಸರ್ಜಿಸಲು ಶಿಫಾರಸನ್ನು ಮಾಡಿದೆ.

ಲೈಂಗಿಕ ಕೆಲಸದಲ್ಲಿ ಮಹಿಳೆಯರ ಹಕ್ಕುಗಳು ಮತ್ತು ಹಿಂಸೆಯಿಂದ ಮುಕ್ತವಾಗಿರುವ ಹಕ್ಕನ್ನು ಗುರುತಿಸುವ ಪರಿಹಾರದ ಹೊರತಾಗಿಯೂ ಕೂಡಾ, ಅಂತಹ ಹಿಂಸಾಚಾರ ಮರುಕಳಿಸದಂತೆ ನೋಡಿಕೊಳ್ಳಲು ರಾಜ್ಯ ಮಾನವ ಹಕ್ಕು ಆಯೋಗ ಆದೇಶ ನೀಡಿದೆ.

ಲೈಂಗಿಕ ಕೆಲಸದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಹಿಳೆಯರಿಬ್ಬರ ಮೇಲಿನ ದೌರ್ಜನ್ಯದ ಭಯವನ್ನು ಕೊನೆಗೊಳಿಸುವ ಐತಿಹಾಸಿಕ ಮೊದಲ ಹೆಜ್ಜೆಯಾಗಿ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮವನ್ನು ಸ್ವಾಗತಿಸುತ್ತೇವೆ ಎಂದುಪಿಯುಸಿಎಲ್ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲೌಡ್ ಸ್ಪೀಕರ್ ಜಗಳ; ಐವರ ಬಂಧನ

ಪೊಲೀಸ್ ಸಂವೇದನಾ ತರಬೇತಿಗಳನ್ನು ನಡೆಸುವ ಮೂಲಕ ಲೈಂಗಿಕ ಕೆಲಸದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು, ರಾಜ್ಯವು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂಬ ನ್ಯಾಯಸಮ್ಮತವಾದ ನಿರೀಕ್ಷೆಯನ್ನು ಹೊಂದಿರುವುದಾಗಿ ಪಿಯುಸಿಎಲ್ ತಿಳಿಸಿದೆ.

“ಪೋಲೀಸ್ ಹಿಂಸಾಚಾರ ಮತ್ತು ಲೈಂಗಿಕ ಕಾರ್ಯಕರ್ತರ ಸಾಮಾಜಿಕ ತಿರಸ್ಕಾರದ ಸಮಸ್ಯೆಗೆ ದೀರ್ಘಾವಧಿಯ ಪರಿಹಾರವೆಂದರೆ ವಯಸ್ಕ ಲೈಂಗಿಕ ಕೆಲಸವನ್ನು ಅಪರಾಧೀಕರಣಗೊಳಿಸುವುದು” ಎಂದು ಪಿಯುಸಿಎಲ್ ಕರ್ನಾಟಕದ ಅಧ್ಯಕ್ಷ ಅರವಿಂದ್ ನೆರೈನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...