ಅಗತ್ಯ ಸೇವೆಗಳ ಗೈರು ಮತದಾರರಿಗೆ (ಎವಿಇಎಸ್‌) ಅಂಚೆ ಮತದಾನ ಸೌಲಭ್ಯ ವ್ಯವಸ್ಥೆ

Date:

ಲೋಕಸಭಾ ಚುನಾವಣೆಯಲ್ಲಿ 12 ನಾನಾ ಇಲಾಖೆಗಳ ಅಗತ್ಯ ಸೇವೆಗಳ ಗೈರು ಮತದಾರರಿಗೆ(ಎವಿಇಎಸ್‌) ಅಂಚೆ ಮತದಾನ (ಪೋಸ್ಟಲ್ ಬ್ಯಾಲೆಟ್) ದ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಆಯಾ ಇಲಾಖೆಗಳಿಂದ ಪಟ್ಟಿ ನೀಡಲು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂಚೆ ಮತದಾನಕ್ಕೆ ಸಂಬಂಧಿಸಿದಂತೆ, ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಚುನಾವಣಾ ಆಯೋಗವು 12 ವಿವಿಧ ಇಲಾಖೆಗಳನ್ನು ಅಗತ್ಯ ಸೇವೆಗಳೆಂದು ಪರಿಗಣಿಸಿದ್ದು, ಆಯಾ ಇಲಾಖಾವಾರು ನೀಡುವ ಪಟ್ಟಿಯ ಅನುಸಾರ ಅಂಚೆ ಮತದಾನದ ಮೂಲಕ ಮತ ಚಾಯಿಸಲು ಅವಕಾಶ ಕಲ್ಪಿಸಲಾಗುವುದು” ಎಂದು ತಿಳಿಸಿದರು.

ಇಲಾಖಾವಾರು ಅಗತ್ಯ ಸೇವೆಗಳ ಗೈರು ಮತದಾರರ ಅರ್ಹ ಮತದಾರರ ಪಟ್ಟಿ ನೀಡಿದ ನಂತರ 12ಡಿ ನಮೂನೆಗಳಲ್ಲಿ ಭರ್ತಿ ಮಾಡಿ, ಮಾರ್ಚ್‌ 22ರ ಶುಕ್ರವಾರದೊಳಗಾಗಿ ಸಲ್ಲಿಸಲು ಸೂಚಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅರ್ಹ ಮತದಾರರು ನೋಂದಣಿಯಾಗಿರುವ ಲೋಕಸಭಾ ಕ್ಷೇತ್ರದಲ್ಲಿ ಸ್ಥಾಪಿಸಲಾದ ಪೋಸ್ಟಲ್ ವೋಟಿಂಗ್ ಸೆಂಟರ್(ಪಿವಿಸಿ) ನಲ್ಲಿ ಮಾತ್ರ ಈ ಬಾರಿ ಅಂಚೆ ಮತದಾನ ಮಾಡಲು ಅವಕಾಶವಿದೆ. ಅಂಚೆ ಮೂಲಕ ಅಂಚೆ ಮತದಾನ ಪತ್ರವನ್ನು ನೀಡುವ/ತಲುಪಿಸುವ ವ್ಯವಸ್ಥೆ ಈ ಬಾರಿ ಇರುವುದಿಲ್ಲ” ಎಂದು ಹೇಳಿದರು.

ವಿದ್ಯುತ್ ಇಲಾಖೆ, ಬಿ.ಎಸ್.ಎನ್.ಎಲ್ ಇಲಾಖೆ, ರೈಲ್ವೆ ಇಲಾಖೆ, ದೂರದರ್ಶನ ಇಲಾಖೆ, ಆಲ್ ಇಂಡಿಯಾ ರೇಡಿಯೋ ಇಲಾಖೆ, ಆರೋಗ್ಯ ಇಲಾಖೆ, ವಾಯುಯಾನ ಇಲಾಖೆ, ಬಸ್ ಸೇವೆಗಳು(ಕೆ.ಎಸ್.ಆರ್.ಟಿ.ಸಿ/ಬಿ.ಎಂ.ಟಿ.ಸಿ), ಅಗ್ನಿಶಾಮಕ ಸೇವೆಗಳ ಇಲಾಖೆ, ಭಾರತ ಚುನಾವಣಾ ಆಯೋಗದಿಂದ ಮತದಾನದ ದಿನಂದಂದು ಚುನಾವಣಾ ಕವರೇಜ್‌ಗಾಗಿ ಅಧಿಕೃತಗೊಂಡ ಮಾಧ್ಯಮ ವ್ಯಕ್ತಿಗಳು, ಸಂಚಾರ ಪೊಲೀಸ್ ಇಲಾಖೆ ಹಾಗೂ ಆಂಬ್ಯುಲೆನ್ಸ್ ಅಗತ್ಯ ಸೇವೆಯ 12 ಇಲಾಖೆಗಳಾಗಿವೆ.

ಈ ಸುದ್ದಿ ಓದಿದ್ದೀರಾ? ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸ್ ದೌರ್ಜನ್ಯ | ಪರಿಹಾರ ನೀಡಿದ ಸರ್ಕಾರದ ನಡೆಗೆ ಸ್ವಾಗತ ಎಂದ ಪಿಯುಸಿಎಲ್

ಸಭೆಯಲ್ಲಿ ಆರೋಗ್ಯ ಇಲಾಖೆಯ ಆಯುಕ್ತ ಡಿ. ರಂದೀಪ್, ಪೋಸ್ಟಲ್ ಬ್ಯಾಲೆಟ್ ನೋಡಲ್ ಅಧಿಕಾರಿಯಾದ ಪಲ್ಲವಿ, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ರವಿ ಚಂದ್ರ ನಾಯ್ಕ್, 12 ವಿವಿಧ ಇಲಾಖೆಗಳ ನೋಡಲ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...