ಹಾಸನ ಪೆನ್ಡ್ರೈವ್ ಪ್ರಕರಣವು ಈಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದು ದೇಶದಲ್ಲೇ ಅತೀ ದೊಡ್ಡ ಹಗರಣ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.
ಹಾಸನ ಸಂಸದ, ಲೋಕಸಭೆ ಚುನಾವಣೆಯ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ರಾಷ್ಟ್ರಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣದ ತನಿಖೆಗೆ ಎಸ್ಐಟಿ ತಂಡ ರಚಿಸಲಾಗಿದೆ.
#WATCH | On the ‘obscene videos’ case involving JD(S) MP Prajwal Revanna, Nagalakshmi Choudhary, Chairperson of the Karnataka State Commission for Women says, “The SIT has started its investigation. And the team has got very efficient officials. So for me, the concern is the… pic.twitter.com/jNpppe2Dt6
— ANI (@ANI) April 29, 2024
ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಆಯೋಗದ ಡಾ. ನಾಗಲಕ್ಷ್ಮೀ ಚೌಧರಿ, “ಎಸ್ಐಟಿ ತನ್ನ ತನಿಖೆಯನ್ನು ಪ್ರಾರಂಭಿಸಲಾಗಿದ್ದು ಈ ಎಸ್ಐಟಿ ತಂಡದಲ್ಲಿ ಅತ್ಯಂತ ದಕ್ಷ ಅಧಿಕಾರಿಗಳು ಇದ್ದಾರೆ” ಎಂದು ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
“ಸಂತ್ರಸ್ತರ ರಕ್ಷಣೆಯ ಬಗ್ಗೆ ಚಿಂತಿಸುತ್ತಿದ್ದೇವೆ. ಸಂತ್ರಸ್ತರು ಮುಕ್ತವಾಗಿ ಬಂದು ದೂರು ದಾಖಲಿಸಬಹುದು,” ಎಂದು ತಿಳಿಸಿದ್ದಾರೆ.
“ನಮ್ಮ ಕಚೇರಿಗೆ ಲಭ್ಯವಾಗಿರುವ ಪೆನ್ಡ್ರೈವ್ನಲ್ಲಿ ನೂರಾರು ವಿಡಿಯೋಗಳಿವೆ. ನಾನು ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆಯುತ್ತೇನೆ. ನನ್ನ ಪ್ರಕಾರ ಇದು ಭಾರತದ ಅತ್ಯಂತ ದೊಡ್ಡ ಹಗರಣವಾಗಿದೆ” ಎಂದು ಅಭಿಪ್ರಾಯಿಸಿದ್ದಾರೆ.
ಇದನ್ನು ಓದಿದ್ದೀರಾ? ಹಾಸನ ಪೆನ್ಡ್ರೈವ್ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಎಚ್.ಡಿ ಕುಮಾರಸ್ವಾಮಿ
ಇನ್ನು ಈ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಡಾ.ನಾಗಲಕ್ಷ್ಮೀ ಚೌಧರಿ ಅವರು, “ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಇರುವ ಪೆನ್ ಡ್ರೈವ್ ಮಹಿಳಾ ಆಯೋಗದ ಕಚೇರಿಗೂ ತಲುಪಿದೆ. ದೇಶವೇ ತಲೆ ತಗ್ಗಿಸುವ ಘಟನೆ ಇದು. ಹೆದರಿಸಿ, ನಂಬಿಸಿ ಈ ವೀಡಿಯೋ ಮಾಡಲಾಗಿದೆ. ದೂರು ದಾಖಲಾಗಿದೆ” ಎಂದು ತಿಳಿಸಿದ್ದರು.




