ಹರಿಹರದಲ್ಲಿ ಬಿ ಬಸವಲಿಂಗಪ್ಪ, ಬಿ ಕೃಷ್ಣಪ್ಪ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ: ಸಚಿವ ಮಹದೇವಪ್ಪ ಭರವಸೆ

Date:

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಕರ್ನಾಟಕದ ದಲಿತ ಚಳವಳಿಯ ಪ್ರೇರಕ ಶಕ್ತಿಗಳಾದ ಮಾಜಿ ಸಚಿವ ಬಿ ಬಸವಲಿಂಗಪ್ಪ ಮತ್ತು ಪ್ರೊ. ಬಿ ಕೃಷ್ಣಪ್ಪ ಅವರ ಹೆಸರಿನಲ್ಲಿ ಅಧ್ಯಯನ ಪೀಠಗಳನ್ನು ಸ್ಥಾಪಿಸುವ ಪ್ರಸ್ತಾವನೆ ಬಂದರೆ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

​ಕಾಂಗ್ರೆಸ್‌ನ ವಿಧಾನ ಪರಿಷತ್ತಿನ ಸದಸ್ಯ ರಮೇಶ ಬಾಬು ಅವರು ನಿಯಮ 72ರ ಅಡಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಸಚಿವರು ಈ ಲಿಖಿತ ಉತ್ತರ ನೀಡಿದ್ದಾರೆ.

ಕರ್ನಾಟಕದಲ್ಲಿ ದಲಿತ ಚಳವಳಿಗೆ ವೈಚಾರಿಕವಾಗಿ ಮತ್ತು ಸೈದ್ಧಾಂತಿಕವಾಗಿ ಶಕ್ತಿ ತುಂಬಿದ ಕೀರ್ತಿ ಬಿ ಬಸವಲಿಂಗಪ್ಪ ಮತ್ತು ಪ್ರೊ. ಬಿ ಕೃಷ್ಣಪ್ಪ ಅವರಿಗೆ ಸಲ್ಲುತ್ತದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನವರಾದ ಈ ಇಬ್ಬರು ಮಹನೀಯರ ಹೆಸರಿನಲ್ಲಿ ಅವರ ತವರು ನೆಲದಲ್ಲಿ ಅಧ್ಯಯನ ಪೀಠ ಸ್ಥಾಪಿಸುವುದು ಅತ್ಯಂತ ಸೂಕ್ತ ಎಂದು ರಮೇಶ ಬಾಬು ಪ್ರತಿಪಾದಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಬೈಲ್ ಮೃತ್ಯು ಮೋಡಿಯಿಂದ ಮಕ್ಕಳನ್ನು ರಕ್ಷಿಸುವವರಾರು?

ಈಗಾಗಲೇ ಈ ಇಬ್ಬರು ನಾಯಕರ ಹೆಸರಿನಲ್ಲಿ ಸ್ಮಾರಕ ಮತ್ತು ಅಧ್ಯಯನ ಕೇಂದ್ರಗಳಿಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದು ಸಚಿವರು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ.

ಹರಿಹರ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪ್ರೊ. ಬಿ ಕೃಷ್ಣಪ್ಪನವರ ಸ್ಮಾರಕ ಭವನ (ಸಾಮಾಜಿಕ ಮತ್ತು ಸಾಂಸ್ಕೃತಿಕ ಭವನ) ನಿರ್ಮಾಣಕ್ಕಾಗಿ 2.5 ಕೋಟಿ ರೂ. ಮಂಜೂರು ಮಾಡಲಾಗಿದ್ದು, ಪೂರ್ಣ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರೊ. ಬಿ ಕೃಷ್ಣಪ್ಪನವರ ಹೆಸರಿನಲ್ಲಿ ಅಧ್ಯಯನ ಕೇಂದ್ರ ಸ್ಥಾಪನೆಗೆ 2016ರಲ್ಲಿ 1 ಕೋಟಿ ರೂ. ಮಂಜೂರು ಮಾಡಿ, ಬಿಡುಗಡೆಗೊಳಿಸಲಾಗಿದೆ. ಬೆಂಗಳೂರಿನಲ್ಲಿ ಬಿ ಬಸವಲಿಂಗಪ್ಪನವರ ಸ್ಮಾರಕ ಅಭಿವೃದ್ಧಿ ಹಾಗೂ ಸೌಂದರ್ಯೀಕರಣಕ್ಕಾಗಿ 1 ಕೋಟಿ ರೂ. ಮಂಜೂರು ಮಾಡಲಾಗಿದ್ದು, ಇದರಲ್ಲಿ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರಸ್ತುತ ಹರಿಹರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಈ ಇಬ್ಬರು ನಾಯಕರ ಹೆಸರಿನಲ್ಲಿ ಯಾವುದೇ ಅಧ್ಯಯನ ಪೀಠ ಸ್ಥಾಪನೆಯಾಗಿಲ್ಲ. ಆದಾಗ್ಯೂ, ಈ ಸಂಬಂಧ ಪ್ರಸ್ತಾವನೆಯನ್ನು ಪಡೆದು ಅಧ್ಯಯನ ಪೀಠಗಳ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...