ʼಸರೋಜಿನಿ ಮಹಿಷಿ ವರದಿʼ ಜಾರಿಗೆ ಆಗ್ರಹಿಸಿ ಜುಲೈ 1ರಂದು ಪ್ರತಿಭಟನೆ: ಕರವೇ ನಾರಾಯಣ ಗೌಡ 

Date:

“ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ಮೀಸಲಿಡಬೇಕು ಎಂಬ ಡಾ ಸರೋಜಿನಿ ಮಹಿಷಿ ವರದಿ ಜಾರಿಯಾಗುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಲು ಕರ್ನಾಟಕ ರಕ್ಷಣ ವೇದಿಕೆ ಜುಲೈ1ರಂದು ರಾಜ್ಯಾದ್ಯಂತ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಿದೆ. ಇದಕ್ಕೆ ಸಮಸ್ತ ಕನ್ನಡಿಗರು ನಾಮಫಲಕ ಹೋರಾಟಕ್ಕೆ ಕೊಟ್ಟಷ್ಟೇ ಬೆಂಬಲವನ್ನು ಕೊಡಬೇಕು” ಕರವೇ ಅಧ್ಯಕ್ಷ ನಾರಾಯಣಗೌಡರು ಕರೆ ನೀಡಿದ್ದಾರೆ.

ಶುಕ್ರವಾರ ಕರವೇ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸರೋಜಿನಿ ಮಹಿಷಿ ವರದಿ ಜಾರಿಯಾಗುವುದು ಕನ್ನಡಿಗರ ಬದುಕಿನ ಮತ್ತು ಉದ್ಯೋಗದ ಪ್ರಶ್ನೆಯಾಗಿದೆ. ರಾಮಕೃಷ್ಣ ಹೆಗಡೆ ಅವಧಿಯ ವೇಳೆ ತಯಾರಾಗಿದ್ದ ವರದಿಯು ಕಾಯ್ದೆಯಾಗದೇ ನನೆಗುದಿಗೆ ಬಿದ್ದಿದೆ. ಅಧಿಕಾರಕ್ಕೆ ಬಂದ ಯಾವ ಪಕ್ಷವು ವರದಿ ಜಾರಿ ಮಾಡಲು ಆಸಕ್ತಿ ತೋರದೆ ಕನ್ನಡಿಗರಿಗೆ ಅನ್ಯಾಯ ಮಾಡಿವೆ” ಎಂದು ಬೇಸರ ವ್ಯಕ್ತಪಡಿಸಿದರು.

“ಬಹುರಾಷ್ಟ್ರಿಯ ಕಂಪನಿಗಳು ಕರ್ನಾಟಕಕ್ಕೆ ಬರುತ್ತಿವೆ ಆದರೆ ಈ ನೆಲದ ಮಕ್ಕಳಿಗೆ ಕೆಲಸ ನೀಡುತ್ತಿಲ್ಲ. ಕೇವಲ ಡಿ ದರ್ಜೆ ಕೆಲಸ ನೀಡುತ್ತಿವೆಯೇ ವಿನಃ ಎ,ಬಿ, ಸಿ ದರ್ಜೆಯ ವೃತ್ತಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನೀಡುತ್ತಿಲ್ಲ. ಆದ್ದರಿಂದ ಮಹಿಷಿ ವರದಿಯಂತೆ ಖಾಸಗಿ ಸಂಸ್ಥೆಗಳಲ್ಲಿ ಶೇಕಡ 100ರಷ್ಟು ಸಿ ಮತ್ತು ಡಿ ದರ್ಜೆಯ ಕೆಲಸಗಳನ್ನು ಹಾಗೆಯೇ ಎ ಮತ್ತು ಬಿ ದರ್ಜೆಯಲ್ಲಿ ಶೇಕಡ 70-80ರಷ್ಟು ಕೆಲಸಗಳನ್ನು ಕನ್ನಡಿಗರಿಗೆ ಮೀಸಲಿಡಬೇಕಾಗಿ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಲು ಈ ಹೋರಾಟ ಹಮ್ಮಿಕೊಂಡಿದ್ದೇವೆ. ಈ ಪ್ರತಿಭಟನೆಯು ಶಾಂತಿ ಸ್ವರೂಪದಲ್ಲಿದ್ದು ರಾಜ್ಯ ಸರ್ಕಾರವೇನಾದರೂ ಹದಿನೈದು ದಿನಗಳಲ್ಲಿ ಏನೂ ನಿರ್ಧಾರ ತೆಗೆದುಕೊಳ್ಳದೆ ಹೋದರೆ ಮುಂದಿನ ಹೋರಾಟ ಕ್ರಾಂತಿ ಸ್ವರೂಪದ್ದಾಗಿರುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರವೇ 31 ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಶಾಂತಿಯುತವಾಗಿ ಪ್ರತಿಭಟಿಸಿ, ಜಿಲ್ಲಾಧಿಕಾರಿಗಳನ್ನ ಭೇಟಿ ಮಾಡಿ ಮುಖ್ಯಮಂತ್ರಿಗೆ ಮನವಿ ಪತ್ರ ತಲುಪಿಸಲು ಕೋರಲಿದೆ. ಹಾಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅಂದು ಪ್ರತಿಭಟನೆ ಮಾಡಿ ಮುಖ್ಯಮಂತ್ರಿಯವರನ್ನು ನೇರವಾಗಿ ಭೇಟಿ ಮಾಡಿ ಮಹಿಷಿ ವರದಿ ಜೊತೆ ಕರವೇ ತಯಾರಿಸಿದ ವರದಿಯನ್ನು ನೀಡಲಿದೆ. ನಮ್ಮ ಈ ಹೋರಾಟದಲ್ಲಿ ಸಾಹಿತಿಗಳು, ಕಲಾವಿದರು, ಮಠಾಧೀಶರು, ಕನ್ನಡ ಸಾಹಿತ್ಯ ಪರಿಷತ್ತು, ಹಲವು ಗಣ್ಯರು ಭಾಗವಹಿಸಲಿದ್ದಾರೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...