ಕ್ರಿಮಿನಲ್ ಪ್ರಕರಣ ಬಹಿರಂಗಪಡಿಸಲು ಅಭ್ಯರ್ಥಿಗಳಿಗೆ ನಮೂನೆ ಒದಗಿಸಲು ಚುನಾವಣಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

Date:

ಕರ್ನಾಟಕ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಇತರ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವಂತೆ ಸೂಚಿಸಿದೆ.

ನಿರ್ದೇಶನದ ಪ್ರಕಾರದಂತೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಬಾಕಿ ಉಳಿದಿರುವ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ, ತಾವು ಭಾಗಿಯಾಗಿದ್ದೇವೆ ಎಂದು ಘೋಷಿಸಬೇಕು ಎಂದು ರಾಜ್ಯ ಹೈಕೋರ್ಟ್ ತಿಳಿಸಿದೆ.

ಅರ್ಜಿದಾರರ ಚುನಾವಣೆಯನ್ನು ಚುನಾವಣಾ ನ್ಯಾಯಮಂಡಳಿಯು ತನ್ನ ವಿರುದ್ಧದ ಬಾಕಿಯಿರುವ ಕ್ರಿಮಿನಲ್‌ ಮೊಕದ್ದಮೆಗಳನ್ನು ಬಹಿರಂಗಪಡಿಸಲು ವಿಫಲವಾಗಿದೆ ಎಂಬ ಕಾರಣಕ್ಕಾಗಿ ರದ್ದುಗೊಳಿಸಿದೆ ಮತ್ತು ಅಂತಹ ಅಮಾನ್ಯೀಕರಣವನ್ನು ಹೈಕೋರ್ಟ್ ಏಕ ಸದಸ್ಯ ಪೀಠವು ಎತ್ತಿಹಿಡಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠವು ಏಕ ಪೀಠದ ಆದೇಶದ ವಿರುದ್ಧ ಅರ್ಜಿದಾರರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿತು.

ಈ ಸುದ್ದಿ ಓದಿದ್ದೀರಾ? ಮಲ ಬಾಚುವ ಮೃತ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ. ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ

ರಾಜ್ಯ ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಇತರ ಸಂಸ್ಥೆಗಳು ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯ ವಿಷಯದಲ್ಲಿ ಅಗತ್ಯವಾದ ನಮೂನೆಗಳನ್ನು ನೀಡುವ ಮೂಲಕ ಅಥವಾ ಸೇರಿಸುವ ಮೂಲಕ ಸುಪ್ರೀಂ ಕೋರ್ಟಿನ ನಿರ್ದೇಶನಗಳನ್ನು ಜಾರಿಗೊಳಿಸಬೇಕು. ಪ್ರತಿ ಅಭ್ಯರ್ಥಿಯು ಚುನಾವಣಾ ಆಯೋಗವು ಒದಗಿಸಿದಂತೆ ನಮೂನೆಯನ್ನು ಭರ್ತಿಮಾಡಬೇಕು ಮತ್ತು ನಮೂನೆಯಲ್ಲಿ ಅಗತ್ಯವಿರುವ ಎಲ್ಲ ವಿವರಗಳನ್ನು ದಾಖಲಿಸಬೇಕು. ಅಭ್ಯರ್ಥಿಯ ವಿರುದ್ಧ ಬಾಕಿಯಿರುವ ಕ್ರಿಮಿನಲ್ ಮೊಕದ್ದಮೆಗಳಿಗೆ ಸಂಬಂಧಿಸಿದಂತೆ ದಪ್ಪ ಅಕ್ಷರಗಳಲ್ಲಿ ಹೇಳತಕ್ಕದ್ದು ಎಂದು ಪೀಠ ಹೇಳಿತು.

ಚುನಾವಣಾ ಆಯೋಗವು ಕೂಡ ಅಭ್ಯರ್ಥಿಯ ಕ್ರಿಮಿನಲ್‌ ಪ್ರಕರಣಗಳ ಮಾಹಿತಿಯನ್ನು ಆಯೋಗದ ವೆಬ್‌ಸೈಟ್‌ ಹಾಗೂ ಮಾಧ್ಯಮಗಳಿಗೆ ತಿಳಿಸಬೇಕು. ರಾಜಕೀಯ ಪಕ್ಷಗಳು ಕೂಡ ತಮ್ಮ ಪಕ್ಷದ ಅಭ್ಯರ್ಥಿಗಳ ಕ್ರಿಮಿನಲ್ ಮಾಹಿತಿ ಬಗ್ಗೆ ವ್ಯಾಪಕವಾಗಿ ಪ್ರಸಾರವಾಗುವ ಪತ್ರಿಕೆಗಳಲ್ಲಿ ಘೋಷಣೆಯನ್ನು ಹೊರಡಿಸಬೇಕು ಎಂದು ನ್ಯಾಯಾಲಯ ತಿಳಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...