ಹೆಚ್ಚಿನ ಜನ ಮದ್ಯ ಸೇವಿಸಿ, ಕೇಕ್ ಕತ್ತರಿಸಿ, ಪಾರ್ಟಿ ಮಾಡಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದರೆ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು, ಅದೇ ಹಣವನ್ನು ಅನಾಥಾಶ್ರಮಕ್ಕೆ ನೀಡಿ ಮಾದರಿಯಾಗಿದ್ದಾರೆ. ತಮ್ಮ ಕಿರಿಯ ಅಧಿಕಾರಿಗಳಿಗೂ ಇದನ್ನು ಪಾಲಿಸುವಂತೆ ಸೂಚನೆ ನೀಡಿದ್ದಾರೆ.
ಹೊಸ ವರ್ಷ ಮತ್ತು ಕೆಲ ವಿಶೇಷ ದಿನಗಳಲ್ಲಿ ಹಿರಿಯ ಅಧಿಕಾರಿಗಳಿಗೆ ಕಿರಿಯ ಅಧಿಕಾರಿಗಳು ಹೂ ಗುಚ್ಛ, ಸಿಹಿ ತಿನಿಸು ನೀಡಿ ಶುಭಾಶಯ ಕೋರುವುದು ವಾಡಿಕೆ. ಆದರೆ ಈ ಬಾರಿ ಹೊಸ ವರ್ಷಕ್ಕೆ ಶುಭಾಶಯ ಹೇಳಲು ಬರುವ ಕಿರಿಯ ಅಧಿಕಾರಿಗಳು ಬೊಕ್ಕೆ, ಸಿಹಿ ತಿನಿಸು ತರದೆ ಆ ಹಣವನ್ನ ಅನಾಥಾಶ್ರಮಕ್ಕೆ ನೀಡಿ ಅಂತ ನಗರ ಪೊಲೀಸ್ ಆಯುಕ್ತ ದಯಾನಂದ್ ಸೂಚಿಸಿದ್ದಾರೆ. ಎಸಿಪಿ ಮತ್ತು ಇನ್ಸ್ಪೆಕ್ಟರ್ ಹಂತದ ಅಧಿಕಾರಿಗಳ ವರ್ಚ್ಯುಯಲ್ ಮೀಟಿಂಗ್ನಲ್ಲಿ ಕಮಿಷನರ್ ದಯಾನಂದ್ ಈ ಸಲಹೆ ನೀಡಿದ್ದಾರೆ.
Police not meant for the High and mighty but for the protection of the most weakest and vulnerable. Bengaluru city police rededicating ourselves in this New Year 2024. As the saying goes ‘Everybody counts or nobody counts’#NewYearWishes2024BCP pic.twitter.com/wdi93jdI9E
— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr) January 1, 2024
ಅಧಿಕಾರಿಗಳು ಹೂ ಗುಚ್ಛ ಮತ್ತು ಸಿಹಿ ತಿನಿಸಿಗಾಗಿ ಸಾವಿರಾರು ರೂಪಾಯಿ ಖರ್ಚು ಮಾಡುತ್ತಾರೆ. ಕೆಲವೇ ಗಂಟೆಗಳಲ್ಲಿ ಹೂ ಗುಚ್ಛ ವ್ಯರ್ಥವಾಗುತ್ತೆ. ಇದರಿಂದ ಯಾರಿಗೂ ಉಪಯೋಗವಿಲ್ಲ. ಹೀಗಾಗಿ ಆ ಹಣವನ್ನು ನಿಮ್ಮ ವ್ಯಾಪ್ತಿಯ ಅನಾಥಾಶ್ರಮಳಿಗೆ ದಿನಸಿ, ಸಿಹಿತಿನಿಸು ಅಥವಾ ಊಟಕ್ಕೆ ವ್ಯಯಿಸಿ ಎಂದು ಸಲಹೆ ನೀಡಿದ್ದಾರೆ.
ಇನ್ನು ಅನಾಥಾಶ್ರಮಗಳಿಗೆ ಸಹಾಯ ಮಾಡಿದ ಆ ಫೋಟೋವನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಿ. ಫೋಟೋ ಹಂಚಿಕೊಳ್ಳುವುದರಿಂದ ನೀವು ಮತ್ತೊಬ್ಬರಿಗೂ ಮಾದರಿಯಾಗುತ್ತೀರಾ ಎಂದು ಸಲಹೆ ನೀಡಿದ್ದಾರೆ. ಸದ್ಯ ನಗರ ಪೊಲೀಸ್ ಆಯುಕ್ತರು, ತಾವು ಹೇಳಿದ ರೀತಿ ಮಾಡಿ, ಟ್ವಿಟರ್ ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದು, ಮತ್ತೊಬ್ಬರಿಗೆ ಮಾದರಿಯಾಗಿದ್ದಾರೆ.
ಪೊಲೀಸರ ಸೇವೆ ಬಲಿಷ್ಟರಿಗಲ್ಲದೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಮುಡಿಪು ಎನ್ನುವ ನಿಟ್ಟಿನಲ್ಲಿ ಹೊಸ ವರ್ಷಕ್ಕೆ ಬೆಂಗಳೂರು ನಗರ ಪೊಲೀಸರ ಪಾದಾರ್ಪಣೆ….#NewYearWishes2024BCP pic.twitter.com/myamhpV2G4
— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr) January 1, 2024





