ಹಿರಿಯ ಪತ್ರಕರ್ತ ನಂಜುಂಡೇಗೌಡಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ

Date:

2023ನೇ ಸಾಲಿನ `ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’ ಹಿರಿಯ ಪತ್ರಕರ್ತರಾದ ಹೊನಕೆರೆ ನಂಜುಂಡೇಗೌಡ ಅವರಿಗೆ ಲಭಿಸಿದೆ. ಪ್ರಶಸ್ತಿ 15 ಸಾವಿರ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹೊನಕೆರೆ ಗ್ರಾಮದವರಾದ ನಂಜುಂಡೇಗೌಡ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಒಟ್ಟು 35 ವರ್ಷಗಳ ಅನುಭವ ಹೊಂದಿದ್ದಾರೆ. ಪತ್ರಕರ್ತನಾಗಿ ಮೈಸೂರಿನಲ್ಲಿ ವೃತ್ತಿ ಜೀವನ ಆರಂಭಿಸಿ ಬಳಿಕ ಧಾರವಾಡ, ಶಿವಮೊಗ್ಗ, ದಾವಣಗೆರೆ, ಬೆಂಗಳೂರು ಮತ್ತು ದೆಹಲಿಯಲ್ಲಿಯೂ ಕೆಲಸ ಮಾಡಿದ್ದಾರೆ. ಪ್ರಜಾವಾಣಿ ಪತ್ರಿಕೆಯಲ್ಲಿ ಹಲವು ದಶಕಗಳಿಂದ ವಿವಿಧ ಬ್ಯೂರೋಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಧಾರವಾಡ ಜಿಲ್ಲೆಯ ಸತ್ತೂರು ಗ್ರಾಮದ ರೈತನ ಆತ್ಮಹತ್ಯೆಯಿಂದ ಆರಂಭಿಸಿ ಜಿ-20 ಸಮ್ಮೇಳನದವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಮಾಜಿ ಪ್ರಧಾನಿ ಮನಮೋಹನಸಿಂಗ್, ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರೊಂದಿಗೆ ಪಾಕಿಸ್ತಾನ, ಸೌದಿ ಅರೇಬಿಯಾ ದೇಶಗಳಿಗೆ ತೆರಳಿ ವರದಿ ಮಾಡಿದ್ದಾರೆ. ನೇಪಾಳ ಭೂಕಂಪದ ವರದಿಗಾರಿಕೆಗೂ ತೆರಳಿದ್ದ ನಂಜುಂಡೇಗೌಡ ಅವರು ಸದ್ಯ ಬಳ್ಳಾರಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದುವರೆಗೂ 39 ಹಿರಿಯ ಪತ್ರಕರ್ತರಿಗೆ `ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಕಳೆದ ವರ್ಷ ಈ ಪ್ರಶಸ್ತಿಯು ಹುಬ್ಬಳ್ಳಿಯ ಹಿರಿಯ ಪತ್ರಕರ್ತ ಗೋಪಾಲ ಹೆಗಡೆ ಅವರಿಗೆ ಒಲಿದಿತ್ತು.

ಹೊನಕೆರೆ ನಂಜುಂಡೇಗೌಡ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...