ಅನಧಿಕೃತವಾಗಿ ನೀರು ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ದ ತ್ವರಿತ ಕ್ರಮ: ಜಲಮಂಡಳಿ ಅಧ್ಯಕ್ಷ

Date:

ಅನಧಿಕೃತವಾಗಿ ಕಾವೇರಿ ನೀರಿನ ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ದ ಕ್ರಮ ಕೈಗೊಂಡು ವಾರದೊಳಗೆ ವರದಿ ಸಲ್ಲಿಸುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಏಪ್ರಿಲ್ 5ರಂದು ನೇರ ಫೋನ್ ಇನ್ ಕಾರ್ಯಕ್ರಮ ನಡೆಸಿದ ಅವರು, ನೀರು ಮತ್ತು ಒಳಚರಂಡಿ ಕುರಿತ ನಾನಾ ಅಹವಾಲುಗಳನ್ನು ಆಲಿಸಿದರು. ಸಾರ್ವಜನಿಕರು ತಮ್ಮ ವಲಯ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಗಳ ಕುರಿತು ಅಧ್ಯಕ್ಷರಿಂದ ನೇರವಾಗಿ ಪರಿಹಾರ ಪಡೆದುಕೊಂಡರು.

ಕಾಡುಗೋಡಿ ವಾರ್ಡ್ ಅಂಬೇಡ್ಕರ್ ನಗರದಲ್ಲಿ ಅನಧಿಕೃತವಾಗಿ ಕಾವೇರಿ ನೀರಿನ ಸಂಪರ್ಕ, ಒಳಚರಂಡಿ ಸಂಪರ್ಕ ಪಡೆದಿರುವ 43 ಜನರು ಪಿಜಿಗಳನ್ನು ನಡೆಸುತ್ತಿದ್ದಾರೆ ಎಂದು ನಿವಾಸಿಯೊಬ್ಬರು ಅಧ್ಯಕ್ಷರಿಗೆ ದೂರವಾಣಿ ಮೂಲಕ ದೂರು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಸ್ಪಂದಿಸಿದ ಜಲಮಂಡಳಿ ಅಧ್ಯಕ್ಷರು, “ನಗರದ ಹಲವಾರು ಭಾಗಗಳಿಂದ ಇಂತಹ ದೂರುಗಳು ಬರುತ್ತಿವೆ. ವಾಣಿಜ್ಯ ಉದ್ದೇಶದ ಸಂಪರ್ಕ ಪಡೆದುಕೊಂಡು ಪಿಜಿಗಳನ್ನು ನಡೆಸುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಅನಧಿಕೃತವಾಗಿ ನೀರಿನ ಮತ್ತು ಒಳಚರಂಡಿ ಸಂಪರ್ಕ ಪಡೆದುಕೊಳ್ಳುವುದು ಹಾಗೂ ಆ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸುವುದು ಸರಿಯಲ್ಲ. ಇದರಿಂದ ಜಲಮಂಡಳಿಗೆ ನಷ್ಟವಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಒಂದು ವಾರದೊಳಗೆ ಈ ಬಗ್ಗೆ ಪರಿಶೀಲನೆ ನಡೆಸಿ ವರದಿಯನ್ನು ನೀಡಬೇಕು” ಎಂದು ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.

“ದಾಖಲಾದ ದೂರಗಳನ್ನ ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಇದನ್ನ ಖಚಿತ ಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಗಳು ದೂರುಗಳನ್ನು ಲಿಖಿತ ರೂಪದಲ್ಲಿ ಸಂಬಂಧ ಪಟ್ಟ ಮುಖ್ಯ ಇಂಜಿನೀಯರ್‌ಗಳಿಗೆ ಕಳುಹಿಸಿಕೊಡಬೇಕು. ಸಮಸ್ಯೆಗಳನ್ನು ಪರಿಹರಿಸಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ವಾರದೊಳಗೆ ವರದಿಯನ್ನು ಸಲ್ಲಿಸಬೇಕು” ಎಂದು ಸೂಚನೆ ನೀಡಿದರು.

“ಹಾರೋಹಳ್ಳಿಯ ಮಾಗಡಿ ರಸ್ತೆ ಬಳಿಯ ತುಂಗಭದ್ರಾ ಬಡಾವಣೆ ನಿವಾಸಿ ವಿದ್ಯಾ ಅವರು ಬೆಂಗಳೂರು ಜಲಮಂಡಳಿಯ ಕೊಳವೆ ಬಾವಿಯಲ್ಲಿ ನೀರು ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ. ಇನ್ನಷ್ಟು ಆಳಕ್ಕೆ ಕೊರೆಯಿಸಿದಲ್ಲಿ ನೀರಿನ ಪ್ರಮಾಣ ಹೆಚ್ಚಿಗೆಯಾಗುತ್ತದೆ. ಮೊದಲಿನ ಪ್ರಮಾಣದಲ್ಲಿ ನೀರು ನಮ್ಮ ಬಡಾವಣೆ ಜನರಿಗೆ ಸಿಗುತ್ತದೆ. ಈ ಮೂಲಕ ಅನುಕೂಲವಾಗುತ್ತದೆ ಎನ್ನುವುದನ್ನ ಅಧ್ಯಕ್ಷರ ಗಮನಕ್ಕೆ ತಂದರು. ಇಂದೇ ಆ ಕೊಳವೆ ಬಾವಿಗೆ ಅಗತ್ಯವಿರುವ ಹೆಚ್ಚಿನ ಪೈಪ್ ಅಳವಡಿಸಿ” ಎಂದು ಸೂಚನೆ ನೀಡಿದರು.

 ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅನಿರೀಕ್ಷಿತವಾಗಿ ಬೈಕ್‌ ಸವಾರನಿಗೆ ಗುದ್ದಿದ್ದ ಕೋಲೆ ಬಸವ: ವಿಡಿಯೋ ವೈರಲ್

ವಿಲ್ಸನ್ ಗಾರ್ಡ್‌ನ ಬಳಿಯ ಬಿಟಿಎಸ್ ರಸ್ತೆಯ ಬಳಿ ಜಲಮಂಡಳಿ ಪೈಪ್ ನಿಂದ ನೀರು ಸೋರಿಕೆಯಾಗುತ್ತಿದೆ ಎಂದು ವೀಣಾ ಅವರು ದೂರು ನೀಡಿದರು. ನೀರು ಸೋರಿಕೆಯ ತಡೆಯಲು ಇಂದೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅಧ್ಯಕ್ಷರು, ವಾರದೊಳಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ 1916 ಗೆ ದೂರು ನೀಡುವಂತೆ ವೀಣಾ ವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಮುಖ್ಯ ಎಂಜನಿಯರ್ ಸುರೇಶ, ಮುಖ್ಯ ಎಂಜನಿಯರ್‌ಗಳಾದ ಎಲ್.ಕುಮಾರನಾಯಕ್, ಕೆ.ಎನ್.ಪರಮೇಶ, ಎಸ್.ವಿ.ವೆಂಕಟೇಶ, ಎ.ರಾಜಶೇಖರ್, ಮಹೇಶ ಕೆ.ಎನ್., ರಾಜೀವ್ ಕೆ.ಎನ್., ಗಂಗಾಧರ್ ಬಿ.ಸಿ., ದೇವರಾಜು ಎಂ., ಜಯಶಂಕರ್, ಅಪರ ಮುಖ್ಯ ಎಂಜನಿಯರ್ ಮಧುಸೂಧನ್ ಸೇರಿದಂತೆ ಇನ್ನೀತರ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...