ಇಂದು (ಜ.13) ನಡೆಯಲಿರುವ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಸೆಂಟ್ ಥಾಮಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೈಸೂರು ಮಾರ್ಗವಾಗಿ ಪ್ರಯಾಣ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಮೈಸೂರಿನ ವಿಮಾನ ನಿಲ್ದಾಣದಲ್ಲಿ ತಮ್ಮ ಅಧಿನಾಯಕರನ್ನು ಭೇಟಿಯಾಗಲು ಸಿಎಂ-ಡಿಸಿಎಂ ನಿರ್ಧರಿಸಿದ್ದು, ಈ ಸಂಬಂಧ ಸಮಯ ಕೂಡ ನಿಗದಿಯಾಗಿದೆ. ಇವರ ಜತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಹ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅದರಂತೆ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಎಚ್ಎಎಲ್ನಿಂದ ವಿಶೇಷ ವಿಮಾನದಲ್ಲಿ ಸಿಎಂ ಮತ್ತು ಡಿಸಿಎಂ ಇಬ್ಬರೂ ಒಟ್ಟಿಗೆ ಮೈಸೂರಿಗೆ ಹಾರಲಿದ್ದಾರೆ. 1.25ಕ್ಕೆ ತಲುಪಲಿರುವ ಅವರು, ಅಲ್ಲಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ಸಂಜೆ 6.30ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ಒಟ್ಟಿಗೆ ವಿಶೇಷ ವಿಮಾನದಲ್ಲಿ ಹಿಂತಿರುಗಲಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ರೋಮಿಯೋ-ಜ್ಯೂಲಿಯೆಟ್ ವಿನಾಯಿತಿ’ ಸುಪ್ರೀಮ್ ಸೂಚನೆ ಯಾಕಾಗಿ ಸೂಕ್ತ?
ಸಿಎಂ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಭೇಟಿಗೆ ಎರಡು ಬಾರಿ (ಕಪಿಲ್ ಸಿಬಲ್ ಪುಸ್ತಕ ಬಿಡುಗಡೆ ಹಾಗೂ ಸಿಡಬ್ಲುಸಿ ಸಭೆ) ಅವಕಾಶ ಸಿಕ್ಕರೂ ರಾಜ್ಯ ರಾಜಕಾರಣ ಕುರಿತ ಮುಕ್ತ ಚರ್ಚೆಗೆ ಅವಕಾಶ ಸಿಕ್ಕಿರಲಿಲ್ಲ. ಈಗ ಸ್ವತಃ ವರಿಷ್ಠರು ರಾಜ್ಯಕ್ಕೆ ಆಗಮಿಸುತ್ತಿರುವುದರಿಂದ ಭೇಟಿ ಜತೆಗೆ ಚರ್ಚೆ ನಡೆಯಲಿದೆ.





