ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.
ಅಂಬೇಡ್ಕರ್ ವಸತಿ ನಿಲಯದಲ್ಲಿರುವ ವಿದ್ಯಾರ್ಥಿನಿಯರು ಏ.26ರಂದು ಮಧ್ಯಾಹ್ನ ಊಟ ಮಾಡಿದ್ದಾರೆ. ಬಳಿಕ, ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಕೂಡಲೇ, ಅವರನ್ನು ಸಿಂಧನೂರಿನ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ತಾಲೂಕು ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ವಿದ್ಯಾರ್ಥಿನಿಯರು ಇನ್ನು ಹೆಚ್ಚು ಸಮಯಗಳ ಕಾಲ ನೋವು ಪಡಬೇಕಾಯಿತು.
ವಿಷಯ ತಿಳಿದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ್ ಪೊತೆದಾರ್ ಅವರು ಆಸ್ಪತ್ರೆಗೆ ಆಗಮಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು
ಕಳೆದ ಹಲವು ದಿನಗಳಿಂದ ಅಂಬೇಡ್ಕರ್ ವಸತಿ ನಿಲಯದಲ್ಲಿನ ಊಟದ ಸಮಸ್ಯೆ ಬಗ್ಗೆ ಅಧಿಕಾರಿಗಳ ಬಗ್ಗೆ ಗಮನಕ್ಕೆ ತಂದರೂ ಇನ್ನು ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.




