ಬೆಂಗಳೂರು | ಮಳೆ ಅವಾಂತರ; ನೆಲಕ್ಕೊರಗಿದ ಮರಗಳು, ಮನೆಗಳಿಗೆ ನುಗ್ಗಿದ ನೀರು

Date:

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಯಂಕಾಲ ಜೋರು ಮಳೆ ಸುರಿಯುತ್ತಿದೆ. ಶುಕ್ರವಾರ ರಾತ್ರಿ ವೇಳೆ ಭಾರೀ ಮಳೆಯಾಗಿದ್ದು, ಹಲವೆಡೆ ಅವಾಂತರ ಸೃಷ್ಟಿ ಮಾಡಿದೆ.

ಆರ್‌.ಆರ್.ನಗರ, ಜ್ಞಾನಭಾರತಿ, ಏಪೋರ್ಟ್‌ ರಸ್ತೆ, ಸುಂಕದಕಟ್ಟೆ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ಮಳೆ ನೀರು ತುಂಬಿ ಹರಿದಿದೆ. ಅನ್ನಪೂರ್ಣೇಶ್ವರಿ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ನಿದ್ದೆಯಿಲ್ಲದೇ ಸ್ಥಳೀಯರು ರಾತ್ರಿಯೆಲ್ಲ ನೀರನ್ನು ಹೊರಹಾಕುವ ಕೆಲಸ ಮಾಡಿದ್ದಾರೆ. ಮನೆಯ ವಸ್ತುಗಳೆಲ್ಲ ಮಳೆ ನೀರಿಗೆ ತೊಯ್ದಿವೆ.

ಇನ್ನು ಬಿನ್ನಿಮಿಲ್ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಿಂದ ಹರಿಯುವ ನೀರು, ಗೋಡೆಯಿಂದ ಸೋರಿ ರಾಯಪುರ ಅಕ್ಕಪಕ್ಕದಲ್ಲಿರುವ ಮನೆಗಳಿಗೆ ನುಗ್ಗಿ ಅವಾಂತರ ಉಂಟಾಗಿದೆ. ಬೆಂಗಳೂರಿನ ನಾಗರಬಾವಿ ಎನ್‌ಜಿಎಫ್‌ ಬಡಾವಣೆಯ 9ನೇ ಕ್ರಾಸ್‌ನಲ್ಲಿ ಬೆಸ್ಕಾಂ ಲೈಟ್ ಕಂಬ ಮತ್ತು ದೊಡ್ಡ ಮರವೊಂದು ಶೆಡ್‌ ಮನೆಯ ಮುಂದೆ ಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ 70 ಮರಗಳು ನೆಲಕ್ಕುರುಳಿವೆ. 171 ಮರಗಳ ರೆಂಬೆ ಕೊಂಬೆಗಳು ಮುರಿದು ಬಿದ್ದಿದೆ. ನಾಗರಬಾವಿಯ ನೃಪತುಂಗ ನಗರದ 4ನೇ ಮುಖ್ಯ ರಸ್ತೆಯಲ್ಲಿ ಮರಗಳು ಬಿದ್ದಿವೆ. ಒಂದೇ ರಸ್ತೆಯ ಉದ್ದಕ್ಕೂ ಸುಮಾರು 10ಕ್ಕೂ ಅಧಿಕ ಮರಗಳು ನೆಲಕ್ಕೊರಗಿವೆ. ಪರಿಣಾಮ ಮರದ ಕೆಳಗೆ ಪಾರ್ಕ್ ಮಾಡಿದ್ದ ಕಾರುಗಳ ಗಾಜು ಪುಡಿ ಪುಡಿಯಾಗಿದೆ.

ಇಡೀ ರಸ್ತೆಯಲ್ಲಿ ಮರದ ರೆಂಬೆಕೊಂಬೆಗಳು ಬಿದ್ದು ರಸ್ತೆ ಸಂಚಾರ ಬಂದ್ ಆಗಿತ್ತು. ಆದಷ್ಟು ಬೇಗ ಮರಗಳನ್ನು ತೆರವು ಮಾಡುವಂತೆ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಮೈಸೂರು ರಸ್ತೆ ಸೇರಿದಂತೆ ನಗರದ ಹಲವೆಡೆ ಟ್ರಾಫಿಕ್ ​ಜಾಮ್​ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು.

ನಗರದ ಎಲ್ಲೆಲ್ಲಿ ಎಷ್ಟೆಷ್ಟು ಮಳೆ

ಕೆಂಗೇರಿ – 89 ಮಿಮೀ, ಪೀಣ್ಯ ಇಂಡಸ್ಟ್ರಿಯಲ್ ಏರಿಯಾ – 62 ಮಿ.ಮೀ, ನಾಯಂಡನಹಳ್ಳಿ – 61.5 ಮಿ.ಮೀ, ಹೆಮ್ಮಿಗೆಪುರ – 61 ಮಿ.ಮೀ, ಆರ್ ಆರ್ ನಗರ – 60 ಮಿ.ಮೀ, ಮಾರುತಿ ಮಂದಿರ -51.50ಮಿ.ಮೀ, ವಿದ್ಯಾಪೀಠ – 50ಮಿಮೀ, ಉತ್ತರಹಳ್ಳಿ -42 ಮಿ.ಮೀ, ಹಂಪಿನಗರ – 39 ಮಿ.ಮೀ, ಯಲಹಂಕ – 38.50 ಮಿ.ಮೀ, ಜಕ್ಕೂರು – 38 ಮಿ.ಮೀ, ಕೊಟ್ಟಿಗೆಪಾಳ್ಯ – 33 ಮಿ.ಮೀ, ಕೊಡಿಗೆಹಳ್ಳಿ – 28.50 ಮಿ.ಮೀ, ನಂದಿನಿ ಲೇಔಟ್ – 28 ಮಿ.ಮೀ ಮಳೆ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ; ನಾಮಪತ್ರ ಸಲ್ಲಿಕೆಗೆ ಮೇ.16 ಕೊನೆಯ ದಿನ

ಮಳೆಯ ಅಬ್ಬರಕ್ಕೆ ತಡರಾತ್ರಿ ನಗರ ನಿವಾಸಿಗಳು ಹೈರಾಣಾಗಿದ್ದಾರೆ. ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...