ಆರಂಭವಾದ ಮಳೆ ಆರ್ಭಟ; ಮತ್ತೆ ಪ್ರವಾಹದ ಹಾದಿ ಹಿಡಿದ ಬೆಂಗಳೂರು

Date:

ಕೆಲವು ದಿನಗಳ ನಂತರ ಬೆಂಗಳೂರಿನಲ್ಲಿ ಶನಿವಾರ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ. ರಾತ್ರಿ ಸುರಿದ ಮಳೆಗೆ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಹಲವು ಮರಗಳು ಧರೆಗುರುಳಿವೆ.

ಕೇರಳಕ್ಕೆ ಮುಂಗಾರು ಮಾರುತಗಳು ಅಪ್ಪಳಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಳೆ ಅರ್ಭಟ ಶುರುವಾಗಿದೆ. ಶನಿವಾರ ತಡ ರಾತ್ರಿವರೆಗೂ ಸುರಿದ ಭಾರೀ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಗರದ ಹಲವೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ಅಲ್ಲಲ್ಲಿ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು.

ಬೆಂಗಳೂರಿನ ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ವಿಜಯನಗರ, ಶಿವಾಜಿನಗರ, ಮೈಸೂರು ರಸ್ತೆ, ಗೋವಿಂದರಾಜನಗರ, ಚಾಮರಾಜಪೇಟೆ, ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿನಗರ, ಕೋರಮಂಗಲ ಹಾಗೂ ಎಂಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆಯಾಗಿದೆ. ಕೇವಲ ಒಂದೂವರೆ ಗಂಟೆಯ ಮಳೆಗೆ ನಗರದ ರಸ್ತೆಗಳು ಜಲಾವೃತಗೊಂಡು ನದಿಯಂತಾಗಿವೆ. ಭಾರೀ ಮಳೆಯಿಂದ ರಸ್ತೆಗಳು ಜಲಾವೃತ್ತವಾದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ಮಳೆ ನೀರು ನಿಂತು ರಸ್ತೆಗುಂಡಿ ಕಾಣದೇ ವಾಹನ ಸವಾರರು ಜೀವ ಪಣಕ್ಕಿಟ್ಟು ವಾಹನ ಚಲಾಯಿಸಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಸರ್ಜಾಪುರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಇಡೀ ಪ್ರದೇಶ ನದಿಯಂತಾಗಿದೆ. ಬೊಮ್ಮನಹಳ್ಳಿಯ ಸಾರಕ್ಕಿ ಸಿಗ್ನಲ್ ಬಳಿಯ ರಾಮಕೃಷ್ಣ ನಗರದಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ರಾತ್ರಿಯಿಡಿ ಜನರು ನಿದ್ದೆ ಮಾಡದೆ ಜಾಗರಣೆ ಮಾಡುವಂತಾಗಿದೆ. ಇದರಿಂದ ಬಿಬಿಎಂಪಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಫ್ಲೈಓವರ್ ಹಾಗೂ ಅಂಡರ್‌ಪಾಸ್‌ಗಳಲ್ಲಿ ಮಳೆ ನೀರು ಶೇಖರಣೆಯಾಗಿ ಕೆಲ ಹೊತ್ತು ವಾಹನ ಸಂಚಾರ ಮಾಡಲು ಆಗದ ಸ್ಥಿತಿ ನಿರ್ಮಾಣವಾಗಿತ್ತು.

ಮಾರತ್‌ಹಳ್ಳಿ ಜಂಕ್ಷನ್‌ನಲ್ಲಿ ಸವಾರರು ನೀರಿನಲ್ಲಿ ಮುಳುಗಿದ ರಸ್ತೆ ಗುಂಡಿ ದಾಟಲು ಹರಸಾಹಸ ಪಟ್ಟ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕೋಣನಕುಂಟೆ ಪ್ರದೇಶದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಸ್ಥಳೀಯರು ಮಳೆ ನೀರಿನಲ್ಲಿ ಆಲಿಕಲ್ಲುಗಳನ್ನು ಹೆಕ್ಕುತ್ತಿರುವ ವಿಡಿಯೋ ಹರಿದಾಡುತ್ತಿದೆ.

ಈ ಸುದ್ದಿ ಓದಿದ್ದೀರಾ? ಗಗನಕ್ಕೇರಿದ ತರಕಾರಿ ಬೆಲೆ | ಕಡಿಮೆ ಬೆಲೆಗೆ ಸಿಗುತ್ತಿದ್ದ ಮೂಲಂಗಿ ದರ ₹80ಕ್ಕೆ ಏರಿಕೆ; ₹240ಕ್ಕೆ ಜಿಗಿದ ಬೀನ್ಸ್‌

ಅಧಿಕ ಗಾಳಿ ಬೀಸಿದ ಪರಿಣಾಮ ಸುಲ್ತಾನ್ ಪಾಳ್ಯ, ಯಲಹಂಕ, ಯಶವಂತಪುರ ಸೇರಿದಂತೆ ಹಲವು ಕಡೆ ಸುರಿದ ಭಾರೀ ಮಳೆಗೆ ಮರ ಗಿಡ ರೆಂಬೆ ಕೊಂಬೆಗಳು ಧರಗೆ ಉರುಳಿ ಬಿದ್ದಿವೆ. ನಾಗಾವರ ಮುಖ್ಯರಸ್ತೆಯಲ್ಲಿ ಬೃಹತ್ ಮರ ರಸ್ತೆಗೆ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ನಗರದಲ್ಲಿ ಮಳೆಯ ಅರ್ಭಟಕ್ಕೆ ಪಶ್ಚಿಮ ವಲಯದಲ್ಲಿ 2, ದಕ್ಷಿಣ ವಲಯದಲ್ಲಿ 1 ಪೂರ್ವ ವಲಯದಲ್ಲಿ 2, ಆರ್.ಆರ್‌ ನಗರ 2, ಮಹದೇವಪುರ 1, ದಾಸರಹಳ್ಳಿ 1 ಸೇರಿದಂತೆ ಒಟ್ಟು 9 ಮರಗಳು ಉರುಳಿ ಬಿದ್ದಿವೆ.

ಶನಿವಾರ ರಾತ್ರಿ ನಗರದ ಇಂಡಸ್ಟ್ರಿಯಲ್ ಏರಿಯಾ – 7.8 ಸೆಂ.ಮೀ, ಹೊರಮಾವು – 7 ಸೆಂ.ಮೀ, ವಿದ್ಯಾಪೀಠ – 6.3 ಸೆಂ.ಮೀ, ಹಂಪಿನಗರ – 6.2 ಸೆಂ.ಮೀ, ಕೊಡಿಗೆಹಳ್ಳಿ – 6 ಸೆಂ.ಮೀ, ಹೇರೋಹಳ್ಳಿ – 5.9 ಸೆಂಮೀ, ದೊಡ್ಡನೆಕುಂದಿ – 5.8 ಸೆಂಮೀ, ಜಕ್ಕೂರು – 5.6 ಸೆಂ.ಮೀ, ನಾಗೇನಹಳ್ಳಿ – 5.3 ಸೆಂ.ಮೀ, ಯಲಹಂಕ – 5.3 ಸೆಂ.ಮೀ, ಆರ್‌ ಆರ್‌ ನಗರ – 5.2 ಸೆಂ.ಮೀ ಮಳೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...