ರಾಮನಗರ | ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ ನರ್ಸ್‌ ಸಾವು ; ಜಂಗಲ್ ಟ್ರೈಲ್ ರೆಸಾರ್ಟ್‌ಗೆ ಬೀಗ

Date:

ಹಾರೋಹಳ್ಳಿ ತಾಲೂಕಿನ ಗೊಟ್ಟಿಗೆಹಳ್ಳಿಯಲ್ಲಿ ಜಂಗಲ್‌ ಟ್ರೈಲ್ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ 35 ವರ್ಷದ ನರ್ಸ್‌ವೊಬ್ಬರು ಮೇ 18ರಂದು ಸಾವನ್ನಪ್ಪಿದ್ದರು. ಪ್ರವಾಸೋದ್ಯಮ ಇಲಾಖೆಯ ಅನುಮತಿ ಪಡೆಯದೇ ಅಕ್ರಮವಾಗಿ ರೆಸಾರ್ಟ್‌ ನಡೆಸುತ್ತಿದ್ದ ಹಿನ್ನೆಲೆ, ಅಧಿಕಾರಿಗಳು ರೆಸಾರ್ಟ್‌ ಮಾಲೀಕರಿಗೆ ನೋಟಿಸ್ ನೀಡಿ ರೆಸಾರ್ಟ್‌ಗೆ ಬೀಗ ಹಾಕಿ ಬಂದ್ ಮಾಡಿದ್ದಾರೆ.

ರಂಜಿನಿ ಸಾವನ್ನಪ್ಪಿದ ಮಹಿಳೆ. ನಗರದ ಸೂರ್ಯಸಿಟಿ 3 ನೇ ಹಂತದ ನಿವಾಸಿ. ಅವರು ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ವಾರಾಂತ್ಯದಲ್ಲಿ ರಾಮನಗರ ಜಿಲ್ಲೆಯ ಹಾರೋಹಳ್ಳಿಯಲ್ಲಿರುವ ರೆಸಾರ್ಟ್‌ಗೆ ವಿಹಾರಕ್ಕೆಂದು ಸಹೋದ್ಯೋಗಿಗಳೊಂದಿಗೆ ತೆರಳಿದ್ದರು. ಈ ವೇಳೆ, ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿದೆ. ರಂಜಿನಿ ಇತರ ಮೂವರೊಂದಿಗೆ ನೆಲಕ್ಕೆ ಬಿದಿದ್ದಾರೆ.

ಗಾಯಾಳುಗಳನ್ನು ಖಾಸಗಿ ವಾಹನದಲ್ಲಿ ದಯಾನಂದ ಸಾಗರ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಹೆಚ್ಚಿನ ರಕ್ತಸ್ರಾವದಿಂದ ರಂಜಿನಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದರು. ಇನ್ನುಳಿದವರು ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ರಂಜಿನಿ ಅವರ ಸಹೋದ್ಯೋಗಿ ನಿರ್ಮಲ್ ವೆಂಕಟೇಶ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಮ್ಮ ದೂರಿನಲ್ಲಿ, ಚಟುವಟಿಕೆಯಲ್ಲಿ ಸುರಕ್ಷತಾ ಕ್ರಮಗಳ ಕೊರತೆಯಿದೆ ಎಂದು ಆರೋಪಿಸಿದ್ದಾರೆ.

“ಜಿಪ್‌ಲೈನ್ ಆಡುವಾಗ ಆಟಗಾರರಿಗೆ ರೆಸಾರ್ಟ್‌ನವರು ಹೆಲ್ಮೆಟ್ ಸಹ ನೀಡಲಿಲ್ಲ. ಪ್ರಥಮ ಚಿಕಿತ್ಸೆ ಕಿಟ್ ಇರಲಿಲ್ಲ. ಅಲ್ಲದೇ, ಆವರಣದಲ್ಲಿ ಆಂಬ್ಯುಲೆನ್ಸ್ ಸಹ ಇರಲಿಲ್ಲ. ಗಾಯಾಳುಗಳನ್ನು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಬೇಕಾಯಿತು” ಎಂದು ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ, ಹಾರೋಹಳ್ಳಿ ಪೊಲೀಸರು ರೆಸಾರ್ಟ್ ಮ್ಯಾನೇಜರ್, ಪುಟ್ಟಮಾದು ಅವರನ್ನು ಬಂಧಿಸಿ, ಆಡಳಿತ ಮಂಡಳಿಯ ವಿರುದ್ಧ ಸೆಕ್ಷನ್ 304 (ಕೊಲೆಗೆ ಸಮನಾಗಿರುವುದಿಲ್ಲ) ಮತ್ತು 337 (ಇತರರ ಜೀವ ಮತ್ತು ಸುರಕ್ಷತೆಗೆ ಅಪಾಯ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಇನ್ಸ್​ಪೆಕ್ಟರ್​, ಎಸಿಪಿಗೆ ಪೊಲೀಸ್​ ಪೇದೆಯಿಂದ ಕೊಲೆ ಬೆದರಿಕೆ; ಪ್ರಕರಣದ ತನಿಖೆ ಸಿಸಿಬಿಗೆ

ಜಿಲ್ಲಾಧಿಕಾರಿ ಸೂಚನೆಯಂತೆ ಜಂಗಲ್ ಟ್ರೈಲ್ ರೆಸಾರ್ಟ್‌ಗೆ ಮಂಗಳವಾರ ಭೇಟಿ ನೀಡಿದ್ದ ರಾಮನಗರ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು, ರೆಸಾರ್ಟ್‌ ಮಾಲೀಕರಿಗೆ ನೋಟಿಸ್ ನೀಡಿ, ರೆಸಾರ್ಟ್‌ಗೆ ಬಿಗಮುದ್ರೆ ಹಾಕಿ ಬಂದ್ ಮಾಡಿದ್ದಾರೆ.

ರೆಸಾರ್ಟ್‌ ಮಾಲೀಕರು ಅನುಮತಿ ಪಡೆಯದೆ ಅಕ್ರಮವಾಗಿ ರೆಸಾರ್ಟ್‌ ನಡೆಸುತ್ತಿದ್ದಾರೆ ಎಂದು ರಾಮನಗರ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಕಯ ನಿರ್ದೇಶಕರು ತಿಳಿಸಿದ್ದಾರೆ.

ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವವರೆಗೆ ರೆಸಾರ್ಟ್‌ನಲ್ಲಿ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು...