ರಾಮನಗರ | ಜೀವನಾಂಶ ಕೇಸ್ ಹಿಂಪಡೆಯಲು ನಿರಾಕರಿಸಿದ ಪತ್ನಿ; ಇರಿದು ಕೊಂದ ದುಷ್ಟ ಪತಿ

Date:

ಜೀವನಾಂಶದ ಪ್ರಕರಣವನ್ನು ಹಿಂಪಡೆಯಲು ನಿರಾಕರಿಸಿದ ಪತ್ನಿಯನ್ನು ಆಕೆಯ ಪತಿ ಮತ್ತು ಆತನ ಸಹೋದರ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.

ಹಾರೋಹಳ್ಳಿ ನಿವಾಸಿ ಮಂಜುಳಾ (35) ಹತ್ಯೆಯಾದ ದುರ್ದೈವಿ. ವೃತ್ತಿಪರ ಛಾಯಾಗ್ರಾಹಕ ವಡ್ಡರಹಳ್ಳಿಯ ರಾಜೇಶ್ (40) ಹಾಗೂ ಆತನ ಸಹೋದರ ಸೋಮಶೇಖರ್ ಆರೋಪಿಗಳು. ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.

ಮಂಜುಳಾ ಮತ್ತು ರಾಜೇಶ್ ಆರು ವರ್ಷದ ಹಿಂದೆ ಮದುವೆಯಾಗಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಇಬ್ಬರು ಬೇರ್ಪಟ್ಟಿದ್ದರು. ದಂಪತಿಗೆ 5 ವರ್ಷದ ಮಗಳಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಬಂಧಿಕರ ಮನೆಯ ಸಮಾರಂಭಕ್ಕೆ ತೆರಳಲು ಮಂಜುಳಾ ಭಾನುವಾರ ಮಧ್ಯಾಹ್ನ ಕನಕಪುರದ ಮುದುವಾಡಿ ಗೇಟ್‌ನ ಸಂತೆಗೇಟ್‌ ಬಳಿಯ ಬಸ್‌ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ, ಆಕೆಯನ್ನು ಹಿಂಬಾಲಿಸಿ ಬಂದಿದ್ದ ಆರೋಪಿಗಳು ಆಕೆಯನ್ನು ಕೊಲೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಮಂಜುಳಾ ಅವರ ಸಹೋದರ ಮಹೇಶ್ ದೂರು ದಾಖಲಿಸಿದ್ದಾರೆ.

ಮಂಜುಳಾಗೆ ಆರೋಪಿ ಪತಿ ರಾಜೇಶ್‌ ಹಲವು ಬಾರಿ ಪ್ರಕರಣವನ್ನು ಹಿಂಪಡೆಯಲು ಹೇಳಿದ್ದಾನೆ. ಆದರೆ, ಇದಕ್ಕೆ ಮಂಜುಳಾ ನಿರಾಕರಿಸಿದ್ದರು ಎನ್ನಲಾಗಿದೆ.

“ಮಂಜುಳಾ ಆಟೋದಲ್ಲಿ ತೆರಳುತ್ತಿದ್ದಳು. ಅವಳು ಆಟೋದಿಂದ ಇಳಿದ ನಂತರ, ಅವಳನ್ನು ಬೈಕಿನಲ್ಲಿ ಹಿಂಬಾಲಿಸುತ್ತಿದ್ದ ಆರೋಪಿ ರಾಜೇಶ್ ಆಕೆಗೆ ಬೈಕಿನಲ್ಲಿ ಬರಲು ಹೇಳಿದ್ದಾನೆ. ಆಕೆ ಇದಕ್ಕೆ ನಿರಾಕರಿಸಿ ಬಸ್ ನಿಲ್ದಾಣದಲ್ಲಿ ಕುಳಿತುಕೊಂಡಾಗ ಆಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಸ್ ನಿಲ್ದಾಣದಲ್ಲಿದ್ದ ಇತರ ಮಹಿಳೆಯರು ನನ್ನ ಸಹೋದರಿಗೆ ಸಹಾಯ ಮಾಡಲು ಪ್ರಯತ್ನಿಸಿದರು. ಆದರೆ, ಆರೋಪಿಗಳು ಅವರಿಗೆ ಬೆದರಿಕೆ ಹಾಕಿದ್ದಾರೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಕ್ರೂರ ಹತ್ಯೆಯ ಬಗ್ಗೆ ನನ್ನ ಸಂಬಂಧಿಕರೊಬ್ಬರು ನನಗೆ ಮಾಹಿತಿ ನೀಡಿದ್ದಾರೆ” ಎಂದು ಮಹೇಶ್ ಹೇಳಿದ್ದಾರೆ.

“ನನ್ನ ತಂಗಿ ಮತ್ತು ರಾಜೇಶ್ ಮದುವೆಯಾದ ಮೊದಲ ನಾಲ್ಕು ವರ್ಷ ಸಂತೋಷದಿಂದ ಇದ್ದರು. ಆ ನಂತರ ಆರೋಪಿ ನನ್ನ ತಂಗಿಗೆ ಕಿರುಕುಳ ನೀಡಲು ಆರಂಭ ಮಾಡಿದ್ದಾನೆ. ನನ್ನ ತಂಗಿಯ ಮೇಲೆ ಅನುಮಾನಿಸಲು ಪ್ರಾರಂಭ ಮಾಡಿದ್ದಾನೆ. ಮಲಗುವ ಕೋಣೆಯ ಒಳಗೂ ಸಿಸಿಟಿವಿಗಳನ್ನು ಹಾಕಿಸಿದ್ದನು” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ರೈಲು ನಿಲ್ದಾಣಗಳಿಂದ 22 ಮಕ್ಕಳನ್ನು ರಕ್ಷಿಸಿದ ಆರ್‌ಪಿಎಫ್‌

“ಅವನ ಹಿಂಸೆಯನ್ನು ಸಹಿಸಲಾಗದೆ ಅವಳು ಅವನಿಂದ ದೂರ ಆಗಿ, ನಮ್ಮೊಂದಿಗೆ ನೆಲೆಸಿದ್ದಳು. ಅವರಿಗೆ ಐದು ವರ್ಷದ ಮಗಳಿದ್ದು, ಮಗುವನ್ನು ನೋಡಿಕೊಳ್ಳಲು ಪತಿಯಿಂದ ಜೀವನಾಂಶ ನೀಡುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಕಳೆದ ಆರು ತಿಂಗಳಿನಿಂದ ನ್ಯಾಯಾಲಯದ ಪ್ರಕರಣವನ್ನು ಹಿಂಪಡೆಯುವಂತೆ ರಾಜೇಶ್ ನನ್ನ ತಂಗಿಗೆ ಒತ್ತಾಯಿಸುತ್ತಿದ್ದನು. ಆಕೆ ನಿರಾಕರಿಸಿದಾಗ ರಾಜೇಶ್ ಮತ್ತು ಆತನ ಸಹೋದರ ನಮ್ಮ ಮನೆ ಬಳಿ ಬಂದು ಸಮಸ್ಯೆ ಸೃಷ್ಟಿಸುತ್ತಿದ್ದರು. ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರಾಜೇಶ್ ಆಕೆಗೆ ಬೆದರಿಕೆ ಹಾಕಿದ್ದನು” ಎಂದು ತಿಳಿಸಿದ್ದಾರೆ.

“ಇಬ್ಬರು ಆರೋಪಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಆರೋಪಿಗಳನ್ನು ಹುಡುಕುತ್ತಿದ್ದೇವೆ” ಎಂದು ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕನಕಪುರ ಗ್ರಾಮಾಂತರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...