ಖ್ಯಾತ ನಿರ್ದೇಶಕ ಶ್ರೀಪಾದ ಭಟ್‌ಗೆ ‘ರಂಗ ಭೂಪತಿ’ ಪ್ರಶಸ್ತಿ

Date:

ಖ್ಯಾತ ನಾಟಕಕಾರ ದಿ. ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ ‘ರಂಗ ಭೂಪತಿ’ ಮೊದಲ ಪ್ರಶಸ್ತಿಯನ್ನು ಹಿರಿಯ ರಂಗ ನಿರ್ದೇಶಕ ಶ್ರೀಪಾದ ಭಟ್ ಅವರಿಗೆ ಘೋಷಿಸಲಾಗಿದೆ. ಈ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ ಅವರು ಪ್ರದಾನ ಮಾಡಲಿದ್ದಾರೆ.

ಮಾರ್ಚ್ 30ರಂದು ಸಂಜೆ 6:30ಕ್ಕೆ ಧಾರವಾಡದ ರಂಗಾಯಣ ಆವರಣದಲ್ಲಿರುವ ಪಂ.ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಹಿರಿಯ ರಂಗ ನಿರ್ದೇಶಕ ಶ್ರೀಪಾದ ಭಟ್ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಧಾರವಾಡದ ಗೋ.ವಾ. ರಂಗ-ಸಂಗ, ಆಟ-ಮಾಟ, ಹಾಗೂ ಬೆಂಗಳೂರಿನ ಬಹುರೂಪಿ ಫೌಂಡೇಶನ್ ಸಂಸ್ಥೆಗಳು ಈ ಪ್ರಶಸ್ತಿಯನ್ನು ಸ್ಥಾಪಿಸಿವೆ.

ರಂಗಕರ್ಮಿ ಧನಂಜಯ ಕುಲಕರ್ಣಿ ಹಾಗೂ ಹಿರಿಯ ಪತ್ರಕರ್ತ, ಬಹುರೂಪಿ ಫೌಂಡೇಶನ್ ಸಂಸ್ಥೆಯ ಮುಖ್ಯಸ್ಥರಾದ ಜಿ ಎನ್ ಮೋಹನ್, ರವಿ ಕುಲಕರ್ಣಿ ಅವರು ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗೋಪಾಲ ವಾಜಪೇಯಿ ಅವರು ರಚಿಸಿದ ರಂಗಗೀತೆಗಳ ಹಬ್ಬ ಆಯೋಜಿಸಲಾಗಿದ್ದು, ರಂಗಾಯಣ ಕಲಾವಿದ ರಾಘವ ಕಮ್ಮಾರ, ಹೂವಿನ ಹಡಗಲಿಯ ಶಶಿಧರ.ಕೆ.ಎಂ, ರವಿ ಯಲ್ಲಪ್ಪನವರ್, ಪರಶುರಾಮ ನಾಗೋಜಿ ರಂಗಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ” ಎಂದು ಕಾರ್ಯಕ್ರಮದ ಆಯೋಜಕರೂ, ಗೋ.ವಾ. ರಂಗ-ಸಂಗದ ರಾಜಕುಮಾರ ಮಡಿವಾಳರ ಅವರು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಧಾರೇಶ್ವರದ ಶ್ರೀಪಾದ ಭಟ್ ಅವರು ಕನ್ನಡ ರಂಗಭೂಮಿಯ ಮಹತ್ವದ ಹೆಸರು. ರಂಗಭೂಮಿಯ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಎರಡೂ ರಂಗಗಗಳಲ್ಲಿ ನುರಿತವರು.

ಸಾಹಿತ್ಯ, ಶಿಕ್ಷಣ, ರಂಗಭೂಮಿ, ಜಾನಪದ ಅಧ್ಯಯನ, ಸಂಗೀತ, ಸಂಘಟನೆ ಇವರ ಆಸಕ್ತಿಯ ಕ್ಷೇತ್ರಗಳು. ಶಿಕ್ಷಣ, ಕಾವ್ಯ ಹಾಗೂ ಮಕ್ಕಳ ರಂಗಭೂಮಿಯಲ್ಲಿ ಇವರು ನಡೆಸಿದ ಪ್ರಯೋಗಗಳು ದೇಶಾದ್ಯಂತ ಹೆಸರುವಾಸಿಯಾಗಿದೆ.  ಗಾಂಧಿ- 150ರ ಸಂದರ್ಭದಲ್ಲಿ ಇವರು ನಿರ್ದೇಶಿಸಿದ ‘ಪಾಪು-ಬಾಪು’ ನಾಟಕವು 2 ಸಾವಿರ ಪ್ರಯೋಗ ಕಂಡಿದೆ. ಇದುವರೆಗೂ ಸುಮಾರು 150 ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

‘ದಡವ ನೆಕ್ಕಿದ ಹೊಳೆ’ ನಟನೆಯ ಕೈಪಿಡಿ ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ರಂಗಭೂಮಿ ಕುರಿತ ಅಧ್ಯಯನಕ್ಕೆ ಪಿಎಚ್‌ಡಿ ಪಡೆದಿದ್ದಾರೆ.

ಹಲವು ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸುವುದರ ಜತೆ ಕವಿ, ನಾಟಕಕಾರ, ನಟ, ನಿರ್ದೇಶಕರಾಗಿ, ಆಕಾಶವಾಣಿ, ರಂಗಭೂಮಿ, ಸಿನಿಮಾ, ಜನಸಮುದಾಯ ಅತಿ ಇಷ್ಟದ ಮಾಧ್ಯಮಗಳ ಮೂಲಕ ಮೂರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಬರಹದ ಮೂಲಕ ಪ್ರಭಾವಿಸಿದವರು ಗೋಪಾಲ ವಾಜಪೇಯಿ ಅವರು. ಉತ್ತರ ಕರ್ನಾಟಕದ ಗಟ್ಟಿ ಆಡುಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿದ ಅವರು ರಂಗಭೂಮಿಗೆ ನೀಡಿದ ಕೊಡುಗೆ ಅಪಾರವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...