ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

Date:

ಬೆಂಗಳೂರಿನ ಎಲೆಕ್ಟ್ರಾನಿಕ್ಸಿಟಿ ಸಮೀಪದ ಜಿ.ಆರ್‌.ಫಾರ್ಮ್ಹೌಸ್ನಲ್ಲಿ ನಡೆದಿದ್ದರೇವ್ಪಾರ್ಟಿಪ್ರಕರಣಕ್ಕೆ ಸಂಬಂಧಿಸಿದಂತೆ, ಡ್ರಗ್ಸ್ ಸೇವಿಸಿದ ಆರೋಪದಡಿ ತೆಲುಗು ನಟಿ ಹೇಮಾ ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಲು ಒಂದು ವಾರ ಕಾಲಾವಕಾಶ ಕೇಳಿರುವುದಾಗಿ ವರದಿಯಾಗಿದೆ.

ರೇವ್ಪಾರ್ಟಿಯಲ್ಲಿ ಭಾಗಿಯಾಗಿ ಡ್ರಗ್ಸ್ಸೇವಿಸಿರುವ ಪ್ರಕರಣದ ವಿಚಾರಣೆಗೆ ಸೋಮವಾರ ಹಾಜರಾಗುವಂತೆ ನಟಿ ಹೇಮಾ ಸೇರಿ ಎಂಟು ಮಂದಿಗೆ ಸಿಸಿಬಿ ನೋಟಿಸ್ನೀಡಿತ್ತು. ಇದಕ್ಕೆ ಅನಾರೋಗ್ಯದ ಕಾರಣ ನೀಡಿರುವ ಹೇಮಾ ಅವರು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಮುಂದೆ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ್ದಾರೆ ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.

ನಗರದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಇತ್ತೀಚಿಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದ ಹಿನ್ನೆಲೆ, ನಟಿ ಸೇರಿ 8 ಮಂದಿಗೆ ಮೇ 27 ಸೋಮವಾರ ವಿಚಾರಣೆ ಹಾಜರಾಗಲು ಸಿಸಿಬಿ ನೋಟಿಸ್ ನೀಡಿತ್ತು. ಉಳಿದವರು ಸೋಮವಾರ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ಹೇಮಾ ಅವರಿಗೆ ಎರಡನೇ ಬಾರಿ ನೋಟಿಸ್ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದಲ್ಲಿ ತೆಲುಗು ನಟಿಯನ್ನು ರಕ್ಷಿಸುವಂತೆ ತೆಲಂಗಾಣ ಮತ್ತು ಆಂಧ್ರಪ್ರದೇಶದ ಪ್ರಭಾವಿಗಳಿಂದ ಒತ್ತಡ ಹೇರಲಾಗುತ್ತಿದೆ. ಬಂಧಿತ ವ್ಯಕ್ತಿಗಳು ಹೆಚ್ಚು ಸಂಪರ್ಕ ಹೊಂದಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆಯು ಸಂಭವನೀಯ ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದವರಿಂದ ಸಂಗ್ರಹಿಸಲಾದ 98 ರಕ್ತದ ಮಾದರಿಗಳ ಪೈಕಿ 86 ಮಂದಿ ಡ್ರಗ್ಸ್ ಸೇವಿಸಿರುವುದು ವರದಿಯಲ್ಲಿ ದೃಢಪಟ್ಟಿದೆ. 50ಕ್ಕೂ ಹೆಚ್ಚು ಪುರುಷರು ಮತ್ತು 30ಕ್ಕೂ ಹೆಚ್ಚು ಮಹಿಳೆಯರ ವರದಿ ಪಾಸಿಟಿವ್ ಬಂದಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಹಂತ ಹಂತವಾಗಿ ಅವರನ್ನು ವಿಚಾರಣೆಗೆ ಕರೆಯಲು ಮಾದಕ ದ್ರವ್ಯ ನಿಗ್ರಹ ದಳ ಸಿದ್ಧತೆ ನಡೆಸಿದೆ.

ಮೇ 20ರಂದು ಟೆಕ್ಕಿಗಳು, ತೆಲುಗು ನಟರು ಸೇರಿದಂತೆ ಸುಮಾರು 100 ಜನರು ಭಾಗವಹಿಸಿದ್ದಸನ್ಸೆಟ್ ಟು ಸನ್ರೈಸ್ ವಿಕ್ಟರಿಶೀರ್ಷಿಕೆಯ ರೇವ್ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಪಾರ್ಟಿಯಲ್ಲಿ ಭಾಗವಹಿಸಿದ್ದವರು ಎಂಡಿಎಂಎ, ಕೊಕೇನ್, ಗಾಂಜಾ, ಚರಸ್ ಮತ್ತು ಇತರ ಮಾದಕ ವಸ್ತುಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಒಂದೇ ಠಾಣೆಯಲ್ಲಿ 1.02 ಲಕ್ಷ ಸಂಚಾರ ನಿಮಯ ಉಲ್ಲಂಘನೆ ಪ್ರಕರಣ

ರೇವ್ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿದ್ದ ವಿಜಯವಾಡದ ವಾಸು ಹಾಗೂ ಆತನ ನಾಲ್ವರು ಸ್ನೇಹಿತರನ್ನು ಹೆಚ್ಚಿನ ತನಿಖೆಗೆ ಸಿಸಿಬಿ ವಶಕ್ಕೆ ಪಡೆದಿದೆ. ಹೆಬ್ಬಗೋಡಿ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರನ್ನು ಸಿಸಿಬಿ ತನಿಖೆಗೆ ವರ್ಗಾಯಿಸಲಾಗಿತ್ತು. ಬಳಿಕ ಪ್ರಕರಣದ ತನಿಖೆಗೆ ಆರೋಪಿಗಳನ್ನು ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಸಿಸಿಬಿ ಮನವಿ ಮಾಡಿತು. ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

ಡ್ರಗ್ಸ್ ಪೂರೈಕೆಯ ಜೊತೆಗೆ ಸೆಕ್ಸ್ ದಂಧೆ ಕೂಡ ನಡೆಯುತ್ತಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಿಂದ ನಗರ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ವಿಭಾಗಕ್ಕೆ ಪ್ರಕರಣವನ್ನು ವರ್ಗಾಯಿಸುವ ಮುನ್ನವೇ ಐವರನ್ನು ಬಂಧಿಸಲಾಗಿತ್ತು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...