ಶಿವರಾಜ್ ಕುಮಾರ್ ಕೇಳಿದ್ದಲ್ಲಿ ಲೋಕಸಭಾ ಟಿಕೆಟ್ ಕೊಡಲು ಸಿದ್ಧ: ಡಿ ಕೆ ಶಿವಕುಮಾರ್

Date:

ನಟ ಶಿವರಾಜ್ ಕುಮಾರ್ ಅವರು ಸಂಸತ್ತಿಗೆ ಹೋಗಬೇಕಿದೆ. ಮೂರ್ನಾಲ್ಕು ಸಿನಿಮಾಗಳನ್ನು ಒಪ್ಪಿಕೊಂಡಿದ್ದೇವೆ ಎನ್ನುತ್ತಿದ್ದಾರೆ. ಸಿನಿಮಾ ಮಾಡೋದು ಇದ್ದೇ ಇದೆ. ಸಂಸತ್ತಿಗೆ ಹೋಗೋದು ತಡೆಯಾಗಬಾರದು ಎಂದಿದ್ದೇನೆ. ಅವರು ಎಲ್ಲಿ ಟಿಕೆಟ್ ಕೇಳುತ್ತಾರೋ ಅಲ್ಲಿ ಟಿಕೆಟ್ ಕೊಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಆರ್ಯ ಈಡಿಗ ಸಮಾವೇಶದಲ್ಲಿ ಮಾತನಾಡಿದ ಅವರು, “ನಿಮಗೆಲ್ಲ ಒಳ್ಳೆಯದಾಯಿತು ಎಂದರೆ ನಮಗೆ ಒಳ್ಳೆಯದಾಯಿತು ಅಂತ ಅರ್ಥ. ವಿದ್ಯೆಯಿಂದ ವಿವೇಕರಾಗಬೇಕು, ಸಂಘಟನೆಯಿಂದ ಬಲವಂತರಾಗಬೇಕು ಎಂಬುದನ್ನು ನೀವು ತೋರಿಸಿಕೊಟ್ಟಿದ್ದೀರಿ. ನಾವು ಸಿದ್ದರಾಮಯ್ಯನವರ ಸರ್ಕಾರದ ಜೊತೆಗೆ ಇದ್ದೇವೆ ಎಂಬ ಸಂದೇಶವನ್ನು ನೀಡಿದ್ದೀರಿ. ಚಪ್ಪಾಳೆ ಹೊಡೆಸಿಕೊಳ್ಳಲು ನಾವು ಬಂದಿಲ್ಲ. ನಿಮ್ಮ ಜೊತೆಗೆ ಇದ್ದೇವೆ ಎಂಬುದನ್ನು ತಿಳಿಸಲು ಬಂದಿದ್ದೇವೆ. ಸಹಕಾರ ಮಾಡಿದವರನ್ನು ಮರೆಯಲ್ಲ. ಅನೇಕ ಶಾಸಕರನ್ನು ಗೆಲಿಸಿಕೊಟ್ಟಿದ್ದೀರಿ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಿಮಗೆ ಸಹಾಯ ಮಾಡುವ ಮಾತುಕೊಟ್ಟಿದ್ದೇವೆ, ಉಳಿಸಿಕೊಳ್ಳುತ್ತಿದ್ದೇವೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಅಂದು ಗನ್ ಹಿಡಿದಿದ್ದ ನಕ್ಸಲೈಟ್, ಇಂದು ಕ್ಯಾಬಿನೆಟ್ ಮಿನಿಸ್ಟರ್; ಸೀತಕ್ಕನ ರೋಚಕ ಪಯಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಮೊದಲ ಬಾರಿಗೆ ಮಂತ್ರಿಯಾಗಿದ್ದು ಬಂಗಾರಪ್ಪನವರ ಸಂಪುಟದಲ್ಲಿ. ಮಧು ಬಂಗಾರಪ್ಪ ಸ್ವಲ್ಪ ಬೇರೆ ಕಡೆ ಕಾಲು ಇಟ್ಟಿದ್ದ. ಗಾಳ ಹಾಕಿ ಗಾಳ ಹಾಕಿ ಆತನನ್ನು ಕಾಂಗ್ರೆಸ್‌ಗೆ ಕರೆತಂದೆ” ಎಂದು ಡಿಸಿಎಂ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಟ ಶಿವರಾಜ್‌ ಕುಮಾರ್, “ನಮ್ಮ ಉದ್ದೇಶ ಏನು? ಆಗ ಆಗಬೇಕಿತ್ತು ಈಗ ಆಗಬೇಕಿತ್ತು, ಯಾರಿಂದ ಆಯಿತು, ಯಾರು ಮಾಡಿದರು ಎಂಬುದನ್ನು ಮುಖ್ಯವಲ್ಲ. ಯಾರಿಗಾಗಿ ಮಾಡಿದರು ಎಂಬುದು ಮುಖ್ಯ. ನಾನು ಯಾವಾಗಲು ನಿಮ್ಮಲ್ಲಿ ಒಬ್ಬ. ನೀವೆಲ್ಲ ಬೆಳೆಸಿದ್ದಕ್ಕೆ ನಾವು ಇಲ್ಲಿದ್ದೇನೆ. ಇಂತಹ ಕಾರ್ಯಕ್ರಮಗಳು ಹೆಚ್ಚು ಕಾರ್ಯಕ್ರಮಗಳು ಆಗಬೇಕು” ಎಂದು ಹೇಳಿದರು.

“ನಮ್ಮ ಸಂಘದ ಅಮೃತ ಮಹೋತ್ಸವಕ್ಕೆ ಮೆರಗು ತಂದಿದ್ದಾರೆ. ಕಾರ್ಯಕ್ರಮದಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳು ಇರಬೇಕಿತ್ತು. ಅವರು ಇಲ್ಲಿ ಹಾಜರಿರದಿದ್ದರೂ ಇದ್ದಾರೆಂದು ಭಾವಿಸಿದ್ದೇವೆ. ಸಿದ್ದರಾಮಯ್ಯನವರ ಸರ್ಕಾರದಿಂದ ಸಮುದಾಯದ ಕೆಲಸಗಳು ಆಗುತ್ತವೆ ಎಂಬ ಭರವಸೆ ಇದೆ” ಎಂದರು.

“ಚುನಾವಣೆಗೆ ಶಿವಣ್ಣನವರು ರೆಡಿಯಾಗಲಿ ಎಂದು ಡಿ.ಕೆ.ಶಿವಕುಮಾರ್‌ ಹೇಳುತ್ತಿದ್ದರು. ಬಣ್ಣ ಹಚ್ಚೋದು ನಮ್ಮ ವೃತ್ತಿ. ನನ್ನ ಪತ್ನಿ ರಾಜಕಾರಣದಲ್ಲಿದ್ದಾರೆ. ಅವರ ಆಯ್ಕೆ ಮಾಡಿಕೊಂಡಿದ್ದನ್ನು ಬೆಂಬಲಿಸುವುದು ನಮ್ಮ ಕರ್ತವ್ಯ. ಅವರ ಇಚ್ಛೆಗೆ ಬದ್ಧರಾಗಿದ್ದೇನೆ. ನನ್ನ ಸಪೋರ್ಟ್ ಅವರಿಗೆ ಇದ್ದೇ ಇರುತ್ತದೆ” ಎಂದು ಪ್ರತಿಕ್ರಿಯಿಸಿದರು.

ಹಿರಿಯ ನಟಿ ಲೀಲಾವತಿಯವರ ನಿಧನಕ್ಕೆ ಒಂದು ನಿಮಿಷದ ಮೌನಾಚಣೆಯನ್ನು ಶಿವಣ್ಣ ಅವರು ಸಮಾವೇಶದಲ್ಲಿ ನೆರವೇರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...