ಶೀಘ್ರವೇ ಕ್ರೀಡಾ ಶಾಲೆಗಳ 180 ದೈಹಿಕ ಶಿಕ್ಷಕರ ನೇಮಕಾತಿ: ಸಚಿವ ಬಿ.ನಾಗೇಂದ್ರ

Date:

ರಾಜ್ಯದಲ್ಲಿ ಕ್ರೀಡಾ ಶಾಲೆ ಹಾಗೂ ವಸತಿ ನಿಯಲಗಳ 180 ದೈಹಿಕ ಶಿಕ್ಷಕರ ತರಬೇತಿ ಪೂರ್ಣಗೊಂಡಿದ್ದು, ಶೀಘ್ರವೇ ಸ್ಥಳ ನಿಯೋಜಿಸಿ ನೇಮಕಾತಿ ಮಾಡುವುದಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡ ಸಚಿವ ಬಿ.ನಾಗೇಂದ್ರ ಹೇಳಿದರು.

ಬುಧವಾರ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಸಿ.ಎನ್.ಬಾಲಕೃಷ್ಣ ಅವರ ಚುಕ್ಕೇ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿದೆ. ಅಮೃತ ದತ್ತು ಕ್ರೀಡಾ ಯೋಜನೆಯಡಿ ವಿವಿಧ ಕ್ರೀಡೆಗಳಲ್ಲಿ ಪದಕ ವಿಜೇರಾತ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಅಗತ್ಯವಾದ ತರಬೇತಿ ಹಾಗೂ ಪ್ರೋತ್ಸಾಹ ನೀಡಲಾಗುತ್ತಿದೆ. ಇದರೊಂದಿಗೆ ಕ್ರೀಡಾಪುಟುಗಳಿಗೆ 2024ರ ಒಲಂಪಿಕ್ ಕ್ರೀಡಗಳಿಲ್ಲಿ ಪಾಲ್ಗೊಳ್ಳಲು ರೂ.10 ಲಕ್ಷ ವೆಚ್ಚದಲ್ಲಿ ತರಬೇತಿ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರೀಡಾ ಇಲಾಖೆಯಿಂದ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪುಟುಗಳಿಗೆ ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ, ಅಮೃತ ಕ್ರೀಡಾದತ್ತು ಯೋಜನೆ, ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ 2 ಕ್ರೀಡಾ ಶಾಲೆ ಹಾಗೂ 32 ಕ್ರೀಡ ವಸತಿ ನಿಲಯಗಳು ಇದ್ದು ಒಟ್ಟು 2482 ಕ್ರೀಡಾಪಟುಗಳು ಪ್ರವೇಶ ಪಡೆದಿದ್ದಾರೆ. ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಪ್ರತಿ ಜಿಲ್ಲೆಗಳಲ್ಲಿ ಕ್ರೀಡಾ ತರಬೇತುದಾರರನ್ನು ನೇಮಿಸಲಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಟ್ಟುವ ಮುನ್ನವೇ ಹೆಣ್ಣು ಜೀವಗಳನ್ನು ಬಲಿ ಪಡೆಯುತ್ತಿರುವ ಅನಾಗರಿಕ ವ್ಯವಸ್ಥೆ

ಇದೇ ಸಂದರ್ಭದಲ್ಲಿ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 125 ತಾಲ್ಲೂಕು ಕ್ರೀಡಾಂಗಣಗಳು ಇವೆ. ಕ್ರೀಡಾ ಇಲಾಖೆ ಕಳೆದ ಎರೆಡು ವರ್ಷದಲ್ಲಿ ಒಟ್ಟು ರೂ.56 ಕೋಟಿಗಳನ್ನು ಕ್ರೀಡಾಂಗಣಗಳ ಅಭಿವೃದ್ಧಿಗಾಗಿ ಬಿಡುಗಡೆ ಮಾಡದೆ. ಶ್ರವಣಬೆಳಗೊಳ ವಿಧಾನ ಸಭಾ ಕ್ಷೇತ್ರದ ಚನ್ನರಾಯಪಟ್ಟಣದ ತಾಲ್ಲೂಕು ಕ್ರೀಡಾಂಗಣವನ್ನು ಒಟ್ಟು 7 ಎಕರೆಯಲ್ಲಿ ನಿರ್ಮಿಸಲಾಗಿದೆ. 400 ಮೀಟರ್ ಮಣ್ಣಿನ ಓಟದ ಅಂಕಣ, ಜಿಮ್ ಕೊಠಡಿ, ಹೈಮಾಸ್ಟ್ ದೀಪ್ ಪೆವಿಲಿಯನ್ನ ಹಾಗೂ ಶೌಚಾಲಯ ಕಟ್ಟಗಳನ್ನು ನಿರ್ಮಿಸಲಾಗಿದ್ದು, ವಿದ್ಯುತ್ ಸರಬರಾಜು ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಶಾಸಕ ಬಾಲಕೃಷ್ಣ.ಸಿ.ಎನ್.ಮಾತನಾಡಿ, ಚನ್ನರಾಯಪಟ್ಟಣದಲಿ 1 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯಿದೆ. ಹೆಚ್ಚಿನ ಶಾಲಾ ಕಾಲೇಜುಗಳು ಇದ್ದು, ಸುಸಜ್ಜಿತ ಕ್ರೀಡಾಂಗಣ, ಸಿಂಥಟಿಕ್ ಟ್ರಾಕ್ ಅವಶ್ಯಕತೆ ಇದೆ. ಸರ್ಕಾರ ಈ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಕೋರಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...