₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ

Date:

“ಅಮೃತ್ ಭಾರತ ನಿಲ್ದಾಣ ಯೋಜನೆಯಡಿ ₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು ಬೆಂಗಳೂರು ವಿಭಾಗದಲ್ಲಿ ಇತರ ಮೂಲಸೌಕರ್ಯ ಕಾಮಗಾರಿಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಜತೆಗೆ, ರಾಜ್ಯದ ನಾನಾ ಜಿಲ್ಲೆಗಳ, ತಾಲೂಕುಗಳ ರೈಲು ನಿಲ್ದಾಣ ಮೇಲ್ದರ್ಜೆಗೇರಿಸಲಾಗಿದೆ. ನೈಋತ್ಯ ವಲಯದ 15 ರೈಲು ನಿಲ್ದಾಣಗಳಿಗೆ ಸ್ಮಾರ್ಟ್​ ಟಚ್​ ನೀಡಲು ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೂಪಿಸಿದ ಅಮೃತ್ ಭಾರತ್ ನಿಲ್ದಾಣ ಯೋಜನೆಯು ಭಾರತೀಯ ರೈಲ್ವೆ ಜಾಲದಾದ್ಯಂತ ರೈಲು ನಿಲ್ದಾಣಗಳನ್ನು ವರ್ಧಿಸಲು ಮತ್ತು ಅಧುನೀಕರಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯು ಪ್ರಸ್ತುತ ಭಾರತೀಯ ರೈಲ್ವೆ ವ್ಯವಸ್ಥೆಯಾದ್ಯಂತ ಒಟ್ಟು 1,275 ನಿಲ್ದಾಣಗಳನ್ನು ನವೀಕರಿಸಲು ಮತ್ತು ಆಧುನೀಕರಿಸಲು ಉದ್ದೇಶಿಸಿದೆ” ಎಂದು ಹೇಳಿದೆ.

“ಅಮೃತ್‌ ಭಾರತ್ ನಿಲ್ದಾಣ ಯೋಜನೆಯು ನಿಲ್ದಾಣಗಳ ನಿರಂತರ ಅಭಿವೃದ್ಧಿಗೆ ದೀರ್ಘಾವಧಿಯ ದೃಷ್ಟಿಕೋನವನ್ನು ಹೊಂದಿದೆ. ಇದು ನಿಲ್ದಾಣದ ನಾನಾ ಸೌಲಭ್ಯಗಳನ್ನು ಹೆಚ್ಚಿಸಲು ಮಾಸ್ಟರ್ ಪ್ಲಾನ್‌ಗಳನ್ನು ರಚಿಸುವುದು ಮತ್ತು ನಾನಾ ಹಂತಗಳಲ್ಲಿ ಅವುಗಳನ್ನು ಕಾರ್ಯಗತಗೊಳಿಸುವುದನ್ನು ಒಳಗೊಂಡಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲ ಹಂತದಲ್ಲಿ, ಸುಲಭ ನಿಲ್ದಾಣದ ಪ್ರವೇಶ, ತಂಗುವ ಪ್ರದೇಶಗಳು, ಶೌಚಾಲಯ ಸೌಲಭ್ಯಗಳು, ಅಗತ್ಯವಿರುವಂತೆ ಲಿಫ್ಟ್‌ ಮತ್ತು ಎಸ್ಕಲೇಟರ್‌ ಸ್ಥಾಪನೆ, ಸ್ವಚ್ಛತೆ, ಉಚಿತ ವೈ-ಫೈ ನೀಡುವಿಕೆ, ‘ಒಂದು ನಿಲ್ಯಾಣ ಒಂದು ಉತ್ಪನ್ನ’ ದಂತಹ ಉಪಕ್ರಮಗಳ ಮೂಲಕ ಸ್ಥಳೀಯ ಉತ್ಪನ್ನಗಳಿಗೆ ಕಿಯೋಸ್ಕ್‌ಗಳನ್ನು ಸ್ಥಾಪಿಸುವುದು, ಪ್ರಯಾಣಿಕರ ಮಾಹಿತಿ ವ್ಯವಸ್ಥೆಗಳನ್ನು ಹೆಚ್ಚಿಸುವುದು, ಕಾರ್ಯನಿರ್ವಾಹಕ ಲಾಂಜ್‌ಗಳನ್ನು ಸ್ಥಾಪಿಸುವುದು, ವ್ಯಾಪಾರಕ್ಕೆ ಸ್ಥಳಗಳನ್ನು ಗೊತ್ತುಪಡಿಸುವುದು, ಭೂದೃಶ್ಯವನ್ನು ಸಂಯೋಜಿಸುವುದು ಮತ್ತು ಪ್ರತಿ ನಿಲ್ದಾಣದ ವಿಶಿಷ್ಟ ಅವಶ್ಯಕತೆಗಳನ್ನು ಪೂರೈಸುವುದು.

ಯೋಜನೆಯ ಎರಡನೇ ಹಂತವು, ನಿಲ್ಯಾಣದ ರಚನೆಗಳನ್ನು ನವೀಕರಿಸುವುದು, ಎರಡೂ ಬದಿಗಳಲ್ಲಿ ಸುತ್ತಮುತ್ತಲಿನ ನಗರ ಪ್ರದೇಶಗಳೊಂದಿಗೆ ನಿಲ್ದಾಣಗಳನ್ನು ಸಂಯೋಜಿಸುವುದು, ಮಲ್ಟಿ ಮೋಡಲ್ ಸಂಪರ್ಕವನ್ನು ಉತ್ತೇಜಿಸುವುದು, ವಿಕಲಾಂಗ ವ್ಯಕ್ತಿಗಳಿಗೆ (ದಿವ್ಯಾಂಗಜನರು) ಸುಸ್ಥಿರ ಮತ್ತು ಪರಿಸರ ಸ್ನೇಹಿ ಪರಿಹಾರಗಳನ್ನು ಅನುಷ್ಠಾನಗೊಳಿಸುವ ಸೌಲಭ್ಯಗಳನ್ನು ಒದಗಿಸುವುದು, ಬ್ಯಾಲೆಸ್ಟ್‌ ರಹಿತ ಟ್ರ್ಯಾಕ್‌ಗಳನ್ನು ಪರಿಚಯಿಸುವುದು, ಸಂಯೋಜಿಸುವುದು.

ಅಗತ್ಯವಿದ್ಯಾಗ ‘ರೂಫ್ ಪ್ಲಾಜಾಗಳು’, ಮತ್ತು ಸುಧಾರಣೆಗಳ ಕಾರ್ಯಸಾಧ್ಯತೆ ಮತ್ತು ಹಂತಗಳನ್ನು ಪರಿಗಣಿಸಿ. ದೀರ್ಘಾವಧಿಯಲ್ಲಿ ಈ ನಿಲ್ದಾಣಗಳನ್ನು ರೋಮಾಂಚಕ ನಗರ ಕೇಂದ್ರಗಳಾಗಿ ಪರಿವರ್ತಿಸುವುದು ಅಂತಿಮ ಗುರಿಯಾಗಿದೆ.

ಬೆಂಗಳೂರು ವಿಭಾಗದಲ್ಲಿ ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ದೊಡ್ಡಬಳ್ಳಾಪುರ, ಹಿಂದೂಪುರ, ಹೊಸೂರು, ಕೆಂಗೇರಿ, ಕೃಷ್ಣರಾಜಪುರಂ, ಕುಪ್ಪಂ, ಮಲ್ಲೇಶ್ವರಂ, ಮಾಲೂರು, ಮಂಡ್ಯ, ರಾಮನಗರ, ತುಮಕೂರು, ವೈಟ್‌ಫೀಲ್ಡ್ ಸೇರಿದಂತೆ ಒಟ್ಟು 15 ನಿಲ್ದಾಣಗಳನ್ನು ಅಮೃತ್ ನಿಲ್ದಾಣ ಯೋಜನೆಯಡಿಯಲ್ಲಿ ಪುನರಾಭಿವೃದ್ಧಿಗಾಗಿ ಗುರುತಿಸಲಾಗಿದೆ.

“ಲೆವೆಲ್ ಕ್ರಾಸಿಂಗ್ 54 ರ ಬದಲಾಗಿ ರಸ್ತೆ ಕೆಳ ಸೇತುವೆಯ, ಚನ್ನಪಟ್ಟಣ-ಸೆಟ್ಟಿಹಳ್ಳಿ ನಿಲ್ದಾಣಗಳ ನಡುವಿನ ಕೋಳೂರು ಗೇಟ್ ಬಳಿ ಬೆಂಗಳೂರು-ಮಂಡ್ಯ ವಿಭಾಗದಲ್ಲಿ ಲೆವೆಲ್ ಕ್ರಾಸಿಂಗ್ 54 ರ ಬದಲಾಗಿ ರಸ್ತೆ ಕೆಳ ಸೇತುವೆಯ ಕಾಮಗಾರಿ ಪೂರ್ಣಗೊಂಡಿದೆ. ಯಲಹಂಕ ಧರ್ಮಾವರಂ ವಿಭಾಗದಲ್ಲಿ ಮಕ್ಕಾಜಿಪಲ್ಲಿ ನಾಗಸಮುದ್ರಂ ನಡುವಿನ ಚಿನ್ನಕೊತ್ತಪಲ್ಲಿಯಲ್ಲಿ ಲೆವೆಲ್ ಕ್ರಾಸಿಂಗ್ ನಂ.97 ರ ಬದಲಾಗಿ ರಸ್ತೆ ಕೆಳ ಸೇತುವೆಯ ಕಾಮಗಾರಿ ಪೂರ್ಣಗೊಂಡಿದೆ. ಬೆಂಗಳೂರು ಪೂರ್ವ ನಿಲ್ದಾಣದ ಬಳಿಯ ಪಾಟರಿ ಟೌನ್‌ನಲ್ಲಿ ನಂ.349 ರಲ್ಲಿ ರಸ್ತೆ ಮೇಲೇತುವೆ (ಮಸೀದಿ ರಸ್ತೆ ರಸ್ತೆ ಮೇಲೇತುವೆ) ಕಾಮಗಾರಿ ಪೂರ್ಣಗೊಂಡಿದೆ. ಲೆವೆಲ್ ಕ್ರಾಸಿಂಗ್ ನಂ.166 ರಲ್ಲಿ ರೋಡ್ ಓವರ್ ಬ್ರಿಡ್ಜ್ ನಿರ್ಮಾಣದ ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು” ಎಂದು ಹೇಳಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರುವರಿ 26 ರಂದು ನಿರ್ಮಿಸಲು ಉದ್ದೇಶಿಸಿರುವ ಮೇಲಿನ ನಿಲ್ದಾಣಗಳ ಮರು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ವೀಡಿಯೋ ಲಿಂಕ್ ಮೂಲಕ ಪೂರ್ಣಗೊಂಡು ಕಾರ್ಯಾರಂಭಕ್ಕೆ ಸಿದ್ಧವಾಗಿರುವ ರಸ್ತೆ ಮೇಲ್ಸೆತುವೆಗಳು ಮತ್ತು ರಸ್ತೆ ಕಳಸೇತುವೆಗಳಿಗೆ ಬೆಳಿಗ್ಗೆ 10:45ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆನೇಕಲ್ | ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆ

ಅಮೃತ ಭಾರತ ನಿಲ್ದಾಣ ಯೋಜನೆಯಡಿ ಮೇಲ್ದರ್ಜೆಗೇರಿದ/ ಏರುವ ರಾಜ್ಯದ ನಿಲ್ದಾಣಗಳು

ಆಲಮಟ್ಟಿ, ಅಳ್ನಾವರ, ಅರಸೀಕೆರೆ ಜಂಕ್ಷನ್, ಬಾದಾಮಿ, ಬಾಗಲಕೋಟ, ಬಳ್ಳಾರಿ, ಬೆಂಗಳೂರು ಕಂಟೋನ್ಮೆಂಟ್, ಬಂಗಾರಪೇಟೆ, ಬಂಟವಾಳ, ಬೆಳಗಾವಿ, ಬೀದರ್, ವಿಜಯಪುರ, ಚಾಮರಾಜ ನಗರ, ಚನ್ನಪಟ್ಟಣ, ಚನ್ನಸಂದ್ರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ದೊಡ್ಡಬಳ್ಳಾಪುರ, ಗದಗ, ಗಂಗಾಪುರ ರಸ್ತೆ, ಘಟಪ್ರಭಾ, ಗೋಕಾಕ್ ರೋಡ್,  ಹರಿಹರ, ಹಾಸನ, ಹೊಸಪೇಟೆ, ಕಲಬುರಗಿ, ಕೆಂಗೇರಿ, ಕೊಪ್ಪಳ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಬೆಂಗಳೂರು), ಕೃಷ್ಣರಾಜಪುರ, ಮಲ್ಲೇಶ್ವರಂ, ಮಾಲೂರು, ಮಂಡ್ಯ, ಮಂಗಳೂರು ಸೆಂಟ್ರಲ್, ಮಂಗಳೂರು ಜಂ., ಮುನಿರಾಬಾದ್, ಮೈಸೂರು, ರಾಯಚೂರು, ರಾಮನಗರ, ರಾಣಿಬೆನ್ನೂರು, ಸಾಗರ ಜಂಬಗಾರು, ಸಕಲೇಶಪುರ, ಶಹಾಬಾದ್, ಶಿವಮೊಗ್ಗ ಟೌನ್, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂ, ಸುಬ್ರಹ್ಮಣ್ಯ ರೋಡ್, ತಾಳಗುಪ್ಪ, ತಿಪಟೂರು, ತುಮಕೂರು, ವಾಡಿ, ವೈಟ್‌ಫೀಲ್ಡ್, ಯಾದಗಿರಿ, ಯಶವಂತಪುರ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...