ಚೆಕ್ ಬೌನ್ಸ್ ಪ್ರಕರಣ: ಸಚಿವ ಮಧು ಬಂಗಾರಪ್ಪಗೆ 6 ಕೋಟಿ ರೂ. ದಂಡ ವಿಧಿಸಿದ ನ್ಯಾಯಾಲಯ

Date:

ಸುಮಾರು 12 ವರ್ಷಗಳ ಹಿಂದಿನ ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಕರ್ನಾಟಕದ ಜನಪ್ರತಿನಿಧಿ ನ್ಯಾಯಾಲಯ 6 ಕೋಟಿ 96 ಲಕ್ಷದ 70 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದೆ.

ದಂಡ ಪಾವತಿಸಲು ವಿಫಲರಾದಲ್ಲಿ 6 ತಿಂಗಳುಗಳ ಸೆರೆವಾಸ ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿದೆ.

ಮಧು ಬಂಗಾರಪ್ಪ ಅವರು 6 ಕೋಟಿ, 96 ಲಕ್ಷದ 70 ಸಾವಿರ ರೂ.ಗಳನ್ನು ದಂಡವನ್ನಾಗಿ ಕಟ್ಟಬೇಕು. ಅದರಲ್ಲಿ ಅವರು 6 ಕೋಟಿ, 96 ಲಕ್ಷದ, 60 ಸಾವಿರ ರೂ.ಗಳನ್ನು ಫಿರ್ಯಾದುದಾರರಾದ ರಾಜೇಶ್ ಎಕ್ಸ್ ಪೋರ್ಟ್ಸ್ ಅವರಿಗೆ ನೀಡಬೇಕು. ಉಳಿದ 10 ಸಾವಿರ ರೂ.ಗಳನ್ನು ಸರ್ಕಾರಕ್ಕೆ ದಂಡದ ರೂಪದಲ್ಲಿ ಕಟ್ಟಬೇಕು ಎಂದು ಹೇಳಿದೆ. ಈ ಎಲ್ಲ ಪ್ರಕ್ರಿಯೆಗಳಿಗೆ ತಪ್ಪಿದರೆ 6 ತಿಂಗಳ ಕಾರಾಗೃಹ ವಾಸವನ್ನು ಅನುಭವಿಸಬೇಕು ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೀರ್ಪು ಪ್ರಕಟಿಸಿದ ಜನಪ್ರತಿನಿಧಿ ನ್ಯಾಯಾಲಯ, ಇದರ ನಡುವೆಯೇ, ಮಧು ಬಂಗಾರಪ್ಪನವರು ಕೋರ್ಟ್ ನಲ್ಲಿ ಮುಚ್ಚಳಕೆಯೊಂದನ್ನು ಸಲ್ಲಿಸಿದರು. ಸದ್ಯಕ್ಕೆ 50 ಲಕ್ಷ ರೂ. ಗಳನ್ನು ಈಗ ಫಿರ್ಯಾದುದಾರರಿಗೆ ಪಾವತಿಸಿ, ಉಳಿದ 6 ಕೋಟಿ, 10 ಸಾವಿರ ರೂಗಳನ್ನು ಜ. 30ರೊಳಗೆ ಕೊಡುವುದಾಗಿ ಅದರಲ್ಲಿ ತಿಳಿಸಿದ್ದರು. ಆದರೆ, ಅದನ್ನು ನ್ಯಾಯಾಲಯ ಒಪ್ಪಿಕೊಳ್ಳಲಿಲ್ಲ. ಈ ಹಿಂದೆಯೂ ಇಂಥದ್ದೇ ಮುಚ್ಚಳಿಕೆಯನ್ನು ಬರೆದುಕೊಟ್ಟು ಅದನ್ನು ಮಧು ಬಂಗಾರಪ್ಪನವರು ಪಾಲಿಸಿಲ್ಲ. ಹಾಗಾಗಿ, ಈ ಬಾರಿ ಮುಚ್ಚಳಿಕೆಯನ್ನು ಒಪ್ಪಲಾಗದು ಎಂದು ಹೇಳಿದ ನ್ಯಾಯಾಧೀಶರು, ದಂಡ ವಿಧಿಸಿ ಆದೇಶ ಹೊರಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

2011ರಲ್ಲಿ ದಾಖಲಾಗಿದ್ದ ಪ್ರಕರಣವಾಗಿದ್ದು ಮಧು ಬಂಗಾರಪ್ಪನವರು ಅವರೇ ಸ್ಥಾಪಿಸಿದ್ದ ಆಕಾಶ್ ಆಡಿಯೋ ಸಂಸ್ಥೆಯಲ್ಲಿ ಅವರೇ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಆ ಸಂಸ್ಥೆಯಿಂದ ರಾಜೇಶ್ ಎಕ್ಸ್’ಪೋರ್ಟ್ಸ್ ಎಂಬುವವರಿಗೆ 6 ಕೋಟಿ, 96 ಲಕ್ಷದ 60 ಸಾವಿರ ರೂ. ಸಂದಾಯ ಮಾಡಬೇಕಾಗಿತ್ತು. ಹಲವಾರು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಹಣಕ್ಕೆ ಮಧು ಬಂಗಾರಪ್ಪನವರು ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿತ್ತು. ಇದರಿಂದ, ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಮಧು ಬಂಗಾರಪ್ಪ ವಿರುದ್ಧ ಪ್ರಕರಣ ದಾಖಲಿಸಿತ್ತು. ಅಂದಿನಿಂದ ವಿಚಾರಣೆ ನಡೆಯುತ್ತಿದ್ದ ಪ್ರಕರಣಕ್ಕೆ ಈಗ ತೀರ್ಪು ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...