ಮೀಸಲಾತಿ ವಿವಾದ | ಅಂಬೇಡ್ಕರ್‌ ಮೇಲೆ ಕಾಂಗ್ರೆಸ್ಸಿಗೆ ಪ್ರೀತಿ ಇಲ್ಲ: ಸಿಎಂ ಬೊಮ್ಮಾಯಿ

Date:

  • ‘ಅಧಿಕಾರಕ್ಕೆ ಬಂದ ಮೇಲೆ ಮೀಸಲಾತಿ ಹಿಂಪಡೆಯುವುದಾಗಿ ಕಾಂಗ್ರೆಸ್ ಹೇಳುತ್ತಿದೆ’
  • ಅಂಬೇಡ್ಕರ್‌ ಅವರು ಬರೆದ ಸಂವಿಧಾನದ ಮೇಲೆ ಕಾಂಗೆಸ್ಸಿಗೆ ನಂಬಿಕೆ ಇಲ್ಲ: ಸಿಎಂ

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್‌ ಹೇಳಿಕೆ ಗಮನಿಸಿದರೆ ಅಂಬೇಡ್ಕರ್‌ ಅವರ ಮೇಲೆಯಾಗಲಿ, ಅವರು ಬರೆದ ಸಂವಿಧಾನದ ಮೇಲೆಯಾಗಲಿ ನಂಬಿಕೆ ಇಲ್ಲ ಎಂಬುದು ತಿಳಿಯುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿ ನೀಡಿರುವುದು ಕಾನೂನು ಬಾಹಿರ, ಸಂವಿಧಾನ ವಿರೋಧಿ ಎಂದು ಕೆಳಮಟ್ಟದ ಶಬ್ದ ಬಳಸಿದ್ದಾರೆ” ಎಂದು ಆರೋಪಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನಸಂಖ್ಯೆ ಆಧಾರಿತವಾಗಿ ಮೀಸಲಾತಿ ನೀಡಬೇಕು ಎಂದು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಎಸ್.ಸಿ/ ಎಸ್.ಟಿ ಸಮುದಾಯಗಳ ಬಹು ವರ್ಷಗಳ ಬೇಡಿಕೆಯನ್ನು ಈಡೇರಿಸಿ, ಸಂವಿಧಾನದ ಪರಿಚ್ಛೇದ 9 ಗೆ ಸೇರಿಸಲು ಶಿಫಾರಸ್ಸು ಮಾಡಲಾಗಿದೆ” ಎಂದು ಸಿಎಂ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಿಗ್ಗಾಂವಿ ಕ್ಷೇತ್ರದಿಂದಲೇ ನನ್ನ ಸ್ಪರ್ಧೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಮತ ಬ್ಯಾಂಕ್

“ಕಾಂಗ್ರೆಸ್‌ ಅವರು ತಮ್ಮ ಕಾಲದಲ್ಲಿ ಏನೂ ಮಾಡದೇ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದದವರನ್ನು ಬರೀ ಮತ ಬ್ಯಾಂಕ್‌ಗಾಗಿ ಬಳಕೆ ಮಾಡಲಾಗಿದೆ. ನಾಗಮೋಹನ್ ದಾಸ್ ವರದಿ ಬಂದು 4  ವರ್ಷ ಆಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಯಡಿಯೂರಪ್ಪ ಅವರ ಅವಧಿಯಲ್ಲಿ ವರದಿ ಬಂದ ಆರು ತಿಂಗಳಿಗೆ ವಿಸ್ತರಣೆ ಮಾಡಿದರು” ಎಂದರು.

“ನನ್ನ ಅವಧಿಯಲ್ಲಿ ಸರ್ವ ಪಕ್ಷಗಳ ಸಭೆ ಕರೆದು ಒಪ್ಪಿಗೆ ಪಡೆಯಲಾಯಿತು. ನಂತರ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಪರ ನಿರ್ಣಯ ಕೈಗೊಳ್ಳಲಾಯಿತು. ಸರ್ಕಾರ ಆದೇಶ ಹೊರಡಿಸಿ ಶೆಡ್ಯೂಲ್ 9ಕ್ಕೆ ಸೇರಿಸಲಾಗಿದೆ” ಎಂದು  ಸ್ಪಷ್ಟಪಡಿಸಿದರು.

ಸರ್ವರಿಗೂ ನ್ಯಾಯ

ನಾವು ಸಾಮಾಜಿಕ ನ್ಯಾಯದ ಪರಿಪಾಲನೆ ಮಾಡಿರುವುದನ್ನು ಕಾಂಗ್ರೆಸ್‌ ಟೀಕಿಸುತ್ತಿದೆ. ಕಾಂಗ್ರೆಸ್‌ನವರು ದಲಿತ, ಹಿಂದುಳಿದ ವರ್ಗದ, ಲಿಂಗಾಯತ, ಒಕ್ಕಲಿಗರ ವಿರೋಧಿಯಾಗಿದ್ದಾರೆ. ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಲ್ಲ

ಅಧಿಕಾರಕ್ಕೆ ಬಂದ ಮೇಲೆ ಮೀಸಲಾತಿ ಹಿಂಪಡೆಯುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಅವರು ಅಧಿಕಾರಕ್ಕೆ ಬರುವ ಪ್ರಶ್ನೆಯೆ ಇಲ್ಲ. ಇದನ್ನ ಹಿಂದೆ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಅವರಿಗೆ ಶಕ್ತಿಯೂ ಇಲ್ಲ ಅವಕಾಶವೂ ಇಲ್ಲ. ಕಾಂಗ್ರೆಸ್‌ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಬೊಮ್ಮಾಯಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...