ರಾಜ್ಯಾದ್ಯಂತ ರೈಲು ನಿಲ್ದಾಣಗಳಿಂದ 22 ಮಕ್ಕಳನ್ನು ರಕ್ಷಿಸಿದ ಆರ್‌ಪಿಎಫ್‌

Date:

ಏಪ್ರಿಲ್‌ನಲ್ಲಿ ನೈಋತ್ಯ ರೈಲ್ವೆ ವಲಯದಾದ್ಯಂತ 4 ಹುಡುಗಿಯರು ಸೇರಿದಂತೆ 22 ಮಕ್ಕಳನ್ನು ರಕ್ಷಿಸುವಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪ್ರಮುಖ ಪಾತ್ರ ವಹಿಸಿದೆ.

ಕಳೆದುಹೋದ ಮಕ್ಕಳನ್ನು ರಕ್ಷಿಸಲು ವಿಶೇಷವಾಗಿ ರಚಿಸಲಾದ ಆರ್‌ಪಿಎಫ್‌ನ `ನನ್ಹೆ ಫರಿಶ್ತೆ’ ತಂಡವು ರಕ್ಷಣಾ ಕಾರ್ಯಾಚರಣೆ ನಡೆಸಿದೆ. ನಾನಾ ಕಾರಣಗಳಿಂದ ಮಕ್ಕಳು ತಮ್ಮ ಕುಟುಂಬದಿಂದ ಬೇರ್ಪಟ್ಟಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಆರ್‌ಪಿಎಫ್‌ನ ಮತ್ತೊಂದು ಕಾರ್ಯಾಚರಣೆಯ ಉಪಲಬ್ಧ ಅಡಿಯಲ್ಲಿ, ₹13,67,887 ಮೌಲ್ಯದ ಟಿಕೆಟ್‌ಗಳನ್ನು ವಶಪಡಿಸಿಕೊಂಡಿದೆ. ಅಕ್ರಮವಾಗಿ ಟಿಕೆಟ್‌ ಮಾರಾಟ ಮಾಡುತ್ತಿದ್ದ 24 ಮಂದಿಯನ್ನು ಬಂಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈಲ್ವೆ ಟಿಕೆಟ್‌ಗಳ ಬ್ಲಾಕ್ ಮಾರ್ಕೆಟಿಂಗ್ ಹಾವಳಿ ತಡೆಯಲು ಕರ್ನಾಟಕ ಮತ್ತು ಗೋವಾದಾದ್ಯಂತ ಟ್ರಾವೆಲ್ ಏಜೆನ್ಸಿಗಳು / ಏಜೆಂಟ್‌ಗಳಲ್ಲಿ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. 23 ಪ್ರಕರಣಗಳಲ್ಲಿ, 24 ಮಂದಿಯನ್ನು ಬಂಧಿಸಿ ರೈಲ್ವೇ ಕಾಯ್ದೆಯ ಸೆಕ್ಷನ್ 143 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ. ₹2,88,515 ಮೌಲ್ಯದ ಒಟ್ಟು 94 ನೇರ ಮುಂಗಡ ಟಿಕೆಟ್ ಮತ್ತು ₹10,79,371 ಮೌಲ್ಯದ 751 ಬಳಸಿದ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಆರ್‌ಪಿಎಫ್‌ನ ‘ಆಪರೇಷನ್ ನಾರ್ಕೋಸ್’ ಅಡಿಯಲ್ಲಿ ಏಪ್ರಿಲ್‌ನಲ್ಲಿ ನಡೆದ ಆರು ಘಟನೆಗಳಲ್ಲಿ ಮೂವರನ್ನು ಬಂಧಿಸಿ ₹49,90,500 ಮೌಲ್ಯದ 50.88 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವೈಟ್ ಟಾಪಿಂಗ್ ಕಾಮಗಾರಿ; ಚಿಕ್ಕಪೇಟೆಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ಭಾರಿ ಕುಸಿತ

ಆರ್‌ಪಿಎಫ್‌ನ ಕಾರ್ಯಾಚರಣೆ ‘ಯಾತ್ರಿ ಸುರಕ್ಷಾ’ ಪ್ರಯಾಣಿಕರ ವಿರುದ್ಧದ ಅಪರಾಧಗಳಲ್ಲಿ ಭಾಗಿಯಾಗಿರುವ ಮೂವರನ್ನು ಬಂಧಿಸಿದೆ. 106 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ಪ್ರಯಾಣಿಕರಿಂದ ಕಳವು ಮಾಡಿದ್ದ ₹4.77 ಲಕ್ಷ ನಗದು ಹಾಗೂ ₹70,000 ಮೌಲ್ಯದ ನಾಲ್ಕು ಮೊಬೈಲ್ ಫೋನ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ ಪಡೆದ ವಸ್ತುಗಳನ್ನು ಸಂತ್ರಸ್ತರಿಗೆ ಹಿಂತಿರುಗಿಸಲಾಗಿದೆ.

‘ಆಪರೇಷನ್ ಸತಾರ್ಕ್’ ಅಡಿಯಲ್ಲಿ 42 ಘಟನೆಗಳಲ್ಲಿ ₹8,34,776 ಮೌಲ್ಯದ 961 ಮದ್ಯದ ಬಾಟಲಿಗಳನ್ನು (7,67,799 ಮಿಲಿ) ವಶಪಡಿಸಿಕೊಂಡು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...