ಯಾದಗಿರಿ | ಮೌಢ್ಯಕ್ಕೆ ಸೆಡ್ಡು : ಮದುವೆ ಮಂಟಪದಲ್ಲಿ ಮೃತ ಶಾಸಕ, ರೈತರಿಗೆ ಶ್ರದ್ದಾಂಜಲಿ

Date:

ಬಹಳಷ್ಟು ಜನರಲ್ಲಿ ತಪ್ಪು ತಿಳುವಳಿಕೆ ಇದೆ. ಮದುವೆಗಳು ಶುಭ ಶಕುನ, ಮರಣಗಳು ಅಪಶಕುನ ಎನ್ನುತ್ತಾರೆ. ಆದರೆ ಇಲ್ಲೊಂದು ಮದುವೆ ಮಂಟಪದಲ್ಲಿ ಅಗಲಿದ ರೈತರಿಗೆ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಮೌಢ್ಯಕ್ಕೆ ಸೆಡ್ಡು ಹೊಡೆದು ಜರುಗಿದ ವಿಶೇಷ ಮದುವೆ ಕಾರ್ಯಕ್ರಮ ಸಮಾಜಕ್ಕೆ ಮಾದರಿಯಾಗಿದೆ.

ಯಾದಗಿರಿ ಜಿಲ್ಲೆಯರ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ಫೆ.26 ರಂದು ಅಪರೂಪದ ಮದುವೆ ಕಾರ್ಯಕ್ರಮ ಜರುಗಿತು. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಹಾಗೂ ಅಮರಮ್ಮ ದಂಪತಿಯ ಸುಪುತ್ರಿ ಅಕ್ಕಮಹಾದೇವಿ ಹಾಗೂ ವಾಡಿ ಪಟ್ಟಣದ ಪಾರ್ವತಿ ಹಾಗೂ ಲಿಂಗನಗೌಡ ದಂಪತಿಗಳ ಸುಪುತ್ರ ಮಲ್ಲಿಕಾರ್ಜುನ ಅವರ ಕಲ್ಯಾಣ ಮಹೋತ್ಸವ ಇಂಥದೊಂದು ವಿಶೇಷತೆಗೆ ಸಾಕ್ಷಿಯಾಯ್ತು.

ಮದುವೆ ಕಾರ್ಯಕ್ರಮ ಆರಂಭವಾಗುವುದಕ್ಕೂ ಮುನ್ನ ಅಕಾಲಿಕವಾಗಿ ಮರಣ ಹೊಂದಿದ್ದ ಸುರಪುರ ಮತ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ಹಾಗೂ ನ್ಯಾಯಕ್ಕಾಗಿ ದೆಹಲಿ ಗಡಿಯಲ್ಲಿ ಪ್ರತಿಭಟಿಸುವ ವೇಳೆ ಹತ್ಯೆಯಾದ ಐವರು ಮೃತ ರೈತರನ್ನು ಸ್ಮರಿಸಿಕೊಂಡು ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾರಂಭವು ಷಟಸ್ಥಲ ಧ್ವಜವು ಮೆರೆಯುತಿದೆ ಎಂಬ ಗೀತೆಯೊಂದಿಗೆ ಹಿರಿಯ ವಕೀಲ .ಜಿ.ಎಸ್.ಪಾಟೀಲ ಧ್ವಜಾರೋಹಣ ನೆರೆವೇರಿಸಿದರು. ಅಲ್ಲಮಪ್ರಭು ಸತ್ಯಂಪೇಟೆ, ಪ್ರಣವ ಮತ್ತು ಪ್ರಮಥ ಸತ್ಯಂಪೇಟೆ ಅವರು ವಚನ ಗೀತೆ ಹಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಲ್ಯಾಣ ಮಹೋತ್ಸವದ ಕೇಂದ್ರ ಬಿಂದುಗಳಾದ ಅಕ್ಕಮಹಾದೇವಿ ಮತ್ತು ಮಲ್ಲಿಕಾರ್ಜುನ ಇಬ್ಬರೂ ರಾಜ್ಯದಲ್ಲಿ ನಡೆದ ಸಂವಿಧಾನ ಜಾಥಾ ಕಾರ್ಯಕ್ರಮದಿಂದ ಪ್ರೇರಣೆಯಾಗಿ ಡಾ.ಬಿ.ಆರ್.‌ ಅಂಬೇಡ್ಕರ್‌ರವರು ರಚಿಸಿದ ಭಾರತದ ಸಂವಿಧಾನ ಪೀಠಿಕೆ ಪಠಿಸಿದರು, ಬಳಿಕ ಸಂವಿಧಾನ ಹಾಗೂ ವಚನ ಪ್ರತಿಜ್ಞೆ ಸ್ವೀಕರಿಸಿದರು. ಎಲ್ಲರೂ ಮದುಮಕ್ಕಳ ಮೇಲೆ ಅಕ್ಕಿಕಾಳು ಹಾಕಿ ಧಾನ್ಯ ವ್ಯರ್ಥ ಮಾಡುವ ಬದಲಿಗೆ ಪುಷ್ಪವೃಷ್ಠಿ ಚೆಲ್ಲುವ ಮೂಲಕ ವೈಚಾರಿಕ ಪ್ರಜ್ಞಾವಂತಿಕೆ ತೋರಿದರು.

WhatsApp Image 2024 02 27 at 8.45.14 PM
ಅಕ್ಕಮಾಹಾದೇವಿ ಹಾಗೂ ಮಲ್ಲಿಕಾರ್ಜುನ ಅವರ ಕಲ್ಯಾಣ ಮಹೋತ್ಸವ ಕಾರ್ಯಕ್ರಮ

ಇದೇ ಸಂದರ್ಭದಲ್ಲಿ ನಡೆದ ಬಸವ ಮಾರ್ಗ ಪ್ರತಿಷ್ಠಾನದ ಬಸವ ಬೆಳಕು-112 ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕ ಪ್ರೊ.ಆರ್.ಕೆ.ಹುಡುಗಿ ಮಾತನಾಡಿ,”ಮದುವೆಗಳು ಸ್ವರ್ಗದಲ್ಲಿ ನಿರ್ಧಾರವಾಗಿರುತ್ತವೆ ಎಂಬ ಮಾತನ್ನು ಅಲ್ಲಗಳೆಯಬೇಕು. ಭೂಮಿಯ ಮೇಲೆಯೇ ಮದುವೆ ನಡೆಯುತ್ತವೆ. ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ ಎನ್ನುವಂತೆ ವಧು-ವರರು ಕೂಡಿ ಸಾಮರಸ್ಯದಿಂದ ಬಾಳುವುದು ಬದುಕಿನ ಗುಟ್ಟು” ಎಂದು ನುಡಿದರು.

ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಾಗರತ್ನ ಬಿ. ಪಾಟೀಲ, ಸಿಪಿಐಎಂ ಮುಖಂಡ ಚೆನ್ನಪ್ಪ ಆನೇಗುಂದಿ, ಗುರುಮಿಠಕಲ್ ನ ಶಾಂತವೀರ ಸ್ವಾಮೀಜಿ, ಚಿಗರಹಳ್ಳಿಯ ಸಿದ್ದಬಸವ ಸ್ವಾಮೀಜಿ, ಇಂಧೂದರ ಸ್ವಾಮೀಜಿ, ಚಿಂತಕ ಶಿವಣ್ಣ ಇಜೇರಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಪ್ರಸಾದ ಬೇಡ ಬಸ್ ಬೇಕು’ ಎಂದ ಬಾಲಕಿಯ ಮನವಿಯಲ್ಲಿದೆ ಮಹತ್ವದ ಸಂದೇಶ

ಸಮಾರಂಭದಲ್ಲಿ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಮುಖಂಡರು, ಸಾಮಾಜಿಕ ಚಿಂತಕರು ಸೇರಿದಂತೆ ಸತ್ಯಂಪೇಟೆ ಕುಟುಂಬದ ನೂರಾರು ಸಂಬಂಧಿಕರು ಮದುವೆಗೆ ಕಳೆ ತಂದು ಕೊಟ್ಟರು. ಪತ್ರಕರ್ತ ಡಾ. ಶಿವರಂಜನ ಸತ್ಯಂಪೇಟೆ ನಿರೂಪಿಸಿದರು. ವಿಶ್ವಾರಾಧ್ಯ ಸತ್ಯಂಪೇಟೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಸಂಗಣ್ಣ ಗುಳಗಿ ವಂದಿಸಿರು. ಸಾಕ್ಷಿ ಎಸ್. ಹಾಗೂ ಗುರುದೇವಿ ನರಕಲದಿನ್ನಿ ಸಂಗಡಿಗರು ಕಲ್ಯಾಣ ಮಹೋತ್ಸವ ಕಾರ್ಯಕ್ರಮ ನೆರವೇರಿಸಿದರು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವಸ್ಥಾನದ ಕಟ್ಟೆ ಮೇಲೆ ಕೂತಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ; ಯಾದಗಿರಿಯಲ್ಲಿ ಅಮಾನವೀಯ ಘಟನೆ

ಗ್ರಾಮದ ಹನುಮಾನ ದೇವಸ್ಥಾನದ ಬಳಿಯ ಕಟ್ಟೆಯ ಮೇಲೆ ಕುಳಿತಿದ್ದಕ್ಕೆ ಆಕ್ಷೇಪಿಸಿ, ದಲಿತ...

ಯಾದಗಿರಿ | ಬ್ರಿಡ್ಜ್ ಎತ್ತರ ಹೆಚ್ಚಿಸುವಂತೆ ಆಗ್ರಹಿಸಿ ರೈತರ ಮನವಿ

ಹುರಸಗುಂಡಗಿ ಗ್ರಾಮದಿಂದ ದೋರನಹಳ್ಳಿ ಸಂಪರ್ಕ ರಸ್ತೆಯ ಮೇಲಿರುವ ಸೂರತ್, ಚೆನ್ನೈ ರಾಷ್ಟ್ರೀಯ...

ಯಾದಗಿರಿ | ಆಸ್ತಿ ವಿವಾದ, ಹಳೆಯ ವೈಷಮ್ಯ ಹಿನ್ನೆಲೆ ₹2.50 ಲಕ್ಷ ಸುಪಾರಿಗೆ ತಂದೆಯ ಕೊಲೆ; ಮಗ ಸೇರಿ ಐವರ ಬಂಧನ

ವಡಗೇರಾ ತಾಲ್ಲೂಕಿನ ಗೋನಾಲ ಗ್ರಾಮದಲ್ಲಿ ನಡೆದ ವೃದ್ಧನ ಹತ್ಯೆ ಪ್ರಕರಣಕ್ಕೆ ಬೆಚ್ಚಿಬೀಳಿಸುವ...

ಯಾದಗಿರಿ | ಊರಿಗೆ ತೆರಳಲು ವಾಹನ ಸಿಕ್ಕಿಲ್ಲವೆಂದು ಸಾರಿಗೆ ಬಸ್ ಕದ್ದೊಯ್ದ ಚಾಲಕ!

ಊರಿಗೆ ಹೋಗಲು ವಾಹನ ಸಿಗದಿದ್ದಕ್ಕೆ ಸೇವೆಯಿಂದ ವಜಾಗೊಂಡ ಕಲ್ಯಾಣ ಕರ್ನಾಟಕ ಸಾರಿಗೆ...