ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಲ್ಲಿ ಮುಂದುವರಿಯುವ ನೈತಿಕತೆ ಉಳಿಸಿಕೊಂಡಿಲ್ಲ: ಎ.ನಾರಾಯಣಸ್ವಾಮಿ

Date:

ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಅನಾವರಣ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣಗಳಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕೇಂದ್ರದ ಮಾಜಿ ಸಚಿವ ಎ ನಾರಾಯಣಸ್ವಾಮಿ ಆಗ್ರಹಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದ ಮುಖ್ಯಮಂತ್ರಿ ಮತ್ತು ಸರಕಾರವು ದಲಿತವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಅದನ್ನು ನಾವು ಖಂಡಿಸುತ್ತೇವೆ” ಎಂದರು.

“ಸಿದ್ದರಾಮಯ್ಯರಿಂದ ಸಮಾಜವಾದದ ಚಿಂತನೆಗಳು ಕಳಚಿ ಬಿದ್ದಿವೆ. ಸಮಾಜವಾದದ ಚಿಂತನೆ ಇದ್ದರೆ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಿರಲಿಲ್ಲ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಪರಿಶಿಷ್ಟ ಪಂಗಡದ 17 ಶಾಸಕರಿದ್ದಾರೆ. ಈ ಪೈಕಿ 16 ಜನರು ಕಾಂಗ್ರೆಸ್ಸಿನವರು ಎಂದು ಅವರು, 3 ಜನ ಲೋಕಸಭಾ ಸದಸ್ಯರು ಗೆದ್ದಿದ್ದಾರೆ. ವಾಲ್ಮೀಕಿ ನಿಗಮಕ್ಕೆ ಮಾರ್ಚ್ 21ರಂದು ರಾಜ್ಯ ಸರಕಾರವು 187 ಕೋಟಿ ಹಣವನ್ನು ವರ್ಗಾವಣೆ ಮಾಡಿತ್ತು. ಮೇ 26ರವರೆಗೆ, ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಳ್ಳುವವರೆಗೆ ರಾಜ್ಯದ ಮುಖ್ಯಮಂತ್ರಿಗಳ ಗಮನಕ್ಕೆ ಹಗರಣ ಬಂದಿಲ್ಲವಾದರೆ ಆ ಎರಡು ತಿಂಗಳು ಕರ್ನಾಟಕದಲ್ಲಿ ಸರಕಾರ ಇತ್ತೇ” ಎಂದು ಪ್ರಶ್ನಿಸಿದರು.

“ಅರಣ್ಯ ಪ್ರದೇಶದಲ್ಲಿ ವಾಸವಿರುವ ಜನಾಂಗದವರಿಗೂ ಈ ವಿಷಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಸಂದೇಹ ಉಂಟಾಗಿದೆ. ಹಗರಣದ ಚರ್ಚೆ ನಡೆದಾಗ ಸಚಿವರಿಗೂ ಹಗರಣಕ್ಕೂ ಸಂಬಂಧ ಇಲ್ಲ ಎಂದೇ ಮುಖ್ಯಮಂತ್ರಿಯವರು ಹೇಳಿದ್ದರು. ಎಸ್‍ಐಟಿ ರಚಿಸಿದ ಬಳಿಕ ಕೂಡ ಸಚಿವರು ನಿರಪರಾಧಿ ಎಂದೇ ಹೇಳಿದ್ದರು” ಎಂದು ಗಮನ ಸೆಳೆದರು.

“ವಿದ್ಯಾಸಿರಿ ನಿಲ್ಲಿಸಿದ್ದಾರೆ. ಶೂ ಕೊಡಲು ಯೋಗ್ಯತೆ ಇಲ್ಲ. ಮಕ್ಕಳಿಗೆ ಪುಸ್ತಕ ಕೊಡುತ್ತಿಲ್ಲ; ಹಾಸ್ಟೆಲ್‍ಗಳಲ್ಲಿ ಊಟವನ್ನೂ ನೀಡುತ್ತಿಲ್ಲ. ಹಲವು ಮಕ್ಕಳು ವಿದ್ಯಾಭ್ಯಾಸ ನಿಲ್ಲಿಸಿದ್ದಾರೆ” ಎಂದು ಟೀಕಿಸಿದರು.

“ಗ್ಯಾರಂಟಿಗಳ ಮೂಲಕ ನಿಗಮಗಳ ಕತ್ತನ್ನೇ ಹಿಸುಕಿದ್ದಾರೆ. ಜನಸಂದರ್ಶನದ ವೇಳೆ ಯುವಕರು ಕೊಟ್ಟ ಅರ್ಜಿಗಳನ್ನು ತಿಪ್ಪೆಗೆ ಎಸೆಯಲಾಗಿದೆ. ಇದು ಸಾಮಾಜಿಕ ಕಳಕಳಿಯನ್ನು ಅರ್ಥ ಮಾಡುವಂತಿದೆ” ಎಂದು ವ್ಯಂಗ್ಯವಾಡಿದರು.

ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ಎಸ್‍ಇಪಿ ಟಿಎಸ್‍ಪಿ ದಲಿತರ ಹಣ ದುರುಪಯೋಗದ ಬಗ್ಗೆ ನಾವು ಹಲವು ಬಾರಿ ಗಮನ ಸೆಳೆದಿದ್ದೇವೆ. ಕಳೆದ ಆರ್ಥಿಕ ವರ್ಷದಲ್ಲಿ ದಲಿತ ಸಮುದಾಯದ ಶ್ರೇಯೋಭಿವೃದ್ಧಿಗೆ ಮೀಸಲಿಟ್ಟಿದ್ದ 11,114 ಕೋಟಿ ರೂ.ಗಳನ್ನು ಈ ಸರಕಾರ ಬೇರೆ ಬೇರೆ ಕಾರ್ಯಗಳಿಗೆ ದುರುಪಯೋಗ ಪಡಿಸಿಕೊಂಡಿತ್ತು” ಎಂದು ಆಕ್ಷೇಪಿಸಿದರು.

“7ಡಿ ರದ್ದು ಮಾಡುವುದಾಗಿ ಹೇಳಿದ್ದರು. ಅದರಂತೆ 7 ಡಿ ರದ್ದು ಮಾಡಿದ್ದರು. ಆದರೂ, ದಲಿತರಿಗಾಗಿ ಮೀಸಲಿಟ್ಟ 14282 ಕೋಟಿ ರೂಗಳನ್ನು ಬೇರೆಡೆಗೆ ವರ್ಗಾಯಿಸಿದ್ದಾರೆ. 7 ಡಿ ರದ್ದು ಮಾಡಿದ್ದು, 7 ಸಿ ನಲ್ಲಿ ಗ್ಯಾರಂಟಿಗೆ ಹಣ ಕೊಡುತ್ತಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದರಲ್ಲದೆ, ಲೂಟಿ ಮಾಡುವುದಾದರೆ ಹಿಂದಿನ ಬಾಗಿಲಾದರೇನು, ಮುಂದಿನ ಬಾಗಿಲಾದರೆ ಏನು” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...