ರೈತರ ಆತ್ಮಹತ್ಯೆ ಕುರಿತು ಹಗುರ ಮಾತು | ಸಚಿವ ಶಿವಾನಂದ ಪಾಟೀಲ್ ಕ್ಷಮೆ ಕೇಳಬೇಕು:‌ ಬಿಜೆಪಿ ನಾಯಕರ ಆಗ್ರಹ

Date:

ಸಾಲಮನ್ನಾಕ್ಕಾಗಿ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತೆ ಎಂಬ ಸಚಿವ ಶಿವಾನಂದ ಪಾಟೀಲ್​​ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಎಕ್ಸ್‌ ತಾಣದಲ್ಲಿ ವಾಗ್ದಾಳಿ ನಡೆಸಿ, “ಪದೇ ಪದೇ ಅನ್ನದಾತರನ್ನು ಅವಮಾನಿಸುವುದು, ರೈತರ ಜೀವನವನ್ನು ಹಂಗಿಸುವುದು, ರೈತರ ಮೇಲೆ ದೌರ್ಜನ್ಯ ನಡೆಸುವುದು, ಕಾಂಗ್ರೆಸ್ ತನ್ನ ಸಂಸ್ಕೃತಿಯನ್ನಾಗಿ ಅಳವಡಿಸಿಕೊಂಡಂತಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಶಿವಾನಂದ ಪಾಟೀಲರಿಗೆ ರೈತರನ್ನು ನಿಂದಿಸಿ ಅವಹೇಳನ ಮಾಡುವ ಉಸ್ತುವಾರಿ ವಹಿಸಿಕೊಟ್ಟಂತಿದೆ” ಎಂದು ಕಿಡಿಕಾರಿದ್ದಾರೆ.

“ಈ ಹಿಂದೆಯೂ ಶಿವಾನಂದ ಪಾಟೀಲರು ‘ರೈತರು ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ’
ಎಂದು ಅಮೂಲ್ಯ ರೈತ ಜೀವಗಳನ್ನು ಹಗುರವಾಗಿ ಪರಿಗಣಿಸಿ ಅಮಾನವೀಯ ಹೇಳಿಕೆ ನೀಡಿದ್ದ ನೆನಪು ಇನ್ನೂ ಹಸಿರಾಗಿರುವಾಗಲೇ, ಮತ್ತೆ ಅದೇ ದಾಟಿಯ ಅವರ ರೈತ ದ್ವೇಷಿ ಮಾತುಗಳು ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಸ್ಪಷ್ಟವಾಗಿ ಪ್ರತಿನಿಧಿಸುತ್ತದೆ” ಎಂದು ಹರಿಹಾಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬರಗಾಲ ಬರಲೆಂದೇ ಅಪೇಕ್ಷಿಸುತ್ತಾರೆ’ ಎಂಬ ವಂಗ್ಯದ ಮಾತುಗಳು ರೈತರ ಮೇಲಿನ ಕ್ರೌರ್ಯದ ಮನಸ್ಥಿತಿ ಪ್ರತಿಬಿಂಬಿಸುತ್ತಿದೆ. ‘ಪುಕ್ಸಟ್ಟೆ ಆಶ್ವಾಸನೆ’ ನೀಡಿ ಅಧಿಕಾರಕ್ಕೆ ಬಂದವರು ನೀವು, ರೈತರಿಗೆ ಸರ್ಕಾರ ಏನೇ ನೀಡಿದರೂ ಅದು ಈ ರಾಜ್ಯದ ಅಭಿವೃದ್ಧಿಯ ಕಾಳಜಿಯೇ ಹೊರತೂ ಭಿಕ್ಷೆಯಲ್ಲ, ನಮ್ಮ ರೈತರು ಸ್ವಾಭಿಮಾನಿಗಳು, ಅವರು ಪರಿಹಾರಕ್ಕಾಗಿ ಕಾಯುವುದಿಲ್ಲ, ಬದಲಿಗೆ ರೈತರ ಕಷ್ಟಗಳಿಗೆ ಸ್ಪಂದಿಸುವ ಸರ್ಕಾರಗಳನ್ನ ಬಯಸುತ್ತಾರೆ, ಆದರೆ ಆಮಿಷಗಳನ್ನೊಡ್ಡಿ, ಅಧಿಕಾರಕ್ಕೆ ಬಂದು ನಿತ್ಯವೂ ಬೆಲೆ ಏರಿಕೆಯ ಬರೆ ಎಳೆಯುವ ನಿಮ್ಮನ್ನು ಶಾಶ್ವತವಾಗಿ ತಿರಸ್ಕರಿಸುವ ಕಾಲ ಹತ್ತಿರದಲ್ಲಿದೆ” ಎಂದಿದ್ದಾರೆ.

“ಈ ಕಾಂಗ್ರೆಸ್ ಸರ್ಕಾರ ‘ನಿರ್ದಯ ಸರ್ಕಾರ, ದಪ್ಪ ಚರ್ಮದ ಮಂತ್ರಿಗಳನ್ನು ಪೋಷಿಸುತ್ತಿರುವ ಸರ್ಕಾರ’. ಸಚಿವ ಶಿವಾನಂದ ಪಾಟೀಲರು ಈ ಕೂಡಲೇ ಕ್ಷಮೆ ಕೋರಬೇಕೆಂದು ಆಗ್ರಹಿಸುತ್ತೇನೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಾಲ ಮನ್ನಾಕ್ಕಾಗಿ ಬರಗಾಲ ಬರಬೇಕೆಂಬುದು ರೈತರ ಆಸೆ: ಸಚಿವ ಶಿವಾನಂದ ಪಾಟೀಲ್

ರೈತರನ್ನು ಕಡೆಗಣಿಸಿದರೆ ಅವರ ಶಾಪಕ್ಕೆ ಸರ್ಕಾರ ಗುರಿ

“ಸಚಿವ ಶಿವಾನಂದ ಪಾಟೀಲ್​ ಹಿಂದೆಯೂ ಸಹ ರೈತರ ಆತ್ಮಹತ್ಯೆ ವಿಚಾರವಾಗಿ ಮಾತನಾಡಿದ್ದರು. ಪರಿಹಾರ ಜಾಸ್ತಿ ಸಿಗುತ್ತೆಂದು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದಿದ್ದರು. ಮೊದಲು ಒಂದು ಲಕ್ಷ ಪರಿಹಾರ ಇತ್ತು, ಈಗ 5 ಲಕ್ಷ ರೂ. ಕೊಡುತ್ತಾರೆ. ಅದಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೇಳಿದ್ದರು. ಇದು ರೈತ ವಿರೋಧಿ ಸರ್ಕಾರ, ಈ ಸರ್ಕಾರಕ್ಕೆ ನಾಚಿಕೆ ಆಗಬೇಕು. ಹಿಂದೆ ರೈತರ ಬಗ್ಗೆ ಹಗುರವಾಗಿ ಹೇಳಿದಾಗಲೂ ಕ್ರಮ ತೆಗೆದುಕೊಳ್ಳಲಿಲ್ಲ. ಮುಖ್ಯಮಂತ್ರಿಯಾದರೂ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ರೈತರನ್ನು ಕಡೆಗಣಿಸಿದರೆ ಅವರ ಶಾಪಕ್ಕೆ ಸರ್ಕಾರ ಗುರಿಯಾಗುತ್ತದೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್​ ಅಶೋಕ್​ ಹೇಳಿದ್ದಾರೆ.

ಮಂತ್ರಿಮಂಡಲದಲ್ಲಿ ಮುಂದುವರಿಯಬಾರದು

“ಶಿವಾನಂದ್ ಪಾಟೀಲ್ ಸ್ವತಃ ಒಬ್ಬ ರೈತರಾಗಿ ಇಂತ ಹೇಳಿಕೆ ದುರದೃಷ್ಟಕರ. ಮಂತ್ರಿ ಮಂಡಲದಲ್ಲಿ ಅವರು ಮುಂದುವರಿಯಬಾರದು. ಇದು ರೈತ ವಿರೋಧಿ ಸರ್ಕಾರ. ಸಾಲಮನ್ನಾಕ್ಕಾಗಿ ರೈತರು ಬರಗಾಲಕ್ಕಾಗಿ ಕಾಯುತ್ತಿದ್ದಾರೆ ಅನ್ನೋದು ಸೂಕ್ತವಲ್ಲ. ಅವರು ಮಾನಸಿಕರಾಗಿ ಅಸ್ವತ್ಥರಾಗಿದ್ದಾರೆ. ಕರ್ನಾಟಕಕ್ಕೆ ಅವರು ಅವಮಾನ ಮಾಡಿದ್ದಾರೆ. ತಕ್ಷಣವೇ ಸಚಿವ ಸ್ಥಾನದಿಂದ ವಜಾ ಆಗಬೇಕು” ಎಂದು ಶಾಸಕ ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...