ಸಾಫ್ಟ್‌ವೇ‌ರ್ ಉನ್ನತೀಕರಣ | ಮಾರ್ಚ್ 10 ರಿಂದ 19 ರವರೆಗೆ ಆನ್‌ಲೈನ್ ಸೇವೆ ಅಲಭ್ಯ

Date:

ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಸಲುವಾಗಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲ ಎಸ್ಕಾಂಗಳ ಆನ್‌ಲೈನ್ ಸೇವೆಗಳು ನಗರ ಪುದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

“ರಾಜ್ಯದ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್‌ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಆನ್‌ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ” ಎಂದು ಹೇಳಿದೆ.

“ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿದೆ. ಹಾಗಾಗಿ, ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು. ಆದರೆ, ಸಾಫ್ಟ್‌ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲ. ಈ ಸಂದರ್ಭದಲ್ಲಿ ಮಾಪಕ ಓದುಗರು ಗ್ರಾಹಕರಿಗೆ ಬಿಲ್ ಗಳನ್ನು ನೀಡಲಿದ್ದಾರೆ. ಆದರೆ, ಈ ಬಿಲ್ ಗಳನ್ನು ಮಾರ್ಚ್ 20 ರ ನಂತರವೇ ತಂತ್ರಾಂಶದಲ್ಲಿ ಅಪಲೋಡ್ ಮಾಡಲು ಸಾಧ್ಯವಾಗಲಿದೆ” ಎಂದು ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಡದಿ ಫಾರ್ಮ್‌ಹೌಸ್‌ನಲ್ಲಿ 25 ತಲೆಬುರುಡೆ, ಮೂಳೆಗಳು ಪತ್ತೆ

ಯಾವ ನಗರಗಳಲ್ಲಿ ಆನ್ಲೈನ್ಸೇವೆ ಇರುವುದಿಲ್ಲ

ಬೆಸ್ಕಾಂ

ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.

ಸೆಸ್ಕ್

ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.

ಮೆಸ್ಕಾಂ

ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಜೆಸ್ಕಾಂ

ಗುಲ್ಬರ್ಗ, ಮಾನವಿ, ಸಿಂಧನೂರು, ಬೀದರ್‌, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ಮಾಬಾದ್ ಹಾಗೂ ಹೊಸಪೇಟೆ.

ಹೆಸ್ಕಾಂ

ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ಈ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಪರಿಣಿತಿಹೊಂದಿದ ಮಾಹಿತಿ ತಂತ್ರಜ್ಞರ(IT) ತಂಡ 24/7 ಕಾರ್ಯನಿರ್ವಹಿಸಲಿದೆ. ಗ್ರಾಹಕರು ಸೇವಾ ಸ್ಥಗಿತ ಕಾಲದಲ್ಲಿ ಸಹಕರಿಸಬೇಕು ಎಂದು ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...