ಮಗನ ಕೊಂದ ಸಿಇಒ | ಮಾನಸಿಕ ಆರೋಗ್ಯ ತಪಾಸಣೆಗೆ ಗೋವಾ ಕೋರ್ಟ್ ಅನುಮತಿ

Date:

ಗೋವಾದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ತಮ್ಮ ನಾಲ್ಕು ವರ್ಷದ ಮಗನನ್ನು ಕೊಂದ ಬೆಂಗಳೂರಿನ ಕಂಪೆನಿಯೊಂದರ ಮಹಿಳಾ ಸಿಇಒ ಸುಚನಾ ಸೇಠ್ ಅವರ ಮಾನಸಿಕ ಆರೋಗ್ಯ ಸ್ಥಿತಿಯನ್ನು ಪರೀಕ್ಷಿಸಲು ಗೋವಾ ನ್ಯಾಯಾಲಯವು ಅನುಮತಿ ನೀಡಿದೆ.

ಸುಚನಾ ಸೇಠ್ ಅವರ ತಂದೆ ಮಾನಸಿಕ ಆರೋಗ್ಯ ಕಾಯಿದೆಯಡಿ ವೈದ್ಯರ ಮಂಡಳಿಯಿಂದ ಆಕೆಯ ಮಾನಸಿಕ ಸ್ಥಿತಿಯನ್ನು ಪರೀಕ್ಷಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ಸಮಯದಲ್ಲಿ ಆಕೆಯ ಮಾನಸಿಕ ಆರೋಗ್ಯದ ಸ್ಥಿತಿಯನ್ನು ಮೌಲ್ಯಮಾಪನ ಮಾಡುವಾಗ ಮಾನಸಿಕ ಅಸ್ವಸ್ಥತೆಯ ಲಕ್ಷಣಗಳು ಕಂಡಿಲ್ಲ ಎಂದು ಪೊಲೀಸರು ತಿಳಿಸಿ, ಈ ಮನವಿಯನ್ನು ತಿರಸ್ಕಾರ ಮಾಡಿ ವಿರೋಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ನ್ಯಾಯಾಲಯವೂ ಅರ್ಜಿಯನ್ನು ಅನುಮತಿಸಿದೆ. ಸುಚನಾ ಸೇಠ್ ಅವರ ಮಾನಸಿಕ ಸ್ಥಿತಿಯ ಹೊಸ ಪರೀಕ್ಷೆಗಾಗಿ ಪೊಲೀಸರು ವೈದ್ಯಕೀಯ ಮಂಡಳಿಯ ಮುಂದೆ ಹಾಜರುಪಡಿಸಬೇಕಾಗುತ್ತದೆ ಎಂದು ಸುಚನಾ ಸೇಠ್ ತಂದೆ ಪರ ವಕೀಲರು ತಿಳಿಸಿದ್ದಾರೆ.

ಜನವರಿಯಲ್ಲಿ ಆಕೆ ಬಂಧನದಲ್ಲಿದ್ದ ಅವಧಿಯಲ್ಲಿ ಆಕೆಯ ಮಾನಸಿಕ ಆರೋಗ್ಯದ ಮೌಲ್ಯಮಾಪನ ಸೇರಿದಂತೆ ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ. ಈ ವೇಳೆ, ಅವರು ತಮ್ಮ ಮೌಲ್ಯಮಾಪನಗಳಲ್ಲಿ ಸ್ಪಷ್ಟ ಮತ್ತು ತರ್ಕಬದ್ಧ ಉತ್ತರಗಳನ್ನು ನೀಡಿದ್ದಾರೆ. ಯಾವುದೇ ರೀತಿಯ ಸಕ್ರಿಯ ಸಾವಿನ ಆಶಯ ಅಥವಾ ಆತ್ಮಹತ್ಯೆ ಪ್ರವೃತ್ತಿಯನ್ನು ವರದಿ ಮಾಡಿಲ್ಲ. ಆಕೆಯ ಪ್ರತಿಕ್ರಿಯೆಗಳಲ್ಲಿ ಯಾವುದೇ ವಿಕೃತ ಮನಸ್ಥಿತಿಯ ಲಕ್ಷಣಗಳು ಕಂಡುಬಂದಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಸಾಲು ಸಾಲು ರಜೆ | ಕೆಎಸ್‌ಆರ್‌ಟಿಸಿಯಿಂದ 1,500 ವಿಶೇಷ ಬಸ್‌ ಸಂಚಾರ

ಏನಿದು ಘಟನೆ?

ಗೋವಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕ್ಯಾಂಡೋಲಿಮ್ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಸುಚನಾ ಸೇಠ್ ತಮ್ಮ ಮಗನನ್ನು ಕೊಂದ ಆರೋಪ ಹೊತ್ತಿದ್ದಾರೆ.

ಕೊಲ್ಕತ್ತಾ ಮೂಲದ ಸುಚನಾ ಸೇಠ್ 2008-09ರಲ್ಲಿ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಇಲ್ಲಿ ಸ್ಟಾರ್ಟ್​​ಅಪ್​ ಕಂಪನಿಯೊಂದು ಪ್ರಾರಂಭಿಸಿದ್ದರು. ಕಂಪನಿಯ ಸಿಇಒ ಆಗಿರುವ ಸುಚನಾ ಅವರು ಇಲ್ಲಿಯೇ ತಮಿಳುನಾಡು ಮೂಲದ ಟೆಕ್ಕಿ ವೆಂಕಟರಮಣ ಜೊತೆ ವಿವಾಹವಾಗಿದ್ದರು. ನಂತರ ದಂಪತಿ ನಡುವೆ ಮನಸ್ತಾಪವಾಗಿದೆ. ಬಳಿಕ, ಸುಚನಾ 2020ರಲ್ಲಿ ಪತಿಯಿಂದ ದೂರವಾಗಿ, ವಿಚ್ಛೇದನ ಪಡೆದಿದ್ದರು.

ಜನವರಿ 8 ರಂದು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಿಂದ ತನ್ನ ಮಗನ ದೇಹವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದಾಗ ಅವರನ್ನು ಬಂಧಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...