ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

Date:

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು ಜನರು ಕಂಗಾಲಾಗಿದ್ದಾರೆ. ಮಳೆಯಿಲ್ಲದೇ, ರೈತರ ಬೆಳೆ ಕೈಗೆ ಹತ್ತದಂತಾಗಿದೆ. ಇಗೀಗ, ರಾಜ್ಯದ ಕೆಲವೆಡೆ ತುಂತುರು ಮಳೆಯಾಗುತ್ತಿದ್ದು, ಪೂರ್ಣ ಪ್ರಮಾಣದಲ್ಲಿ ಮಳೆ ಬೀಳುತ್ತಿಲ್ಲ. ಈ ಹಿನ್ನೆಲೆ, ನಾಡಿನಲ್ಲಿ ಮಳೆ-ಬೆಳೆ ಚೆನ್ನಾಗಿ ಆಗಲೆಂದು ಬೆಂಗಳೂರು ಪೂರ್ವ ತಾಲೂಕಿನ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು ವಿಶೇಷ ಜಾತ್ರೆ ನಡೆಸಿದರು.

ಮಳೆ-ಬೆಳೆ ಚೆನ್ನಾಗಿ ಆಗಿ ಬರಗಾಲ ನಿವಾರಣೆಯಾಗಲಿ ಎಂದು ಬೆಂಗಳೂರು ಪೂರ್ವ ತಾಲೂಕಿನ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು ವಿಶೇಷ ಜಾತ್ರೆ ನಡೆಸಿದ್ದಾರೆ. ಈ ವೇಳೆ, ಗ್ರಾಮಸ್ಥರು ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ದೇವರ ಬಳಿ ಪ್ರಾರ್ಥನೆ ಮಾಡಿದ್ದಾರೆ.

ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಈ ಸಂಪ್ರದಾಯ ಮಾಡಿಕೊಂಡು ಬರುತ್ತಿದ್ದಾರೆ. ತೀವ್ರ ಬರಗಾಲ ಹಾಗೂ ಸಂಕಷ್ಟ ಎದುರಾದಾಗ ಪ್ರತಿ ಐದು ವರ್ಷಕ್ಕೊಮ್ಮೆ ಈ ಜಾತ್ರೆಯನ್ನು ಮಾಡಿಕೊಂಡು ಬರುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು ಗ್ರಾಮದ ಸಿದ್ಧೇಶ್ವರ ದೇವರ ಮೆರವಣಿಗೆ ನಡೆಸಿದರು. ತಲೆಯ ಮೇಲೆ ದೇವರನ್ನು ಹೊತ್ತು ಊರ ಹೊರಗಡೆ ವರೆಗೂ ಬಂದು ನಂತರ ನೀರಿನಲ್ಲಿ ದೇವರನ್ನಿಟ್ಟು ಪೂಜೆ ನೇರವೇರಿಸಿದರು.

ಈ ಸುದ್ದಿ ಓದಿದ್ದೀರಾ? ಅನಾರೋಗ್ಯ ಹಿನ್ನೆಲೆ; ರಾಹುಲ್ ಗಾಂಧಿ ಕೇರಳ ಚುನಾವಣಾ ಪ್ರಚಾರ ರದ್ದು

ಇದೇ ವೇಳೆ, ಸಾಂಪ್ರಾದಾಯಿಕವಾಗಿ ಈ ಹಿಂದಿನಿಂದ ನಡೆದುಕೊಂಡು ಬಂದಿರುವಂತೆ ಹಾಲುಮತ ಸಮುದಾಯದಿಂದ ಭಕ್ತರ ತಲೆಯ ಮೇಲೆ ತೆಂಗಿನಕಾಯಿ ಒಡೆಯುವ ಮೂಲಕ ಮಳೆ ಬೆಳೆಗೆ ಪ್ರಾರ್ಥನೆ ಮಾಡಿದರು.

ಜಾತ್ರೆ ಹಿನ್ನೆಲೆ, ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮಹಿಳೆಯರು, ಮಕ್ಕಳು ಎಲ್ಲರೂ ತೋಟದ ಬಳಿ ಬಂದು ತೆಂಗಿನಕಾಯಿ ಒಡೆಯುವುದನ್ನ ನೋಡಿದರು. ನಾನಾ ಕಲಾ ತಂಡಗಳು ಜನರ ಮುಂದೆ ಹೆಜ್ಜೆ ಹಾಕಿದರು. ಗೋಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು.

ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಬಿಸಿಲಿನ ಶಾಖಕ್ಕೆ ಜನರು ಬೇಸತ್ತಿದ್ದಾರೆ. ತಂಪಾದ ಪಾನೀಯಗಳಿಗೆ ಹೆಚ್ಚಾಗಿ ಮೊರೆ ಹೋಗಿದ್ದಾರೆ. ಗ್ರಾಮಸ್ಥರ ಈ ವಿಶೇಷ ಜಾತ್ರೆ ಬಳಿಕ ಮಳೆಯಾಗುತ್ತಾ ಕಾದು ನೋಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...