ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಆ. 22ರಂದು ಕಾಂಗ್ರೆಸ್ ಶಾಸಕಾಂಗ ಸಭೆ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಈ ವಿಷಯ ಕುರಿತು ಚರ್ಚಿಸಲು ಆಗಸ್ಟ್ 22ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಂದು ಸಂಜೆ 4 ಗಂಟೆಗೆ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ತಿಳಿಸಿವೆ.

ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯ ವಿರುದ್ಧ ಕಾನೂನು ಸಮರದ ಜೊತೆ ರಾಜಕೀಯ ಹೋರಾಟಕ್ಕೂ ಕಾಂಗ್ರೆಸ್ ಪಕ್ಷದ ನಾಯಕರು ಈಗಾಗಲೇ ನಿರ್ಧರಿಸಿದ್ದಾರೆ. ರಾಜಕೀಯ ಹೋರಾಟವನ್ನು ಯಾವ ರೀತಿಯಲ್ಲಿ ಕೈಗೊಳ್ಳಬೇಕು ಎಂಬ ಬಗ್ಗೆ ಶಾಸಕರ ಅಭಿಪ್ರಾಯ ಆಲಿಸಲು ಮತ್ತು ಈ ಬಗ್ಗೆ ಚರ್ಚೆ ನಡೆಸಲು ಸಭೆ ಆಯೋಜಿಸಲಾಗಿದೆ ಎಂದೂ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಕಚೇರಿಯು ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನವನ್ನು ಈ ರಾಜ್ಯ ಸಹಿಸಲ್ಲ

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸೋಮವಾರವೇ (ಆಗಸ್ಟ್ 19) ಹೈಕೋರ್ಟ್ ಮೆಟ್ಟಿಲೇರಲು ಚರ್ಚೆ ನಡೆದಿದೆ. ಎಐಸಿಸಿ ಕಾನೂನು ಘಟಕದ ಅಧ್ಯಕ್ಷ ಅಭಿಷೇಕ್ ಮನು ಸಿಂಘ್ವಿ ಅವರ ಜೊತೆ ಈಗಾಗಲೇ ರಾಜ್ಯ ನಾಯಕರು ಮತ್ತು ವರಿಷ್ಠರು ಚರ್ಚೆ ನಡೆಸಿದ್ದಾರೆ.

ಎಚ್.ಡಿ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧದ ಪ್ರಕರಣಗಳಲ್ಲಿ ತನಿಖಾ ವರದಿಯ ಸಹಿತ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತವು ಈ ಹಿಂದೆಯೇ ಮನವಿ ಸಲ್ಲಿಸಿದ್ದರೂ ರಾಜ್ಯಪಾಲರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆದರೆ, ಸಿದ್ದರಾಮಯ್ಯ ವಿಚಾರದಲ್ಲಿ ಯಾವುದೇ ತನಿಖೆ ನಡೆಯದಿದ್ದರೂ ತರಾತುರಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ತಾರತಮ್ಯ ನೀತಿಯನ್ನು ಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಲಾಗಿದೆ ಎಂದೂ ಮೂಲಗಳು ಹೇಳಿವೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...