ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ್

Date:

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದ್ದು, ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಾಧಕ ಬಾಧಕ ಗಮನಿಸಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪಟಾಕಿ ನಿಷೇಧ ಪ್ರಾಯೋಗಿಕ ಜಾರಿಗೊಳಿಸಿ ಯಶಸ್ವಿಯಾದರೆ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು. ಇತ್ತೀಚೆಗೆ ಪಟಾಕಿ ಅವಘಡಗಳಲ್ಲಿ ಅಮಾಯಕರು ಮೃತಪಟ್ಟಿದ್ದಾರೆ. ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು” ಎಂದು ಜಿ ಪರಮೇಶ್ವರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಷಾಹಾರ ಸೇವನೆ: ಅಲಿಗಢ ಮುಸ್ಲಿಂ ವಿವಿಯ 300ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮ ದಸ್ತಾನು ಪರಿಶೀಲನೆ ವೇಳೆ ತಹಸೀಲ್ದಾರ್ ಸೇರಿದಂತೆ ಕಂದಾಯ ಅಧಿಕಾರಿಗಳು, ಪೊಲೀಸ್, ಅಗ್ನಿಶಾಮಕ ಮತ್ತು ಸಾರಿಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಗಡಿಯಲ್ಲಿ ಆರ್‌ಟಿಓ ಅಧಿಕಾರಿಗಳು ಪರಿಶೀಲಿಸಿ ಕ್ರಮ ವಹಿಸಿಲ್ಲ. ಹಾಗಾಗಿ ತಹಸೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ಭೇಟಿ

ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಗೃಹ ಇಲಾಖೆ ಸಚಿವ ಪರಮೇಶ್ವರ್​ ಇಂದು ಭೇಟಿ ಮಾಡಿದ್ದು, ಘಟನೆ ಅಗ್ನಿಶಾಮಕ ಡಿಐಜಿ ಪಂತ್, ಐಜಿಪಿ ರವಿಕಾಂತೇಗೌಡರಿಂದ ಮಾಹಿತಿ ಪಡೆದುಕೊಂಡಿದ್ದಾರೆ.​ ಮಳಿಗೆ ಮಾಲೀಕನ ಬಗ್ಗೆ ಡಿಸಿ ದಯಾನಂದ್ ಅವರಿಂದ ಮಾಹಿತಿ ಪಡೆದರು.

ಸ್ಥಳದಲ್ಲಿ ಬೆಂಗಳೂರು ಜಿಲ್ಲಾಧಿಕಾರಿ ದಯಾನಂದ್, ಎಎಸ್ಪಿ ಪುರುಷೋತ್ತಮ್, ಡಿವೈಎಸ್ಪಿ ಮೋಹನ್, ತಹಸೀಲ್ದಾರ್ ಶಿವಪ್ಪ ಲಮ್ಹಾಣಿ ಸೇರಿದಂತೆ ಪ್ರಮುಖರು ಹಾಜರಿದ್ದರು.

ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಪಟಾಕಿ ಮಳಿಗೆ ಮಾಲೀಕರು 2017 ರಿಂದ 2022 ವರೆಗೆ ನೂತನ ಪರವಾನಗಿ ನವೀಕರಣ ನಡುವೆ ನಕಲಿ ಲೈಸೆನ್ಸ್ ಸೃಷ್ಟಿ ಮಾಡಿದ್ದಾರೆ. ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ. ಆದರೆ 50 ಟನ್​ಗೂ ಅಧಿಕ ಪಟಾಕಿ ಅಕ್ರಮವಾಗಿ ದಸ್ತಾನು ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...