ಜಗದೀಶ್ ಶೆಟ್ಟರ್‌ಗೆ ಕರೆ ಮಾಡಿ ಗಾಳ ಹಾಕಿದ್ರಾ ಸುರ್ಜೇವಾಲಾ?

Date:

  • ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್
  • ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿದ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ

ಶಾಸಕ ಸ್ಥಾನದಿಂದ ರಾಜೀನಾಮೆ ನೀಡಿ ಬಿಜೆಪಿಯಿಂದ ಹೊರಬಂದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ತನ್ನತ್ತ ಸೆಳೆದುಕೊಳ್ಳಲು ಕಾಂಗ್ರೆಸ್‌ ತೆರೆ ಮರೆಯಲ್ಲಿ ಪ್ರಯತ್ನ ನಡೆಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಅವರಿಗೆ ಗಾಳ ಹಾಕಿದ್ದಾರೆ ಎನ್ನಲಾಗಿದೆ.

“ನೀವು ಕಾಂಗ್ರೆಸ್ಸಿಗೆ ಬನ್ನಿ. ನಿಮಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ” ಎಂದು ಸುರ್ಜೇವಾಲ ಅವರು ಶೆಟ್ಟರ್‌ ಅವರಿಗೆ ಕರೆ ಮೂಲಕ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುರ್ಜೇವಾಲ ನೀಡಿರುವ ಆಫರ್‌ ಬಗ್ಗೆ ಶೆಟ್ಟರ್ ಪ್ರತಿಕ್ರಿಯಿಸಿ, “ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿಯಾಗಿಲ್ಲ. ನಮ್ಮ ಕ್ಷೇತ್ರಕ್ಕೆ ಸೂಕ್ತ ಅನುದಾನ ಕಲ್ಪಿಸಿದರೆ ಸಾಕು” ಎನ್ನುವ ಇಂಗಿತ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಈಗಾಗಲೇ ಜಗದೀಶ್‌ ಶೆಟ್ಟರ್‌ ಅವರನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಕೆರೆ ತರಲು ಡಿ ಕೆ ಶಿವಕುಮಾರ್‌ ಹೆಸರಲ್ಲಿ ಎರಡು ಹೆಲಿಕಾಪ್ಟರ್‌ ಬುಕ್‌ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ತಮ್ಮ ಬೆಂಬಲಿಗರ ಜೊತೆಗೆ ಸಭೆ ನಡೆಸಿ ಕಾಂಗ್ರೆಸ್‌ ಸೇರುವುದು ಖಚಿತವಾದಲ್ಲಿ ಮಧ್ಯಾಹ್ನ ನಂತರ ಬೆಂಗಳೂರಿಗೆ ಶೆಟ್ಟರ್‌ ಆಗಮಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೋಲಾರಕ್ಕೆ ಆಗಮಿಸಿದ್ದು, ಶೆಟ್ಟರ್‌ ಅವರು ಕಾಂಗ್ರೆಸ್‌ ಆಯ್ಕೆ ಮಾಡಿಕೊಂಡಲ್ಲಿ ಈ ಎಲ್ಲ ನಾಯಕರ ಸಮ್ಮುಖದಲ್ಲಿ ಶೆಟ್ಟರ್‌ ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್ಸಿಗೆ ಬರುತ್ತಾರೆ ಎಂದರೆ ನಾವು ಸ್ವಾಗತಿಸುತ್ತೇವೆ” ಎಂದು ಹೇಳಿದ್ದಾರೆ.

ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್‌ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿ, “ಜಗದೀಶ್‌ ಶೆಟ್ಟರ್‌ ಒಬ್ಬ ಪ್ರಾಮಾಣಿಕ ರಾಜಕಾರಣಿ. ಕಪ್ಪು ಚುಕ್ಕೆ ಇಲ್ಲದೇ ಮುಖ್ಯಮಂತ್ರಿ ಸ್ಥಾನ ನಿಭಾಯಿಸಿದ್ದಾರೆ. ಅವರು ಕಾಂಗ್ರೆಸ್ಸಿಗೆ ಬರುತ್ತಾರೆ ಎಂದರೆ ಸೂಕ್ತ ಸ್ಥಾನಮಾನ ನೀಡಿ ಬರಮಾಡಿಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ಸೇರ್ಪಡೆ ವಿಚಾರ ಸೇರಿದಂತೆ ಎಲ್ಲ ಆಯ್ಕೆಗಳು ತೆರೆದಿವೆ. ಕಾಂಗ್ರೆಸ್ ನವರು ತಮ್ಮ ಪ್ರತಿನಿಧಿ ಕಳಿಸಿದ್ದಾರೆ.ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹಿತೈಷಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ” ಎಂದು ಜಗದೀಶ್‌ ಶೆಟ್ಟರ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...